ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತ ವ್ಯಕ್ತಿ ನನ್ನ ಪರಿಚಿತ'

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಫೆಬ್ರವರಿ 26 : ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಯಾರನ್ನೋ ಹಿಡಿದು, ಹಂತಕರು ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಯಾರನ್ನೋ ಬಂಧಿಸಿ, ಅವರನ್ನೇ ಆರೋಪಿಗಳು ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಗೌರಿ ಲಂಕೇಶ್ ಹತ್ಯೆ ಕೇಸಲ್ಲಿ ಸಿಕ್ಕಿದೆ ಬಿಗ್ ಲೀಡ್ಗೌರಿ ಲಂಕೇಶ್ ಹತ್ಯೆ ಕೇಸಲ್ಲಿ ಸಿಕ್ಕಿದೆ ಬಿಗ್ ಲೀಡ್

ಇದು ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದಲ್ಲಿ ಸರಕಾರದ ವೈಫಲ್ಯವನ್ನು ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಗೌರಿ ಲಂಕೇಶ್, ಕಲ್ಬುರ್ಗಿ ಹಂತಕರನ್ನು ಇದುವರೆಗೂ ಹಿಡಿಯಲು ರಾಜ್ಯ ಸರಕಾರಕ್ಕೆ ಸಾಧ್ಯವಾಗಿಲ್ಲ ಎಂದು ಹೇಳಿದರು.

Who arrested in Gauri Lankesh murder case, I know him: Muthalik

ಈ ಎರಡು ಪ್ರಕರಣಗಳು ಗೃಹ ಇಲಾಖೆಗೆ ಎದುರಾದ ಸವಾಲು. ಈಗ ಬಂಧಿತ ಆಗಿರುವವನು ನನ್ನ ಪರಿಚಯದ ಹಿಂದೂ ಸಂಘಟನೆ ಕಾರ್ಯಕರ್ತ. ಆತ ಕೊಲೆ ಮಾಡುವಂತಹ ಹುಡುಗನಲ್ಲ ಎಂದು ಹೇಳಿದ ಅವರು, ಆತನಲ್ಲಿ ಪಿಸ್ತೂಲು ಸಿಕ್ಕಿದ ಮಾತ್ರಕ್ಕೆ ಕೊಲೆ ಮಾಡಿರಲು ಸಾಧ್ಯವಿಲ್ಲ. ರಾಜ್ಯ ಸರಕಾರ ತನ್ನ ವೈಫಲ್ಯ ಮರೆ ಮಾಚಲು ಈ ರೀತಿ ವರ್ತಿಸುತ್ತಿದೆ ಎಂದು ಅವರು ಹೇಳಿದರು.

English summary
Police misleading the Gauri Lankesh murder case, alleged Sri Rama sene founder Pramod Muthalik. Who arrested in the case, belongs to pro hindu organisation. I know him, he is not such person, further added by Muthalik in Udupi on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X