ಉಡುಪಿ ಪರ್ಯಾಯ ಎಂದರೇನು..? ಕೃಷ್ಣನೂರಿನಲ್ಲಿ ಈ ಬಾರಿ ಪರ್ಯಾಯದ ವಿಶೇಷತೆ ಏನು?
ಉಡುಪಿ, ಜನವರಿ 17: ಕೃಷ್ಣ ನಗರಿ ಉಡುಪಿಯಲ್ಲಿ ಪರ್ಯಾಯ ಮಹೋತ್ಸವದ ಸಂಭ್ರಮ ನಡೆಯುತ್ತಿದೆ. ಕೃಷ್ಣ ಮಠದ ದ್ವೈವಾರ್ಷಿಕ ಉತ್ಸವವಾಗಿರುವ ಪರ್ಯಾಯ ಮಹೋತ್ಸವ ದಲ್ಲಿ ಈ ಬಾರಿ ಪುತ್ತಿಗೆ ಶ್ರೀಗಳು ಪರ್ಯಾಯ ಪೀಠಾರೋಹಣ ಮಾಡಲಿದ್ದಾರೆ.
ಉಡುಪಿ ಕೃಷ್ಣ ಮಠದ ವ್ಯಾಪ್ತಿಯಲ್ಲಿ ಒಟ್ಟು 8 ಮಠಗಳಿವೆ. ಕಾಣಿಯೂರು ಮಠ, ಸೋದೆ ಮಠ, ಪುತ್ತಿಗೆ ಮಠ, ಅದಮಾರು ಮಠ, ಪೇಜಾವರ ಮಠ, ಪಲಿಮಾರು ಮಠ, ಕೃಷ್ಣಾಪುರ ಮಠ, ಶೀರೂರು ಮಠಗಳಾಗಿವೆ. 2 ವರ್ಷಕೊಮ್ಮೆ ಅಷ್ಟಮಠಗಳ ಪೈಕಿ ಕೃಷ್ಣ ಮಠದ ಪೂಜಾ ಕೈಂಕರ್ಯದ ಹಾಗೂ ಮಠದ ಅಧಿಕಾರ ಹಸ್ತಾಂತರ ನಡೆಯುತ್ತದೆ.

ಒಂದು ಸುತ್ತು ಅಂದರೆ 12 ವರ್ಷಗಳ ಬಳಿಕ ಪೂಜಾ ಕೈಂಕರ್ಯದ ಅವಕಾಶ ಒಲಿದು ಬರುತ್ತದೆ. ಕೃಷ್ಣ ಮಠದ ಪೂಜೆಯ ಅಧಿಕಾರ ಹಸ್ತಾಂತರದ ಸುಸಂದರ್ಭವನ್ನು ಪರ್ಯಾಯ ಮಹೋತ್ಸವ ಎಂದು ಕರೆಯುತ್ತಾರೆ..ಕಳೆದ ಬಾರಿ ಕೃಷ್ಣಾಪುರ ಮಠದ ಶ್ರೀ ವಿದ್ಯಾ ಸಾಗರತೀರ್ಥ ಸ್ವಾಮೀಜಿಗಳು ಪರ್ಯಾಯ ಪೀಠಾರೋಹಣ ಮಾಡಿದ್ದರು.
ಈ ಬಾರಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಯಿಂದ ನಾಲ್ಕನೇ ಬಾರಿ ಪರ್ಯಾಯ ಪೀಠಾರೋಹಣ ನಡೆಯಲಿದೆ. ಸುಮಾರು 500 ವರ್ಷಗಳಿಗೂ ಅಧಿಕ ಇತಿಹಾಸವನ್ನು ಉಡುಪಿ ಪರ್ಯಾಯ ಮಹೋತ್ಸವ ಹೊಂದಿದೆ. ಪ್ರತಿ ಎರಡು ವರ್ಷಕೊಮ್ಮೆ ಜನವರಿ 18 ರಂದು ಪರ್ಯಾಯ ಉತ್ಸವ ನಡೆಯುತ್ತದೆ. ಈ ಬಾರಿಯದ್ದು 252ನೇ ಪರ್ಯಾಯ ಮಹೋತ್ಸವವಾಗಿದ್ದು, ಪುತ್ತಿಗೆ ಮಠದ ನಾಲ್ಕನೇ ಪರ್ಯಾಯಕ್ಕೆ ಕ್ಷಣಗಣನೆ ಆರಂಭವಾಗಿದೆ.
ಪರ್ಯಾಯ ಮಹೋತ್ಸವ ಹಿನ್ನಲೆಯಲ್ಲಿ ಸ್ವಚ್ಛಗೊಂಡು ಉಡುಪಿ ನಗರದ ಬೀದಿಗಳು ಸಿಂಗಾರಗೊಂಡಿದೆ.ಪರ್ಯಾಯ ಮಹೋತ್ಸವ ಕ್ಕೆ ಪ್ರತಿದಿನ 15 ರಿಂದ 20 ಸಾವಿರ ಭಕ್ತರ ಆಗಮನವಾಗುತ್ತಿದೆ.ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಯಿಂದ ನಾಲ್ಕನೇ ಬಾರಿ ಪರ್ಯಾಯ ಪೀಠೋಹರಣವಾಗುತ್ತಿದೆ.

ಪರ್ಯಾಯ ಕಾಲದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತದೆ. ಕನಕದಾಸ ಮಂಟಪ ವೇದಿಕೆಯಲ್ಲಿ ನಿತ್ಯ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಉಡುಪಿ ವಿವಿಧ ಭಾಗಗಳಲ್ಲಿ ವೇದಿಕೆ ಸಜ್ಜಾಗಿದ್ದು, ರಥ ಬೀದಿ ,ಪಾರ್ಕಿಂಗ್, ಪಿಪಿಸಿ ಕಾಲೇಜ್, ಜೋಡುಕಟ್ಟೆ ಸೇರಿದಂತೆ ವಿಧದ ಕಡೆ ವೇದಿಕೆ ನಿರ್ಮಾಣ ಮಾಡಲಾಗಿದೆ. ಎಲ್ಲಾ ವೇದಿಕೆಯಲ್ಲಿ ಭಜನೆ ,ಸಂಗೀತ ರಸಮಂಜರಿ ಯಕ್ಷಗಾನ, ನಾಟಕ ಕಾರ್ಯಕ್ರಮ ನಡೆಯಲಿದೆ.
ಉಡುಪಿ ಕೃಷ್ಣ ಮಠದ ಪರ್ಯಾಯ ಪೀಠಾಧಿಪತಿಗಳಿಗೂ ಹಲವು ನಿಯಮಗಳಿವೆ. ಪೀಠಾರೋಹಣದ ಬಳಿಕ ಕೃಷ್ಣ ಮಠದ ರಥಬೀದಿ ಬಿಟ್ಟು ಹೋಗುವಂತಿಲ್ಲ. ಹೊರಗಿನ ಇತರೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ. ಉಡುಪಿ ಶ್ರೀ ಕೃಷ್ಣನ ಪೂಜ ಕೈಂಕರ್ಯವೇ ಮೂಲ ಜವಾಬ್ದಾರಿಯಾಗಿದೆ.
ಆದರೆ ಸದ್ಯ ಪರ್ಯಾಯ ಏರುತ್ತಿರುವ ಪುತ್ತಿಗೆ ಶ್ರೀ 2008ರಲ್ಲಿ ಪುತ್ತಿಗೆ ಶ್ರೀ ಸಮುದ್ರ ಉಲ್ಲಂಘನೆ ಮಾಡಿದ್ದ ಬಗ್ಗೆ ಅಸಮಾಧಾನವಿದೆ. ಅಷ್ಠ ಮಠದ ಯತಿಗಳು ಸಮುದ್ರ ದಾಟಿ ವಿದೇಶಕ್ಕೆ ಹೋಗಬಾರದು ಎಂಬ ನಿಯಮವಿದೆ. ಆದರೆ ವಿದೇಶಕ್ಕೆ ಹೋಗಿ ಕೃಷ್ಣನ ಆರಾಧನೆಗೈದಿದ್ದ ಪುತ್ತಿಗೆ ಶ್ರೀ ವಿರುದ್ಧ ಮಠಾಧಿಪತಿಗಳ ಅಸಮಾಧಾನ ಇದೆ. ಸಮುದ್ರ ಉಲ್ಲಂಘನೆ ಮಾಡಿದ್ದ ಹಿನ್ನಲೆ ಪುತ್ತಿಗೆ ಪರ್ಯಾಯವನ್ನು ಇತರೆ ಯತಿಗಳು ಬಹಿಷ್ಕಾರ ಮಾಡಿದ್ದರು. 2008ರಲ್ಲಿ ಪುತ್ತಿಗೆ ಪರ್ಯಾಯಕ್ಕೆ ಉಳಿದ 6 ಮಠದ ಸ್ವಾಮೀಜಿಗಳು ಗೈರಾಗಿದ್ದರು. ಈ ಬಾರಿಯೂ ಗೊಂದಲಗಳೊಂದಿಗೆ ಪುತ್ತಿಗೆ ಪರ್ಯಾಯ ಕೂಡಿದೆ. ಈ ಬಾರಿಯ ಪುತ್ತಿಗೆ ಪರ್ಯಾಯಕ್ಕೆ ಭಾಗಿಯಾಗುತ್ತಾರ ಇತರೆ ಯತಿಗಳು ಎಂಬುವುದು ಕುತೂಹಲಕಾರಿಯಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications