ಲಕ್ಷ್ಮಣ ಸವದಿ ಗೆ ಡಿಸಿಎಂ ಸ್ಥಾನ ಕೊಡಿಸಿದ್ದು ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಜಯಪುರ, ಜನವರಿ 04: ಯಡಿಯೂರಪ್ಪ ಸರ್ಕಾರ ರಚನೆ ಆಗಿ ಸಂಪುಟ ವಿಸ್ತರಣೆ ಆದಾಗ ಪಕ್ಷದಲ್ಲಿದ್ದವರಿಗೇ ಭಾರಿ ಆಶ್ಚರ್ಯ ಮೂಡಿಸಿದ್ದ ಹೆಸರು ಲಕ್ಷ್ಮಣ ಸವದಿ ಅವರದ್ದು.
ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗೆ ಡಿಸಿಎಂ ಪಟ್ಟ ಕೊಟ್ಟಿದ್ದು ಏಕೆ ಮತ್ತು ಡಿಸಿಎಂ ಸ್ಥಾನವನ್ನು ಕೊಡಿಸಿದ್ದು ಯಾರು ಎಂಬುದು ಎಲ್ಲರ ಪ್ರಶ್ನೆಯಾಗಿತ್ತು.
ಆದರೆ ಈ ಪ್ರಶ್ನೆಗೆ ಈಗ ಸ್ವತಃ ಲಕ್ಷ್ಮಣ ಸವದಿ ಉತ್ತರ ನೀಡಿದ್ದಾರೆ. ಇಂದು ವಿಜಯಪುರದಲ್ಲಿ ನಡೆದ ಕೃಷಿ ಸಮ್ಮೇಳನದಲ್ಲಿ ಮಾತನಾಡಿದ ಲಕ್ಷ್ಮಣ ಸವದಿ, ಯಾರು ತಮಗೆ ಡಿಸಿಎಂ ಸ್ಥಾನ ಕೊಡಿಸಿದ್ದು ಎಂಬುದನ್ನು ಬಹಿರಂಗಗೊಳಿಸಿದ್ದಾರೆ.

ವೇದಿಕೆ ಮೇಲೆ ಮಾತನಾಡಿದ ಲಕ್ಷ್ಮಣ ಸವದಿ, 'ಸಂಸದ ರಮೇಶ್ ಜಿಗಜಿಣಗಿ ಅವರಿಂದಲೇ ನಾನು ಡಿಸಿಎಂ ಆಗಿದ್ದು, ಈ ವಿಷಯವನ್ನು ಹೇಳಿಕೊಳ್ಳಲು ನನಗೇನು ಮುಜುಗರವಿಲ್ಲ' ಎಂದು ಹೇಳಿದರು.
'ನನ್ನನ್ನು ಡಿಸಿಎಂ ಮಾಡಿದ್ದು ರಮೇಶ್ ಜಿಗಜಿಣಗಿ, ನನಗೆ ಮತ್ತು ಗೋವಿಂದ ಕಾರಜೋಳ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲು ರಮೇಶ್ ಜಿಗಜಿಣಗಿ ಕಾರಣ' ಎಂದು ಹೇಳಿದರು.
ಮುಂದುವರೆದು ಮಾತನಾಡಿದ ಲಕ್ಷ್ಮಣ ಸವದಿ, 'ಹಿಂಬಾಗಿಲ ರಾಜಕೀಯ ನಡೆಸಿ ನನಗೆ ಡಿಸಿಎಂ ಸ್ಥಾನ ಕೊಡಿಸಿಕೊಟ್ಟಿರಿ, ಮಗು ಅಂಬೆಗಾಲಿಡಲು ಪ್ರಾರಂಭಿಸಿದಾಗ ಹೇಗೆ ತಂದೆ ಮಗುವಿಗೆ ನಡೆಯಲು ಸಹಾಯ ಮಾಡುತ್ತಾನೋ ಹಾಗೆ ನೀವು ನನಗೆ ಸಹಾಯ ಮಾಡಿದ್ದೀರಿ' ಎಂದರು.
ಭಾವುಕರಾಗಿ ಮಾತನಾಡಿದ ಲಕ್ಷ್ಮಣ ಸವದಿ, 'ನನ್ನ ರಾಜಕೀಯ ಭವಿಷ್ಯ ರೂಪಿಸಿದವರು ನೀವು' ಎಂದು ಹೇಳಿದರು. ಲಕ್ಷ್ಮಣ ಸವದಿ ಅವರ ಭಾವುಕ ಭಾಷಣ ಕೇಳಿ ರಮೇಶ್ ಜಿಗಜಿಣಗಿ ಅವರು ವೇದಿಕೆ ಮೇಲೆಯೇ ಕಣ್ಣೀರು ಹಾಕಿದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications