ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಪ್ರಭಾವಿ ಬಿ.ಎಲ್.ಸಂತೋಷ್ ವಿರುದ್ಧವೇ ಶಾಸಕ ಯತ್ನಾಳ್ ವಾಗ್ದಾಳಿ

|
Google Oneindia Kannada News

ವಿಜಯಪುರ, ಅಕ್ಟೋಬರ್ 03: 'ಸಂಘಟನಾ ಚತುರ, ವೀರ, ಧೀರ ಎಂದೆಲ್ಲಾ ಹೇಳಿಕೊಳ್ಳುವ ಸಂತೋಶ್ ಉಸ್ತುವಾರಿ ವಹಿಸಿದ್ದ ಕೇರಳ, ಆಂಧ್ರಪ್ರದೇಶದಲ್ಲಿ ಬಿಜೆಪಿಗೆ ಎಷ್ಟು ಸೀಟು ಬಂದಿದೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಕಿಡಿ ಕಾರಿದರು.

204 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಡಿ. ಕೆ. ಶಿವಕುಮಾರ್204 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಡಿ. ಕೆ. ಶಿವಕುಮಾರ್

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕೇರಳದಲ್ಲಿ ಐದು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಭಾಷಣ ಬಿಗಿದಿದ್ದ ಅವರು ತಂದಿದ್ದು ಎಷ್ಟು ಸೀಟು? ಒಂದೇ ಒಂದು ಲೋಕಸಭಾ ಸೀಟು ತರಲಿಲ್ಲ, ಶಬರಿಮಲೆ ವಿವಾದ ಇದ್ದರೂ ಒಂದೂ ಸೀಟು ಗೆಲ್ಲಲಿಲ್ಲ ಎಂದು ಅವರು ಹೇಳಿದರು.

ನೆರೆ ಪರಿಹಾರ ನೀಡದ ಮೋದಿ ವಿರುದ್ಧ ಬಿಜೆಪಿ ಶಾಸಕ ವಾಗ್ದಾಳಿನೆರೆ ಪರಿಹಾರ ನೀಡದ ಮೋದಿ ವಿರುದ್ಧ ಬಿಜೆಪಿ ಶಾಸಕ ವಾಗ್ದಾಳಿ

ಸುಮ್ಮನೇ ಭಾಷಣ ಬಿಗಿದಿದ್ದೇ ಆಯಿತು. ಬಿ.ಎಲ್.ಸಂತೋಷ್ ಜಾತಿಯ ಕಾರಣಕ್ಕೆ ಕೆಲವು ಮಾಧ್ಯಮಗಳು ಆತನನ್ನು ಇಂದ್ರ, ಚಂದ್ರ ಎಂದವು ಅಷ್ಟೆ ಅವರಿಗೆ ಗೆಲ್ಲಿಸುವ ಛಾತಿ ಇಲ್ಲ ಎಂದು ಯತ್ನಾಳ್ ವಾಗ್ದಾಳಿ ನಡೆಸಿದರು.

 BJP MLA Basanagouda Patil Yatnal Lambasted On BL Santhosh

ಯಡಿಯೂರಪ್ಪ, ಅನಂತ್‌ಕುಮಾರ್ ಅವರೆಲ್ಲಾ ಹಳ್ಳಿ ಹಳ್ಳಿಗೆ ಸೈಕಲ್‌ನಲ್ಲಿ ಹೋಗಿ ಪಕ್ಷ ಕಟ್ಟಿದ್ದಾರೆ. ಇವರ ಹಾಗೆ ಎಸಿ ಕಾರಿನಲ್ಲಿ ತಿರುಗಾಡಿ ಪಕ್ಷ ಸಂಘಟನೆ ಹೆಸರಲ್ಲಿ ಮಜಾ ಮಾಡಿಲ್ಲವೆಂದು ತೀವ್ರ ವಾಗ್ದಾಳಿಯನ್ನೇ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದರು.

ನೆರೆಗೆ ಕೇಂದ್ರದ ನೆರವಿನ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ ವಿರುದ್ಧ ಶಾಸಕ ಯತ್ನಾಳ ಕಿಡಿನೆರೆಗೆ ಕೇಂದ್ರದ ನೆರವಿನ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ ವಿರುದ್ಧ ಶಾಸಕ ಯತ್ನಾಳ ಕಿಡಿ

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಪಕ್ಷದ ಪ್ರಭಾವಿ ನಾಯಕರಾಗಿದ್ದು ಅವರ ವಿರುದ್ಧವೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಇದು ಭಾರಿ ವಿವಾದ ಎಬ್ಬಿಸುವ ಸಾಧ್ಯತೆ ಇದೆ.

English summary
BJP MLA Basanagouda Patil yatnal lambasted on national BJP secratory BL Santhosh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X