ವಿಜಯಪುರ-ಅಥಣಿ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ಕುಸಿತ
ವಿಜಯಪುರ, ಅಕ್ಟೋಬರ್ 01 : ವಿಜಯಪುರ-ಅಥಣಿ ನಡುವಿನ ರಾಜ್ಯ ಹೆದ್ದಾರಿಯಲ್ಲಿನ ಸೇತುವೆ ಕುಸಿದು ಬಿದ್ದಿದೆ. 2002ರಲ್ಲಿ ನಿರ್ಮಾಣವಾಗಿದ್ದ ಸೇತುವೆ ಈಗ ಕುಸಿದು ಬಿದ್ದಿದ್ದು, ಯಾವುದೇ ಪ್ರಾಣಾಪಾಯ ಆಗಿಲ್ಲ.
ಸೋಮವಾರ ಮಧ್ಯಾಹ್ನ ವಿಜಯಪುರ-ಅಥಣಿ ನಡುವಿನ ರಾಜ್ಯ ಹೆದ್ದಾರಿಯ ಸೇತುವೆ ರತ್ನಾಪುರ ಗ್ರಾಮದ ಬಳಿ ಕುಸಿದು ಬಿದ್ದಿದೆ. ಸೇತುವೆ ಕುಸಿದು ಬೀಳುವಾಗ ಯಾವುದೇ ವಾಹನಗಳು ಸಂಚಾರ ನಡೆಸುತ್ತಿರಲಿಲ್ಲ. ಆದ್ದರಿಂದ, ಅವಘಡ ತಪ್ಪಿದೆ.
ಬೆಂ-ಮೈ 6 ಪಥದ ರಸ್ತೆ, ಫ್ಲೈ ಓವರ್ ನಿರ್ಮಾಣಕ್ಕೆ ವಿರೋಧ
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿದರು. ಈ ಹೆದ್ದಾರಿಯಲ್ಲಿ ಸಂಚಾರ ನಡೆಸುವ ವಾಹನಗಳು ರತ್ನಾಪುರ-ತಿಕೋಟ ಮಾರ್ಗದಲ್ಲಿ ಸಂಚಾರ ನಡೆಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು-ಮೈಸೂರು 6 ಪಥ ರಸ್ತೆ ಕಾಮಗಾರಿ 2 ತಿಂಗಳಿನಲ್ಲಿ ಆರಂಭ
ಸ್ಥಳೀಯರು ನೀಡಿರುವ ಮಾಹಿತಿಯಂತೆ ಸೇತುವೆ 2002ರಲ್ಲಿ ನಿರ್ಮಾಣವಾಗಿತ್ತು. ಸೇತುವೆಯ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿಲ್ಲ ಎಂದು ಜನರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮೈಸೂರು ಮಾರ್ಗಕ್ಕಾಗಿ 200 ಮರಗಳಿಗೆ ಕೊಡಲಿ?
ಸೇತುವೆ ಕುಸಿದ ಪರಿಣಾಮ ಸ್ಥಳೀಯರ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸೇತುವೆಯನ್ನು ತಕ್ಷಣ ದುರಸ್ಥಿಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜನರು ಒತ್ತಾಯಿಸಿದ್ದಾರೆ.