ಯೇಸುದಾಸ್ ರಿಂದ ಕೊಲ್ಲೂರಿನಲ್ಲಿ ಚಂಡಿಕಾ ಹೋಮ, ಜನ್ಮ ದಿನಾಚರಣೆ
ಉಡುಪಿ, ಜನವರಿ 10: ಖ್ಯಾತ ಸಂಗೀತಗಾರ ಕೆ.ಜೆ.ಯೇಸುದಾಸ್ ಅವರು ತಮ್ಮ 77ನೇ ಹುಟ್ಟುಹಬ್ಬವನ್ನು ಮಂಗಳವಾರ ಕೊಲ್ಲೂರಿನ ಮೂಕಾಂಬಿಕಾ ದೇವಳದಲ್ಲಿ ದೇವಿಗೆ ಚಂಡಿಕಾ ಹೋಮ ನೆರವೇರಿಸುವ ಮೂಲಕ ಆಚರಿಸಿಕೊಂಡರು.
ಪತ್ನಿ ಪ್ರಭಾ ದಾಸ್ ಅವರೊಂದಿಗೆ ಸೋಮವಾರ ಸಂಜೆ ಕೊಲ್ಲೂರಿಗೆ ಆಗಮಿಸಿದ ಅವರು ದೇವರ ದರ್ಶನ ಪಡೆದರು. ತಮ್ಮ ನೆಚ್ಚಿನ ಗಾಯಕ ಯೇಸುದಾಸ್ ಅವರ ಹುಟ್ಟುಹಬ್ಬದ ಆಚರಣೆಗಾಗಿ ಕೇರಳ ಹಾಗೂ ದೇಶದ ವಿವಿಧ ಭಾಗಗಳಿಂದ ಬಂದಿದ್ದ ಸಾವಿರಾರು ಅಭಿಮಾನಿಗಳು ಮುಂಚಿತವಾಗಿ ಬಂದು ಕ್ಷೇತ್ರದಲ್ಲಿ ಜಮಾಯಿಸಿದ್ದರು.[ಡ್ರೆಸ್ ಕೋಡ್ ಹೇಳಿಕೆ ವಿವಾದ: ಯೇಸುದಾಸ್ ವಿರುದ್ಧ ಎಫ್ ಐಆರ್]

1967ನೇ ಇಸವಿಯಿಂದ ಕೊಲ್ಲೂರಿನ ಮೂಕಾಂಬಿಕಾ ದೇವಿಯ ಅನನ್ಯ ಭಕ್ತರಾಗಿರುವ ಅವರು, 1972ರಿಂದ ನಿರಂತರವಾಗಿ, ಪ್ರತಿ ವರ್ಷದ ಜನವರಿ 10ರಂದು ಇಲ್ಲಿಗೆ ಭೇಟಿ ನೀಡಿ, ದೇವಿಗೆ ಚಂಡಿಕಾಹೋಮದ ನಡೆಸಿದ ನಂತರ ಸಂಗೀತ ಸೇವೆಯನ್ನು ಅರ್ಪಿಸುವುದನ್ನು ಪರಿಪಾಠವನ್ನಾಗಿಸಿಕೊಂಡಿದ್ದಾರೆ.[ಯೇಸುದಾಸ್ ದೇಗುಲ ಪ್ರವೇಶ ಆಗ್ರಹಿಸಿ ಧರಣಿ]

ದೇವಳದ ಪ್ರಧಾನ ಅರ್ಚಕ ಗೋವಿಂದ ಅಡಿಗರ ನೇತೃತ್ವದಲ್ಲಿ ಚಂಡಿಕಾ ಹೋಮದ ಧಾರ್ಮಿಕ ವಿಧಿವಿಧಾನ ನೆರವೇರಿತು. ಚಂಡಿಕಾ ಹೋಮಕ್ಕೆ ಪೂರ್ಣಾಹುತಿ ಸಲ್ಲಿಸುವ ಮುನ್ನ ನಡೆದ ಸಂಗೀತ ಕಛೇರಿಯಲ್ಲಿ ಐದಾರು ಮಲೆಯಾಳಂ ಭಕ್ತಿಗೀತೆಗಳು ಹಾಗೂ ಕನ್ನಡದಲ್ಲಿ 'ಗುರುವಿನ ಗುಲಾಮ ನಾಗುವ ತನಕ ದೊರೆಯದಣ್ಣ ಮುಕುತಿ...'ಎಂಬ ಪುರಂದರ ದಾಸರ ಗೀತೆಯನ್ನು ಹಾಡಿ ತಮ್ಮ ಸೇವೆ ಸಲ್ಲಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications