ವಿಶ್ವ ಪ್ರವಾಸೋದ್ಯಮ ದಿನ: ಮಲ್ಪೆ ಬೀಚ್ ನಲ್ಲಿ ಸ್ವಚ್ಛತಾ ಕಾರ್ಯಕ್ರಮ
ಉಡುಪಿ, ಸೆಪ್ಟೆಂಬರ್ 27: ಉಡುಪಿಯ ಪ್ರಸಿದ್ಧ ಪ್ರವಾಸಿ ತಾಣ ಮಲ್ಪೆ ಬೀಚ್ ನಲ್ಲಿ ಇಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಅಭಿವೃದ್ಧಿ ಸಮಿತಿ, ನೆಹರು ಯುವ ಕೆಂದ್ರ ಮತ್ತು ಕರಾವಳಿ ಪ್ರವಾಸೋದ್ಯಮ ಸಂಘಟನೆ, ಮತ್ತು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಇವರ ಸಹಯೋಗದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು, "ಉಡುಪಿ ಜಿಲ್ಲೆ ಪ್ರವಾಸೊದ್ಯಮಕ್ಕೆ ಹೇಳಿ ಮಾಡಿಸಿದ ಜಿಲ್ಲೆ. ಆದರೆ ಇಲ್ಲಿನ ಪ್ರವಾಸೋದ್ಯಮದ ಅವಕಾಶಗಳನ್ನು ನಾವು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಲ್ಲ' ಎಂದರು.

ಉಡುಪಿ ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಪ್ರವಾಸಿ ಸ್ಥಳಗಳಲ್ಲಿ ಉತ್ತಮ ಅನುಭವವನ್ನು ನೀಡುವಂತಾಗಬೇಕು. ಕೆಟ್ಟ ಅನುಭವಗಳು ಪ್ರವಾಸಿಗರಿಗೆ ಆಗದಂತೆ ನಾವು ನೋಡಿಕೊಳ್ಳಬೇಕಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ್ ಹೆಗ್ಡೆ ಮಾತನಾಡಿ, "ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸಲು ಹಲವಾರು ಅವಕಾಶಗಳಿವೆ. ವಿಶ್ವದಲ್ಲಿ ಸಣ್ಣ ಸಣ್ಣ ದೇಶಗಳು ಕೂಡಾ ಪ್ರವಾಸೋದ್ಯಮವನ್ನು ತಮ್ಮ ಅದಾಯದ ಮೂಲವನ್ನಾಗಿ ಮಾಡಿ ಕೊಂಡಿವೆ. ನಮ್ಮಲ್ಲಿ ರಾಜಕಾರಣ ಮತ್ತು ರಾಜಕೀಯದ ನಡುವೆ ಪ್ರವಾಸೋದ್ಯಮ ಎಂಬುದು ಬಡವಾಗಿದೆ' ಎಂದರು.

ವಿಶ್ವ ಪ್ರವಾಸೋದ್ಯಮ ದಿನ ಕಾರ್ಯಕ್ರಮದ ಭಾಗವಾಗಿ ಮಲ್ಪೆ ಬೀಚ್ ನಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ












Click it and Unblock the Notifications