ಹಾಲು ಕರೆಯುತ್ತಿದ್ದಾಗ ಹಟ್ಟಿ ಗೋಡೆ ಕುಸಿದು ಮಹಿಳೆ ಸಾವು
ಉಡುಪಿ, ಆಗಸ್ಟ್ 8: ಹಾಲು ಕರೆಯುವಾಗ ಮನೆಯ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಉತ್ತಮ ಮಳೆಯಾಗುತ್ತಿದ್ದು ಇಂದು ಕೂಡ ಮಳೆ ಮುಂದುವರೆದಿದೆ.
ಕರಾವಳಿಯಲ್ಲಿ ಭಾರೀ ಮಳೆ, ತುಂಬಿಹೋಗುತ್ತಿವೆ ತಗ್ಗು ಪ್ರದೇಶಗಳು
ಈ ನಡುವೆ ಅವಘಡ ಸಂಭವಿಸಿದೆ. ಇಂದು ಭಾರೀ ಮಳೆಯ ನಡುವೆ ದನದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಚೇರ್ಕಾಡಿ ಗ್ರಾಮದ ಬೆನಗಲ್ ಎಂಬಲ್ಲಿ ಈ ಘಟನೆ ನಡೆದಿದೆ.
ಇಲ್ಲಿನ ನಿವಾಸಿ ಕೊರಗ ಮರಕಾಲ ಎಂಬುವರ ಪತ್ನಿ ಗಂಗಾ ಮರಕಾಲ್ತಿ (52) ಘಟನೆಯಲ್ಲಿ ಮೃತಪಟ್ಟಿದ್ದಾರೆ. ನಿರಂತರ ಮಳೆಯಿಂದ ತೊಯ್ದು ಶುಷ್ಕಗೊಂಡಿದ್ದ ಕೊಟ್ಟಿಗೆಯ ಮಣ್ಣಿನ ಗೋಡೆ ಹಠಾತ್ ಕುಸಿದು ಬಿದಿದ್ದೆ. ಈ ಗಂಗಾ ಅವರು ಗೋಡೆಯ ಅವಶೇಷಗಳಡಿ ಸಿಲುಕಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಹೇಳಲಾಗಿದೆ.