ವಲಸೆ ಕಾರ್ಮಿಕರನ್ನು ಊರಿಗೆ ತಲುಪಿಸಿದ ಉಡುಪಿಯ ದಿಟ್ಟ ಯುವತಿ
ಉಡುಪಿ, ಮೇ 20: ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ತಂಗಿದ್ದ ತೆಲಂಗಾಣ ಮೂಲದ 49 ಜನ ವಲಸೆ ಕಾರ್ಮಿಕರಿಗೆ ಉಡುಪಿ ಜಿಲ್ಲೆಯಿಂದ ಮುಕ್ತಿ ಸಿಕ್ಕಿದೆ.
Recommended Video
ಇದೀಗ ಅಚ್ಚರಿ ಅಂದ್ರೆ, ಈ ರೀತಿ ತೆರಳುತ್ತಿರುವ ಆ 49 ವಲಸೆ ಕಾರ್ಮಿಕರಿಗೆ ಉಡುಪಿ ಜಿಲ್ಲಾಡಳಿತದಿಂದಾಗಲೀ, ಕರ್ನಾಟಕ ಸರಕಾರದಿಂದಾಗಲೀ ಸೂಕ್ತವಾದ ಸ್ಪಂದನೆ ಸಿಕ್ಕಿರಲಿಲ್ಲ. ಉಡುಪಿ ಜಿಲ್ಲೆಯಿಂದ ತಮ್ಮ ತವರು ರಾಜ್ಯ ತೆಲಂಗಾಣಕ್ಕೆ ತೆರಳಲು ಕಾರ್ಮಿಕರು ಸಿದ್ಧರಾಗಿದ್ದಾರೆ.
ಬದಲಿಗೆ ಅವರೆಲ್ಲರಿಗೂ ಸ್ಪಂದಿಸಿ ಅವರನ್ನ ಊರಿಗೆ ತಲುಪಿಸಿಯೇ ತಲುಪಿಸ್ತೀನಿ ಅಂತಾ ಪಣ ತೊಟ್ಟವಳು ಓರ್ವ ಯುವತಿ. ಈಕೆಗೆ ಸಾಥ್ ನೀಡಿದವರು ಮಣಿಪಾಲ ಪೊಲೀಸರು. ವಲಸೆ ಕಾರ್ಮಿಕರ ಪಾಲಿಗೆ ಆಪದ್ಬಾಂಧವಳಾಗಿ ಬಂದವಳೇ ಮುಂಬೈ ಮೂಲದ ಸಾಯಿಶ್ರೀ ಅಕೊಂಡಿ.

2018 ರಲ್ಲಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) B.Tech ಮುಗಿಸಿರುವ ಈಕೆ, ಇತ್ತೀಚೆಗೆ ಕಾರ್ಯ ನಿಮಿತ್ತ ಮಣಿಪಾಲಕ್ಕೆ ಆಗಮಿಸಿ, ಲಾಕ್ಡೌನ್ ಆಗಿದ್ದಳು. ಕೆಲ ದಿನಗಳ ಹಿಂದೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಸ್ಥಿತಿ ಕಂಡು ಮರುಗಿದಳು.
ಸ್ನೇಹಿತ ವಿನೀತ್ ಜೊತೆಗೂಡಿ, ಮೇ 12 ರಂದು ಸೇವಾ ಸಿಂಧು ವೆಬ್ಸೈಟ್ ಗೆ ತೆರಳಿ ಆ ಎಲ್ಲಾ 49 ಜನ ವಲಸೆ ಕಾರ್ಮಿಕರ ಹೆಸರು ನೋಂದಾಯಿಸಿದ್ದಾರೆ. ಅದಕ್ಕೂ ಜಾಸ್ತಿ ತನ್ನ ಟ್ವಿಟ್ಟರ್ ಖಾತೆಯ ಮೂಲಕ ತೆಲಂಗಾಣ ಸಿಎಂ, TRS ಪಕ್ಷದ ನಾಯಕಿ ಕವಿತಾ, ಬಾಲಿವುಡ್ ನಟ ಸೋನು ಸೂದ್ ಅವರಿಗೆ ಮಣಿಪಾಲದ ಇಂದ್ರಾಳಿ ರೈಲ್ವೇ ನಿಲ್ದಾಣದ ಬಳಿ ಪರದಾಡುತ್ತಿದ್ದ ವಲಸೆ ಕಾರ್ಮಿಕರ ಸಂಕಷ್ಟದ ಬಗ್ಗೆ ಟ್ಯಾಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಈ ಬಗ್ಗೆ ಮಾತನಾಡಿದ ಸಾಯಿಶ್ರೀ, ""ಇತ್ತೀಚೆಗೆ ಮುಂಬೈನಲ್ಲಿದ್ದ ವಲಸೆ ಕಾರ್ಮಿಕರಿಗೆ ಸೋನು ಸೂದ್ ಅವರು ನೀಡಿದ ಸಹಾಯದಿಂದಲೇ, ಆ ಬಾಲಿವುಡ್ ನಟನಿಗೆ ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಲು ಪ್ರೇರೇಪಿಸಿತು. ನನ್ನ ಟ್ವೀಟ್ ಗೆ ತಕ್ಷಣವೇ ತೆಲಂಗಾಣ ಸಿಎಂ ಕಚೇರಿಯಿಂದ 24 ಗಂಟೆಯೊಳಗಾಗಿ ಪ್ರತಿಕ್ರಿಯೆಯೂ ಬಂತು'' ಎಂದಿದ್ದಾಳೆ.

ಕರೆ ಮಾಡಿ ಮಾತನಾಡಿದ ತೆಲಂಗಾಣ ಸಿಎಂ ಕಚೇರಿಯವರು, ಅವರ ರಾಜ್ಯದ ಕಾರ್ಮಿಕರಿಗೆ ಸ್ಪಂದಿಸುವ ಭರವಸೆ ನೀಡಿದರು. ಮಾತ್ರವಲ್ಲದೇ ತಕ್ಷಣವೇ KSRTC ಬಸ್ಗಳನ್ನೂ ಸಂಪರ್ಕಿಸಲು ತಿಳಿಸಿದರು. ಜೊತೆಗೆ ರಾಜ್ಯಕ್ಕೆ ಆಗಮಿಸಲು ಅವರಿಗೆ ಅವಕಾಶ ನೀಡುವುದಾಗಿಯೂ ತೆಲಂಗಾಣ ಸರ್ಕಾರದವರು ತಿಳಿಸಿದರು ಎಂದು ಸಾಯಿಶ್ರೀ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications