ಉಡುಪಿ: ಕಡಿಯಾಳಿ ದೇವಾಲಯದ ಧ್ವಜಸ್ತಂಭಕ್ಕೆ ಪ್ರದಕ್ಷಿಣೆ ಹಾಕಿದ ಗರುಡ!
ಉಡುಪಿ, ಜ 20: ಸುಮಾರು ಎಂಟು ನೂರು ವರ್ಷಗಳ ಇತಿಹಾಸವಿರುವ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಾಲಯದ ನೂತನ ಧ್ವಜಸ್ತಂಭದ (ಕೊಡಿಮರ) ಪಾದುಕಾ ಶಿಲಾನ್ಯಾಸ ಮತ್ತು ವೇದವ್ಯಾಸ ಯಾಗಶಾಲೆ ಉದ್ಘಾಟನೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆದಿದೆ.
ಉಡುಪಿ ಅಷ್ಟಮಠಗಳಲ್ಲಿ ಒಂದಾದ ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಶ್ರೀಗಳು ಕೊಡಿಮರ ಮತ್ತು ಯಾಗಶಾಲೆಯನ್ನು ಲೋಕಾರ್ಪಣೆಗೊಳಿಸಿದರು. ಮಾರ್ಚ್ 24ರಂದು ಬೆಳಿಗ್ಗೆ 7 ಗಂಟೆಗೆ ಧ್ವಜಸ್ತಂಭ ಪ್ರತಿಷ್ಠೆ ಕಲಶಾಭಿಷೇಕ, 9:45ಗಂಟೆಗೆ ಒದಗುವ ವೃಷಭ ಲಗ್ನ ಸುಮೂರ್ತದಲ್ಲಿ ಶ್ರೀ ದೇವಿಗೆ ಬ್ರಹ್ಮಕಲಶಭಿಷೇಕ, ಮಹಾ ಅನ್ನಸಂತರ್ಪಣೆ ನಡೆಯಲಿದೆ.
ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕಾಣಿಯೂರು ಮಠದ ಶ್ರೀಗಳು, "ಪ್ರತಿಮೆಯ ಮೂಲಕ ಭಗವಂತನನ್ನು ಆರಾಧಿಸುವುದು ಮತ್ತೊಂದು ಯಾಗ ಮಾಡಿ ಅಗ್ನಿ ಮೂಲಕ ಭಗವಂತನನ್ನು ಕಾಣುವುದು ಅಗ್ನಿಯ ಮೂಲಕ ಭಗವಂತನನ್ನು ಆರಾಧಿಸಿದರೆ ಭಕ್ತ ಇಷ್ಟಾರ್ಥಗಳನ್ನು ಕೂಡಲೇ ಅನುಗ್ರಹಿಸುತ್ತಾನೆ ಎಂಬ ನಂಬಿಕೆ ಭಕ್ತರಲ್ಲಿದೆ" ಎಂದು ಹೇಳಿದರು.

"ಕಡಿಯಾಳಿ ದೇವಸ್ಥಾನ ಈಗ ಅತ್ಯಂತ ವೈಭವೀಕರಣದ ಸಾನಿಧ್ಯ ಹೊಂದಿದೆ. ಇಲ್ಲಿ ಕಾಷ್ಯ ಶಿಲ್ಪಕ್ಕೆ ಭಕ್ತರು ಮಾರುಹೋಗುತ್ತಿದ್ದಾರೆ ಮುಂದೆ ಇದೊಂದು ರಾಜ್ಯದಲ್ಲೇ ಅತ್ಯಂತ ಪವಿತ್ರ ಪ್ರವಾಸಿ ತಾಣವಾಗಿ ಮೂಡಿಬರಲಿ ಅಲ್ಲದೆ ಉಡುಪಿ ಶ್ರೀ ಕೃಷ್ಣನಿಗೂ, ಕಡಿಯಾಳಿಯ ದೇವಿಗೂ ಅವಿನಾಭಾವ ಸಂಬಂಧ ಇದೆ. ಅಲ್ಲಿಗೆ ಬಂದ ಭಕ್ತರು ಇಲ್ಲಿಗೆ ಬಂದು ದೇವಿಯ ದರ್ಶನ ಮಾಡಿ ಧನ್ಯರಾಗುತ್ತಾರೆ"ಎಂದು ಶ್ರೀಗಳು ಆಶೀರ್ವಚನ ನೀಡಿದರು.
"ಮುಂದಿನ ದಿನಗಳಲ್ಲಿ ವ್ಯಾಘ್ರ ಪಿಲಿಚಾಮುಂಡಿ ಮತ್ತು ಇತರ ಪರಿವಾರ ದೈವಗಳ ಜೀರ್ಣೋದ್ಧಾರ ಕಾಮಗಾರಿ ಶೀಘ್ರದಲ್ಲೇ ನಡೆಸಲಾಗುವುದು. ಇದೀಗ ಧ್ವಜಸ್ತಂಭಕ್ಕೆ ಸಂಪೂರ್ಣ ತಾಮ್ರ ಮತ್ತು ಹಿತ್ತಾಳೆಯನ್ನು ಹೊದಿಸಿ ವಿಜೃಂಭಣೆಯಿಂದ ಧ್ವಜ ಪ್ರತಿಷ್ಠೆ ನಡೆಸಲಾಗುವುದೆಂದು ನಿಶ್ಚಯಿಸಿ ಸಂಜೆ 5ಗಂಟೆಗೆ ಹಾಲಿಟ್ಟು ಸೇವೆ, ಧೂಳಿಮಂಡಲ ಸೇವೆ, ಸಣ್ಣ ರಂಗ ಪೂಜೆ ನಡೆಯಲಿದೆ" ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ಕಟ್ಟೆ ರವಿರಾಜ.ವಿ.ಆಚಾರ್ಯ ತಿಳಿಸಿದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರ್ವಹಿಸಿದರು.
ಧ್ವಜಸ್ತಂಬಕ್ಕೆ ಪ್ರದಕ್ಷಿಣೆ ಹಾಕಿದ ಗರುಡ:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಕಡಬ ತಾಲೂಕಿನ ಬಳ್ಪ ಗ್ರಾಮದಲ್ಲಿ ಈ ಕೊಡಿಮರವನ್ನು ಆಯ್ಕೆ ಮಾಡಿ ತರಲಾಗಿತ್ತು. ಇದಕ್ಕೆ 586 ಲೀಟರ್ ಸಂಪೂರ್ಣ ಸಾವಯವ ಎಳ್ಳೆಣ್ಣೆಯನ್ನು ಹಾಕಿ 4 ತಿಂಗಳು ಇಡಲಾಗಿತ್ತು.

ಸುಮಾರು 65 ಅಡಿ ಎತ್ತರದ ಈ ಕೊಡಿಮರ ಜಿಲ್ಲೆಯಲ್ಲೆ ಅತ್ಯಂತ ಎತ್ತರದ ಕೊಡಿ ಮರ ಎನ್ನಲಾಗಿದೆ. ಈ ಕೊಡಿ ಮರವನ್ನು ಇಂದು ಪ್ರತಿಷ್ಠೆ ಮಾಡಿದ ತಕ್ಷಣ ಗರುಡ ಬಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿದ್ದನ್ನು ನೋಡಿ ಇಲ್ಲಿ ಸೇರಿದ ಜನ ಪುಳಕಿತಗೊಂಡರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications