ನಾಪತ್ತೆಯಾದ ಮೀನುಗಾರರು ಸುರಕ್ಷಿತವಾಗಿ ಬರುತ್ತಾರೆ ಎಂಬ ನಂಬಿಕೆಯಿದೆ: ಜಯಮಾಲ
ಉಡುಪಿ, ಜನವರಿ 07: ಕಡಲಿನೊಂದಿಗೆ ಸಂಘರ್ಷಕ್ಕೆ ಇಳಿದು ಬದುಕನ್ನು ಕಟ್ಟಿಕೊಳ್ಳುವ ಮೀನುಗಾರರನ್ನು ಯಾರೂ ಕೂಡ ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ. 7 ಮಂದಿ ಮೀನುಗಾರರು ನಾಪತ್ತೆಯಾದ ಪ್ರಕರಣ ದಾಖಲಾದ ಮರುದಿನದಿಂದಲೇ ರಾಜ್ಯ ಸರಕಾರ ಶೋಧ ಕಾರ್ಯಾಚರಣೆ ಆರಂಭಿಸಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಹೇಳಿದ್ದಾರೆ.
ಮಲ್ಪೆ ಮೀನುಗಾರರ ಸಂಘದಿಂದ ಜ.06 ಭಾನುವಾರದಂದು ಮನವಿ ಸ್ವೀಕರಿಸಿ ಮಾತನಾಡಿದ ಅವರು, ನಿಮ್ಮ ನೋವು ನಮಗೆ ಅರ್ಥ ಆಗುತ್ತದೆ. ಏಳು ಕುಟುಂಬದ ಜೊತೆ ಇಡೀ ಕರ್ನಾಟಕವೇ ಇದೆ.
ಮಹಾರಾಷ್ಟ್ರ, ಗೋವಾ, ಕೇರಳ ಎಲ್ಲಾ ಸರಕಾರಗಳ ಜೊತೆ ಸೇರಿ ಶೋಧ ಕಾರ್ಯ ಮಾಡುತ್ತಲೇ ಇದ್ದೇವೆ. ದಿನಕ್ಕೆ ನಾಲ್ಕು ಗಂಟೆಗಳ ಕಾಲ ಹೆಲಿಕಾಪ್ಟರ್ ನಲ್ಲಿ ಕುರುಹುಗಳಿಗಾಗಿ ಹುಡುಕಾಟ ಮಾಡುತ್ತಿದ್ದೇವೆ. ಏಳು ಜೀವಗಳು ಸುರಕ್ಷಿತವಾಗಿ ಬರುತ್ತದೆ ಎಂಬ ನಂಬಿಕೆಯಲ್ಲಿ ನಾನು ಕೂಡ ಇದ್ದೇನೆ. ಅವರನ್ನು ಹುಡುಕಿ ತರುವುದು ನಮ್ಮ ಜವಾಬ್ದಾರಿ. ಇದಕ್ಕೆ ಸರಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.

ಈ ನಿಟ್ಟಿನಲ್ಲಿ ನೌಕಪಡೆ ಕೂಡ ಕೆಲಸ ಮಾಡುತ್ತಿದ್ದು, ಮುಖ್ಯಮಂತ್ರಿ ಮತ್ತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಕೇಂದ್ರ ಸರಕಾರದ ನೆರವು ಪಡೆದುಕೊಂಡು ರಾಜ್ಯ ಸರಕಾರ ಎಲ್ಲ ರೀತಿಯ ಕೆಲಸ ಮಾಡುತ್ತದೆ ಎಂದು ಜಯಮಾಲ ತಿಳಿಸಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications