ಮಹಿಳಾ ದಿನದ ವಿಶೇಷ: ಸಮುದ್ರದಲ್ಲಿ ಕಯಾಕಿಂಗ್ ಸಾಹಸ ಮೆರೆದ ವಿದ್ಯಾರ್ಥಿನಿಯರು
ಉಡುಪಿ, ಮಾರ್ಚ್ 8: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಉಡುಪಿಯ ಮಲ್ಪೆ ಕಡಲ ಕಿನಾರೆಯಲ್ಲಿ ಹೆಣ್ಣು ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಮುದ್ರದಲ್ಲಿ ಕಯಾಕಿಂಗ್ ಪಯಣವನ್ನು ದೋಣಿ ಮೂಲಕ ಮಲ್ಪೆಯಿಂದ ಸೈಂಟ್ ಮೇರಿಸ್ ದ್ವೀಪದ ತನಕ ವಿದ್ಯಾರ್ಥಿನಿಯರು ತಮ್ಮ ಸಾಹಸ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
ಉಡುಪಿ ಜಿಲ್ಲಾಡಳಿತ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಡಾಕ್ಟರ್ ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಈ ಸಾಹಸ ದೋಣಿ ಪಯಣ, ಕಯಾಕಿಂಗ್ ಅನ್ನು ಏರ್ಪಡಿಸಲಾಗಿತ್ತು.

ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ಕಯಾಕಿಂಗ್ ಸಾಹಸದಲ್ಲಿ ಭಾಗಿಯಾಗಿ ಸಾಹಸದಲ್ಲಿ ತಾವು ಪುರುಷರಿಗೆ ಏನೂ ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಿದರು. ವಿದ್ಯಾರ್ಥಿನಿಯರಿಗೆ ಮೊದಲೇ ಕಯಾಕಿಂಗ್ ತರಬೇತಿಯನ್ನು ನೀಡಲಾಗಿತ್ತು.
ಮಲ್ಪೆ ಸಮುದ್ರ ತೀರದಿಂದ ಸೈಂಟ್ ಮೇರೀಸ್ ದ್ವೀಪದ ತನಕ ವಿವಿಧ ದೋಣಿಗಳಲ್ಲಿ ವಿದ್ಯಾರ್ಥಿನಿಯರು ಕಯಾಕಿಂಗ್ ನಲ್ಲಿ ಭಾಗಿಯಾಗಿ ದಿನಕ್ಕೆ ವಿಶ್ವ ಮಹಿಳಾ ದಿನಕ್ಕೆ ವಿಶೇಷ ಮೆರಗು ತಂದರು. ಕಯಾಕಿಂಗ್ ಸಾಮಾನ್ಯವಾಗಿ ನದಿಗಳಲ್ಲಿ ನಡೆಯುತ್ತದೆ. ಸಮುದ್ರದಲ್ಲಿ ವಿರಳವಾದ ಈ ಸಾಹಸದಲ್ಲಿ ಭಾಗಿಯಾದ ಮಹಿಳೆಯರ ಸಾಹಸವು ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

ಮುಖ್ಯವಾಗಿ ಸಮುದ್ರದ ಬೃಹತ್ ಅಲೆಗಳು ಮತ್ತದರ ಏರಿಳಿತದಲ್ಲಿ ಕಯಾಕಿಂಗ್ ಬಹಳ ಸವಾಲಿನ ಸಾಹಸ. ಆದರೂ ಹೆಣ್ಣು ಮಕ್ಕಳು ಲೈಫ್ ಜಾಕೆಟ್ ಹಾಕಿ ಸಮುದ್ರದಲ್ಲಿ ಸಾಹಸ ಮೆರೆದ ರೀತಿ ನೋಡುಗರ ಹುಬ್ಬೇರಿಸುವಂತೆ ಮಾಡಿತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications