ವಿಜಯಪುರ: ಬಾರ್ ಮುಂದೆ ಹಲಿಗೆ ಬಾರಿಸಿದ ಪೌರಕಾರ್ಮಿಕರು, ತೆರಿಗೆ ಪಾವತಿಸುವಂತೆ ಒತ್ತಾಯ
ವಿಜಯಪುರ, ಆಗಸ್ಟ್, 22: ಜಿಲ್ಲೆಯ ಮುದ್ದೇಬಿಹಾಳ ಪುರಸಭೆಗೆ ಬರಬೇಕಿದ್ದ ತೆರಿಗೆ ಬಾಕಿ ಪಾವತಿಸುವಂತೆ ಬಾರ್ವೊಂದರ ಮುಂದೆ ಪುರಸಭೆ ಪೌರಕಾರ್ಮಿಕರು ಹಲಿಗೆ ಬಾರಿಸುವ ಮೂಲಕ ವಿನೂತನ ರೀತಿಯಲ್ಲಿ ಒತ್ತಾಯಿಸಿದ್ದಾರೆ.
ಮುದೇಬಿಹಾಳ ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ವಾರ್ಡ್ ಸಂಖ್ಯೆ 7ರಲ್ಲಿ ಬರುವ ಆಸ್ತಿ ಸಂಖ್ಯೆ 1968ರ ಎಸ್.ಎಸ್.ಕರಭಂಟನಾಳ ಅವರಿಗೆ ಸೇರಿದ ಪಲ್ಲವಿ ಬಾರ್ ಹಾಗೂ ರೆಸ್ಟೋರೆಂಟ್ನ ಕಟ್ಟಡದ ಎದುರಿಗೆ ಪುರಸಭೆ ಕಂದಾಯ ವಿಭಾಗದ ಅಧಿಕಾರಿಗಳು, ಪೌರಕಾರ್ಮಿಕರು ಹಲಿಗೆ ಬಡಿದು ಬಾಕಿ ಪಾವತಿಸುವಂತೆ ಒತ್ತಾಯಿಯಿಸಿದರು. ಹೀಗೆ ಮಧ್ಯಾಹ್ನದವರೆಗೂ ಹಲಿಗೆ ಬಡಿಯುವ ಕಾರ್ಯವನ್ನು ಪುರಸಭೆ ಪೌರಕಾರ್ಮಿಕರು ಮಾಡಿದರು.

ತಕ್ಷಣ ಸ್ಥಳಕ್ಕೆ ಆಗಮಿಸಿದ ಆಸ್ತಿಯ ಮಾಲೀಕ ಸಂಗಮೇಶ ಕರಭಂಟನಾಳ ಪುರಸಭೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರಲ್ಲದೆ, ನಾವು ಟ್ಯಾಕ್ಸ್ ಕಟ್ಟಬೇಕು ನಿಜ. ನಮ್ಮ ಕಟ್ಟಡದ ಎದುರಿಗೆ ಹಲಿಗೆ ಬಡಿಯುವಂತೆ ಆದೇಶ ಏನಾದರೂ ಇದೆಯೇ? ಇದ್ದರೆ ತಂದು ಹಲಿಗೆ ಬಡಿಯಿರಿ ಎಂದು ಅಧಿಕಾರಿಗಳೊಂದಿಗೆ ಜಟಾಪಟಿ ನಡೆಸಿದರು.
ಪುರಸಭೆ ಕಂದಾಯ ಅಧಿಕಾರಿ ಎನ್.ಎಸ್.ಪಾಟೀಲ, ಕಂದಾಯ ನಿರೀಕ್ಷಕ ಸಂತೋಷ್ ಮಠ ಮಾತನಾಡಿ, ಈಗಾಗಲೇ ಆಸ್ತಿ ತೆರಿಗೆ ಬಾಕಿ ಕಟ್ಟಲು ತಮಗೆ ತಿಳಿಸಲಾಗಿದೆ. ಬಾಕಿ ಇರಿಸಿಕೊಂಡಿದ್ದಕ್ಕೆ ನಾವು ಹಲಿಗೆ ಬಡಿಯಲು ಹಚ್ಚಿದ್ದು. ನೀವು ಬಾಕಿ ಸರ್ಕಾರಕ್ಕೆ ತುಂಬಿ ಎಂದು ಹೇಳಿದರು.
ಈ ವೇಳೆ ಬಿಲ್ ಕಲೆಕ್ಟರ್ ಶರಣು ಚಲವಾದಿ, ಶಮ್ಸುದ್ದೀನ್ ಮೂಲಿಮನಿ, ಉಮೇಶ ದೇವರ, ಆರೋಗ್ಯ ನಿರೀಕ್ಷಕರಾದ ಜಾವೇದ ನಾಯ್ಕೋಡಿ, ಮಹಾಂತೇಶ ಕಟ್ಟಿಮನಿ ಸೇರಿದಂತೆ ಮತ್ತಿತರಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications