ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ: ರಾಜಕೀಯ ಗಣ್ಯರಿಂದ ಸಂತಾಪ
ವಿಜಯಪುರ ಜನವರಿ 2: ಅನಾರೋಗ್ಯದಿಂದಾಗಿ ಇಂದು ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರು ಕೊನೆಯಿಸಿರೆಳೆದಿದ್ದಾರೆ. 82 ನೇ ವಯಸ್ಸಿನಲ್ಲಿ ಶ್ರೀಗಳು ಲಿಂಗೈಕ್ಯರಾಗಿದ್ದಾರೆ. ಇದರಿಂದಾಗಿ ವಿಜಯಪುರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಜೊತೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಬೆಳಗ್ಗೆ 11 ಕ್ಕೆ ವಿಜಯಪುರಕ್ಕೆ ಪ್ರಯಾಣಿಸಲಿದ್ದಾರೆ.
ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು.
— Basavaraj S Bommai (@BSBommai) January 2, 2023
1/2 pic.twitter.com/WvNjQDmkJJ
'ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಶ್ರೀಗಳ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ "ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತ ಇರುವ ಅಪರೂಪದ ಯೋಗಿಗಳು ಶ್ರೀ ಸಿದ್ದೇಶ್ವರ ಸ್ವಾಮೀಜಿ. ನಿಸರ್ಗವನ್ನು ಅತ್ಯಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಗುರುಗಳು ಇಂದು ನಮ್ಮನ್ನು ಅಗಲಿರುವುದು ಅಪಾರ ದುಃಖ ತಂದಿದೆ.ಅವರ ಅವರ ಅಗಲುವಿಕೆಯಿಂದ ನಾಡಿನ ಆಧ್ಯಾತ್ಮಿಕ ಕೊಂಡಿಯೊಂದು ಕಳಚಿದಂತಾಗಿದೆ.ಸಿದ್ದೇಶ್ವರ ಸ್ವಾಮಿಜಿಗಳ ಅಗಲುವಿಕೆಯಿಂದ ಅವರ ಅಪಾರ ಭಕ್ತ ಸಮೂಹಕ್ಕೆ ಆಗಿರುವ ದುಃಖದಲ್ಲಿ ನಾನು ಭಾಗಿ. ವೈಯಕ್ತಿಕವಾಗಿ ಪೂಜ್ಯರೊಂದಿಗೆ 50 ವರ್ಷಗಳ ಸುಧಿರ್ಘ ಒಡನಾಟ ಅಂತ್ಯ ಗೊಂಡಿದ್ದು ದುಃಖತಂದಿದೆ.ದಯಾಘನನಾದ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ" ಎಂದು ಕಂಬನಿ ಮಿಡಿದಿದ್ದಾರೆ.
ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನಯೋಗಿ, ಕಾಯಕಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
— Pratap Simha (@mepratap) January 2, 2023
ಓಂ ಶಾಂತಿಃ. pic.twitter.com/bY2C5mIrtu
'ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನಯೋಗಿ, ಕಾಯಕಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ' ಎಂದು ಸಂಸದ ಪ್ರತಾಪ್ ಸಿಂಹ ಟ್ವಿಟ್ ಮಾಡಿದ್ದಾರೆ.
ಸಂತ, ಜ್ಞಾನಯೋಗಿ, ಸಮಾಜದ ಹಿತ ಚಿಂತಕರು, ಖ್ಯಾತ ಪ್ರವಚನಕಾರರಾಗಿದ್ದ ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ.
— B.C Nagesh (@BCNagesh_bjp) January 2, 2023
ಉತ್ತಮ ಸಮಾಜ ನಿರ್ಮಾಣ ಮತ್ತು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸ್ವಾಮೀಜಿಯವರು ನೀಡುತ್ತಿದ್ದ ಸಂದೇಶಗಳು ಸದಾ ದಾರಿ ದೀಪವಾಗಿರುತ್ತವೆ.
ಓಂ ಶಾಂತಿ pic.twitter.com/uahKY0yFUE
'ಸಂತ, ಜ್ಞಾನಯೋಗಿ, ಸಮಾಜದ ಹಿತ ಚಿಂತಕರು, ಖ್ಯಾತ ಪ್ರವಚನಕಾರರಾಗಿದ್ದ ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಉತ್ತಮ ಸಮಾಜ ನಿರ್ಮಾಣ ಮತ್ತು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸ್ವಾಮೀಜಿಯವರು ನೀಡುತ್ತಿದ್ದ ಸಂದೇಶಗಳು ಸದಾ ದಾರಿ ದೀಪವಾಗಿರುತ್ತವೆ' ಬಿಸಿ ನಾಗೇಶ್ ಕಂಬನಿ ಮಿಡಿದಿದ್ದಾರೆ.
ತಮ್ಮ ಸರಳತೆ ಹಾಗೂ ಪ್ರವಚನ ಮೂಲಕ ವಿಶ್ವಾದ್ಯಂತ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿ, ನಡೆದಾಡುವ ದೇವರು ಎಂದೇ ನಂಬಿದ್ದ ಕಾಯಕ ಯೋಗಿ ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ನಮ್ಮನ್ನೆಲ್ಲ ಅಗಲಿದ್ದಾರೆ ಎಂಬುದನ್ನು ನಂಬಲು ನನ್ನಿಂದ ಆಗುತ್ತಿಲ್ಲ. 1/3 pic.twitter.com/A5lgYhRalC
— B Sriramulu (@sriramulubjp) January 2, 2023
'ತಮ್ಮ ಸರಳತೆ ಹಾಗೂ ಪ್ರವಚನ ಮೂಲಕ ವಿಶ್ವಾದ್ಯಂತ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿ, ನಡೆದಾಡುವ ದೇವರು ಎಂದೇ ನಂಬಿದ್ದ ಕಾಯಕ ಯೋಗಿ ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ನಮ್ಮನ್ನೆಲ್ಲ ಅಗಲಿದ್ದಾರೆ ಎಂಬುದನ್ನು ನಂಬಲು ನನ್ನಿಂದ ಆಗುತ್ತಿಲ್ಲ. ಅನ್ನ ಶಿಕ್ಷಣ ಕಲ್ಪಿಸಿ ಮೌಢ್ಯದ ವಿರುದ್ದ ಜನಜಾಗೃತಿ ಮೂಡಿಸುತ್ತಿದ್ದ ಶ್ರೀಗಳ ಅಗಲಿಕೆ ನಮಗೆ ಬಹಳ ನೋವು ತಂದಿದೆ.

