ಉಡುಪಿ ಯುವಕರ ಈ ಕ್ರಿಯೇಟಿವಿಟಿಗೆ ಒಂದು ಲೈಕ್ ಕೊಡಲ್ವಾ?
ಉಡುಪಿ, ಡಿ 5: ಉಡುಪಿ, ಮಂಗಳೂರು ಅಥವಾ ದಕ್ಷಿಣಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳದ ಜಿಲ್ಲೆಗಳಲ್ಲಿ, ಅದು ಯಕ್ಷಗಾನವಿರಲಿ, ಲಕ್ಷದೀಪೋತ್ಸವೇ ಇರಲಿ ಅಥವಾ ಮೆರವಣಿಗೆಯಿರಲಿ ಅಲ್ಲಿ ಚೆಂಡೆಯ ಧ್ವನಿ ಮಾರ್ದನಿಸಲೇ ಬೇಕು.
ಚೆಂಡೆಯನ್ನು ಹೀಗೇ ಬಾರಿಸಬೇಕು ಎನ್ನುವ ಪರಿಪಾಠ ಹಿಂದಿನಿಂದಲೂ ನಡೆದುಕೊಂಡು ಬಂದಿದೆ, ಆದರೆ ಇದನ್ನೂ ಮೀರಿ ಚೆಂಡೆಯನ್ನು ಹೀಗೂ ಬಾರಿಸಬಹುದು ಎನ್ನುವುದನ್ನು ಉಡುಪಿ ಜಿಲ್ಲೆಯ ಯುವಕರ ತಂಡವೊಂದು ತೋರಿಸಿಕೊಟ್ಟಿದೆ.
ಉಡುಪಿ ಜಿಲ್ಲೆಯಲ್ಲಿ ಹಗ್ಗಜಗ್ಗಾಟ (ಟಗ್ ಆಫ್ ವಾರ್) ಕ್ರೀಡೆಯನ್ನು ಆಯೋಜಿಸಲಾಗಿತ್ತು. ಅಲ್ಲಿ ಸ್ಪರ್ಧಾಳುಗಳನ್ನು ಪ್ರೋತ್ಸಾಹಿಸಲು ಚೆಂಡೆಯವರನ್ನು ಕರೆಸಲಾಗಿತ್ತು.

ಸ್ಥಳೀಯ ಯುವಕ ಹಾಡಿದ ಸಿನಿಮಾ ಹಾಡಿಗೆ ಸರಿಯಾಗಿ ಚೆಂಡೆಯವರೂ ರಾಗಕ್ಕೆ ತಕ್ಕಂತೆ ಚೆಂಡೆ ಬಾರಿಸಿ ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಚೇತನ್ ಹಾಡಿನ ತಾಳಕ್ಕೆ ತಕ್ಕಂತೆ ಚೆಂಡೆಯವರೂ ಬಾರಿಸಿದ ವಿಡಿಯೋ, ಸಾಮಾಜಿಕ ತಾಣದಲ್ಲಿ ಶಹಬ್ಬಾಸ್ ಗಿರಿ ಪಡೆದುಕೊಂಡಿದೆ.
ಉಡುಪಿ ಜಿಲ್ಲೆಯ ಯುವಕರ ಚಂಡೆ ಬಳಗ ತಂಡ, ಕ್ರಿಯೇಟಿವಿಟಿ ಮೂಲಕ ಚಂಡೆಯನ್ನು ಬಾರಿಸುವ ಮೂಲಕ ಚಂಡೆ ಪ್ರಿಯರನ್ನು ಹುಬ್ಬೇರಿಸುವಂತೆ ಮಾಡಿದೆ.
ಯುವಕ, ಕನ್ನಡ, ತುಳು, ಹಿಂದಿ, ತಮಿಳು ಹಾಡಿನ ಜೊತೆಗೆ ವಾಶಿಂಗ್ ಪೌಡರ್ ನಿರ್ಮಾ.. ಹಾಲಿನಂತಹ ಹೊಳಪು ಎನ್ನುವ ಜಾಹೀರಾತನ್ನೂ ಹಾಡಿ, ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದ್ದಾರೆ. ಅದಕ್ಕೆ ಸರಿಯಾಗಿ ಚೆಂಡೆಯವರೂ ಬಾರಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications