ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಗೆ ವಿಜಯಪುರ ಬಂಡಾಯ ಬೆಂಕಿ

By ವಿಜಯಪುರ ಪ್ರತಿನಿಧಿ
|
Google Oneindia Kannada News

ವಿಜಯಪುರ, ಜನವರಿ 11: ಜಿಲ್ಲಾ ಕಾಂಗ್ರೆಸ್ ನ ಮುಸ್ಲಿಂ ಮುಖಂಡರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ರ ಎದುರಿಗೇ ಅಸಮಾಧಾನ ತೋರಿಸಿದ್ದು, ವಿಜಯಪುರ ನಗರ ಶಾಸಕ ಮಕಬೂಲ್ ಬಾಗವಾನ್ ಗೆ ಈ ಬಾರಿ ಟಿಕೆಟ್ ನೀಡಬಾರದು ಎಂದು ಆಗ್ರಹ ಮಾಡಿದ್ದಾರೆ. ಬಾಗವಾನ್ ಬದಲಿಗೆ ಬೇರೆಯವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೋಮುವಾದ ವರ್ಸಸ್ ಜಾತ್ಯತೀತವಾದ : ಸಿದ್ದರಾಮಯ್ಯ ಸಂದರ್ಶನಕೋಮುವಾದ ವರ್ಸಸ್ ಜಾತ್ಯತೀತವಾದ : ಸಿದ್ದರಾಮಯ್ಯ ಸಂದರ್ಶನ

ಕೈ ಪಕ್ಷದ ಹಿರಿಯ ಮುಖಂಡರೇ ಬಾಗವಾನ್ ವಿರುದ್ಧ ಧ್ವನಿ ಎತ್ತಿರುವುದರಿಂದ ಈ ಪ್ರಹಸನ ಎಲ್ಲಿಗೆ ಹೋಗಿ ಮುಟ್ಟಬಹುದು ಎಂಬ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ನ ಹಿರಿಯ ಮುಖಂಡರಾದ ವಕೀಲ ಸುತಾರ್, ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ಕಲಾಲ್, ಟಪಾಲ್ ಅವರೂ ಸೇರಿದಂತೆ ಅನೇಕ ಮುಖಂಡರು ಮಕಬೂಲ್ ಬಾಗವಾನ್ ಸ್ಪರ್ಧೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Congress leaders angry against Vijayapura city MLA

ವಿಜಯಪುರ ನಗರ ಕ್ಷೇತ್ರದಿಂದ ತಮಗೇ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಂತೆ ಮಾತನಾಡಿದರು ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಕಲಾಲ್. ನಲವತ್ತು ವರ್ಷದಿಂದ ಕಾಂಗ್ರೆಸ್ ಗಾಗಿ ದುಡಿಯುತ್ತಿದ್ದೇವೆ. ಇಂದಿರಾಗಾಂಧಿ ಅವರ ಕಾಲದಿಂದ ಪಕ್ಷದಲ್ಲಿ ಇದ್ದೇವೆ. ನಮಗೆ ಮರ್ಯಾದೆಯೇ ಇಲ್ಲದಂತಾಗಿದೆ ಎಂದು ಮುಖಂಡರು ಅಸಮಾಧಾನ ಹೊರಹಾಕಿದರು.

English summary
Vijayapura Congress party Muslim leaders express their angry against city MLA Makbool Bagavan in front of Karnataka Congress in charge KC Venugopal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X