ನಾಲ್ಕು ದಿನಗಳ ಹಿಂದೆಯಷ್ಟೇ ಭೇಟಿಯಾಗಿದ್ದ ಅವರು ಶೀಘ್ರ ಗುಣಮುಖರಾಗುತ್ತಾರೆ ಎಂಬ ನಿರೀಕ್ಷೆ ಹುಸಿಯಾಯಿತು.ಮಹಾ ಸಂತನೊಬ್ಬನನ್ನು ಕಳೆದುಕೊಂಡು ದುಃಖದಲ್ಲಿರುವ ಅವರ ಅಸಂಖ್ಯಾತ ಭಕ್ತರಿಗೆ ಶ್ರೀಗಳ ಅಗಲಿಕೆಯ ದುಃಖವನ್ನು ಭರಿಸುವಂತಹ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಬೇಡಿಕೊಳ್ಳುತ್ತೇನೆ. ಅವರ ಅಗಲಿಕೆ ರಾಜ್ಯ ಹಾಗೂ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ' ಎಂದು ಬಿ ಶ್ರೀರಾಮುಲು ಸಂತಾಪ ಸೂಚಿಸಿದ್ದಾರೆ.
ನಮ್ಮ ಪಾಲಿಗೆ ನಡೆದಾಡುವ ಬೆಳಕು, ನಡೆದಾಡುವ ಅರಿವು, ನಡೆದಾಡುವ ದೇವರೇ ಆಗಿದ್ದ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಪರಮಪೂಜ್ಯ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ.1/2 pic.twitter.com/vQKtUDOTFU
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 2, 2023
'ನಮ್ಮ ಪಾಲಿಗೆ ನಡೆದಾಡುವ ಬೆಳಕು, ನಡೆದಾಡುವ ಅರಿವು, ನಡೆದಾಡುವ ದೇವರೇ ಆಗಿದ್ದ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಪರಮಪೂಜ್ಯ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ.ಸಮಾಜಕ್ಕೆ ಚಿಕಿತ್ಸರಾಗಿದ್ದ ಪೂಜ್ಯರು, ತಮ್ಮ ಪರಿಪೂರ್ಣ ಸಾರ್ಥಕ ಬದುಕಿನಿಂದಲೇ ನಮ್ಮನ್ನು ಪಾವನಗೊಳಿಸಿದವರು. ತಮ್ಮ ಪ್ರತಿ ಹೆಜ್ಜೆಯಲ್ಲೂ ಜ್ಞಾನದ ಬೆಳಕು ಮೂಡಿಸುತ್ತಿದ್ದ ಅವರ ನಿರ್ಗಮನ ಬಹುದೊಡ್ಡ ನಷ್ಟ. ಪೂಜ್ಯರು ಬಿಟ್ಟುಹೋಗಿರುವ ಅರಿವು ನಮಗೆಲ್ಲ ದಿವ್ಯಬೆಳಕು. ಆ ಬೆಳಕಿನಡಿಯಲ್ಲಿ ಮುನ್ನಡೆಯೋಣ ಎನ್ನುವ ಆಶಯ ನನ್ನದಾಗಿದೆ' ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಯವರು ಲಿಂಗೈಕ್ಯರಾದ ಸುದ್ದಿಯು ಅತ್ಯಂತ ದುಃಖದಾಯಕವಾಗಿದೆ.
— Mallikarjun Kharge (@kharge) January 2, 2023
ಜನರ ಆಸ್ತಿಕ ಭಾವನೆಗಳು ಮೌಢ್ಯಗಳತ್ತ ಜಾರದಂತೆ ಆಧ್ಯಾತ್ಮಿಕ ಅಂತಃಶಕ್ತಿ ತುಂಬಿ, ಸನ್ಮಾರ್ಗ ತೋರುತ್ತಾ, ಸಾಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಸದಾ ಲೋಕದ ಹಿತ ಬಯಸುತ್ತಿದ್ದ ಶ್ರೀಗಳನ್ನ ಕಳೆದುಕೊಂಡ ನಾಡು ಬಡವಾಗಿದೆ.
'ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಯವರು ಲಿಂಗೈಕ್ಯರಾದ ಸುದ್ದಿಯು ಅತ್ಯಂತ ದುಃಖದಾಯಕವಾಗಿದೆ. ಜನರ ಆಸ್ತಿಕ ಭಾವನೆಗಳು ಮೌಢ್ಯಗಳತ್ತ ಜಾರದಂತೆ ಆಧ್ಯಾತ್ಮಿಕ ಅಂತಃಶಕ್ತಿ ತುಂಬಿ, ಸನ್ಮಾರ್ಗ ತೋರುತ್ತಾ, ಸಾಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಸದಾ ಲೋಕದ ಹಿತ ಬಯಸುತ್ತಿದ್ದ ಶ್ರೀಗಳನ್ನ ಕಳೆದುಕೊಂಡ ನಾಡು ಬಡವಾಗಿದೆ' ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications