ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ: ಬಂಡೆಪ್ಪ ಕಾಶೆಂಪುರ

|
Google Oneindia Kannada News

ವಿಜಯಪುರ, ಜನವರಿ 14: ಬಿಜೆಪಿಯ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ನಮ್ಮ ಪಕ್ಷಕ್ಕೆ ಬರಲು ಅವರು ತಯಾರಾಗಿದ್ದಾರೆ ಎಂದು ಸಚಿವ ಬಂಡೆಪ್ಪ ಕಾಶೆಂಪುರ ಹೊಸ ಬಾಂಬ್ ಸಿಡಿಸಿದ್ದಾರೆ.

ರಾಜ್ಯ-ರಾಷ್ಟ್ರ ರಾಜಕಾರಣ ಬಗ್ಗೆ ಕುಮಾರಸ್ವಾಮಿ ಸಂದರ್ಶನರಾಜ್ಯ-ರಾಷ್ಟ್ರ ರಾಜಕಾರಣ ಬಗ್ಗೆ ಕುಮಾರಸ್ವಾಮಿ ಸಂದರ್ಶನ

ಕಾಂಗ್ರೆಸ್‌ನ ಕೆಲವು ಶಾಸಕರು ಬಿಜೆಪಿ ಪಾಳಯಕ್ಕೆ ನೆಗೆಯಲು ತಯಾರಾಗಿದ್ದಾರೆ ಎಂಬ ಸುದ್ದಿಗೆ ಪ್ರತಿಕ್ರಿಯೆಯಾಗಿ ಅವರು ಈ ಹೇಳಿಕೆ ನೀಡಿದ್ದಾರೆ.

ಆಪರೇಷನ್ ಕಮಲ ಊಹಾಪೋಹವಷ್ಟೆ: ಕುಮಾರಸ್ವಾಮಿ ಆಪರೇಷನ್ ಕಮಲ ಊಹಾಪೋಹವಷ್ಟೆ: ಕುಮಾರಸ್ವಾಮಿ

ಮುದ್ದೆಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆ ಕೊರತೆ ಇದೆ ಆದರೆ ಅದನ್ನು ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುತ್ತೇವೆ. ಆದರೆ ಸರ್ಕಾರ ಬೀಳುತ್ತದೆ ಎನ್ನುವ ಸುದ್ದಿ ಅಪ್ಪಟ ಸುಳ್ಳು ಎಂದು ಅವರು ಹೇಳಿದರು.

BJP MLAs were in our contact ready come to our party: Bandepa Kashempura

ಸರ್ಕಾರವು ಸರಿಯಾದ ದಾರಿಯಲ್ಲಿಯೇ ನಡೆಯುತ್ತಿದೆ ಎಂದ ಅವರು, ಮುಂದಿನ ಬಜೆಟ್‌ನಲ್ಲಿ ಕುಮಾರಸ್ವಾಮಿ ಅವರು ದಾಖಲೆ ಪ್ರಮಾಣದಲ್ಲಿ ರಾಜ್ಯದ ಜನರಿಗೆ ಉಡುಗೊರೆಗಳನ್ನು ನೀಡಲಿದ್ದಾರೆ ಎಂದು ಹೇಳಿದರು.

ಮುಂಬೈನಲ್ಲಿ ಶಾಸಕರು, ಬಿಜೆಪಿಯಿಂದ ಆಪರೇಷನ್ ಕಮಲ : ಡಿಕೆಶಿಮುಂಬೈನಲ್ಲಿ ಶಾಸಕರು, ಬಿಜೆಪಿಯಿಂದ ಆಪರೇಷನ್ ಕಮಲ : ಡಿಕೆಶಿ

ಸಾಲಮನ್ನಾ ಬಗ್ಗೆ ಮಾತನಾಡಿದ ಅವರು, ಸಾಲಮನ್ನಾ ವಿಷಯದಲ್ಲಿ ಸರ್ಕಾರ ತಪ್ಪು ಮಾಡಿಲ್ಲ. ಸಾಲ ಮರುಪಾವತಿ ಮಾಡದ ಯಾವ ರೈತನಿಗೂ ನೊಟೀಸ್‌ಗಳು ಹೋಗಿಲ್ಲ. ಫಲಾನುಭವಿಗಳಲ್ಲದವರಿಗೆ ಯೋಜನೆ ಹೋಗಬಾರದು ಎಂಬ ಕಾರಣಕ್ಕೆ ರೈತರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಸಚಿವರು ಹೇಳಿದರು.

English summary
BJP MLAs were in our contact they are ready to come to our party said minister Bandeppa Kashempur. He also said that have small diffrences in coalition government, but we will solve it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X