ಉಡುಪಿಯಲ್ಲಿ ಯುವತಿ ಮೇಲೆ ಹಲ್ಲೆ ನಡೆಸಿದ ಹಾಸ್ಟೆಲ್ ವಾರ್ಡನ್
ಉಡುಪಿ, ನವೆಂಬರ್. 07: ಯುವತಿಯೊಬ್ಬಳ ಮೇಲೆ ಹಾಸ್ಟೆಲ್ ವಾರ್ಡನ್ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ಇಸಿಆರ್ ಕಾಲೇಜು ಲೇಡಿಸ್ ಹಾಸ್ಟೆಲ್ ನಲ್ಲಿ ಆಂಧ್ರ ಮೂಲದ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ವಾರ್ಡನ್ ನಿಂದ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದಾಳೆ.
ಹಲ್ಲೆಗೊಳಗಾದ ವಿದ್ಯಾರ್ಥಿನಿಯ ಹೆಸರು ಜ್ಯೋತ್ಸ್ನಾ. ಸದ್ಯ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. "ಹಾಸ್ಟೆಲ್ ವಾರ್ಡನ್ ಅನಿಷಾ ನನಗೆ ತೊಂದರೆ ಕೊಡುತ್ತಿದ್ದಾರೆ ಎಂದು ಕಾಲೇಜು ಪ್ರಿನ್ಸಿಪಾಲ್ ಬಳಿ ಜ್ಯೋತ್ಸ್ನಾ ದೂರು ನೀಡಿದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ" ಎಂದು ಆರೋಪಿಸಲಾಗಿದೆ.
ಕಾಂಗ್ರೆಸ್ ನಾಯಕನ ಪುತ್ರನಿಂದ ಪ್ರಾಂಶುಪಾಲರ ಮೇಲೆ ಹಲ್ಲೆ
ಘಟನೆ ವೇಳೆ ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯರಾದ ಮಾಳುಕೃಷ್ಣ, ಅಥಿರಾ, ಮೋಳ್, ಆರ್ಯ ಮತ್ತು ಸನು ಹಲ್ಲೆಗೆ ಸಹಕರಿಸಿದ್ದಾರೆ ಎಂದು ತಿಳಿದುಬಂದಿದೆ.
"ಹಾಸ್ಪಿಟಲ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಕಾಲೇಜಿನ ಡೈರೆಕ್ಟರ್ ಮಹಿಮಾ, ಚೇರ್ ಮೆನ್ ಮಧುಸೂಧನ ಮತ್ತು ರಿಯಾಜ್ ಗಲಾಟೆ ತಪ್ಪಿಸಿ ನನ್ನನ್ನು ಆಸ್ಪತ್ರೆಗೆ ದಾಖಲಿಸಿದ ನಿಹಾರಿಕಾ ಮತ್ತು ಹರಿಕಾ ಅವರಿಗೂ ಅವಾಚ್ಯವಾಗಿ ಬೈದು ಜೀವ ಬೆದರಿಕೆ ಹಾಕಿರುವುದಾಗಿ" ಜ್ಯೋತ್ಸ್ನಾ ತಿಳಿಸಿದ್ದಾರೆ.
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಗೂಂಡಾಗಿರಿ, ಯುವಕರಿಬ್ಬರ ಮೇಲೆ ಹಲ್ಲೆ
ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.