ಸಂಪುಟ ವಿಸ್ತರಣೆಗೆ ಬೇಡಿಕೆ ಇಟ್ಟ ಎಂ.ಬಿ.ಪಾಟೀಲ್
ವಿಜಯಪುರ, ನವೆಂಬರ್ 29 : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಸಂಪುಟ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.
ಗುರುವಾರ ವಿಜಯಪುರದಲ್ಲಿ ಮಾತನಾಡಿದ ಎಂ.ಬಿ.ಪಾಟೀಲ್ ಅವರು, 'ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕಾತಿ ನಡೆಯದಿದ್ದರೆ ಆಡಳಿತ ನಡೆಸಲು ಕಷ್ಟವಾಗಲಿದೆ' ಎಂದು ಹೇಳಿದರು.
ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗೋಲ್ಲ : 5 ಕಾರಣಗಳು!
'ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ ಆದರೆ ಆಡಳಿತದಲ್ಲಿ ಚುರುಕು ಬರಲು ಸಾಧ್ಯವಿದೆ. ಆದ್ದರಿಂದ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು' ಎಂದು ಒತ್ತಾಯಿಸಿದರು.
ಸಂಪುಟ ವಿಸ್ತರಣೆ ವಿಳಂಬ: ಅತೃಪ್ತ ಶಾಸಕರು ಚಳಿಗಾಲದ ಅಧಿವೇಶನದಿಂದ ಹೊರಗೆ?
'ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು 6 ತಿಂಗಳು ಕಳೆದಿದೆ. ಇನ್ನು ಮುಂದಾದರೂ ಸರ್ಕಾರ ಚುರುಕಾಗಬೇಕು. ಆದ್ದರಿಂದ, ಸಂಪುಟ ವಿಸ್ತರಣೆ, ನಿಗಮ-ಮಂಡಳ ನೇಮಕವಾಗಬೇಕು' ಎಂದರು.
ಸಿದ್ದರಾಮಯ್ಯ ಸೂಚನೆ: ದೆಹಲಿಗೆ ತೆರಳಿದ ಕಾಂಗ್ರೆಸ್ ನಾಯಕರು
'ನನ್ನನ್ನು ಸಚಿವರನ್ನಾಗಿ ಮಾಡದಿದ್ದರೂ ಪರವಾಗಿಲ್ಲ. ಸಚಿವ ಸಂಪುಟ ಪೂರ್ಣ ಪ್ರಮಾಣದಲ್ಲಿ ರಚನೆಯಾಗಬೇಕು' ಎಂದು ಎಂ.ಬಿ.ಪಾಟೀಲ್ ತಿಳಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ ಜೆಡಿಎಸ್ ಪಕ್ಷಕ್ಕೆ 2, ಕಾಂಗ್ರೆಸ್ ಪಕ್ಷಕ್ಕೆ 6 ಸ್ಥಾನಗಳು ಸಿಗಲಿವೆ. ಆರು ಸ್ಥಾನಗಳಿಗೆ ಕಾಂಗ್ರೆಸ್ನಲ್ಲಿ 12 ಕ್ಕೂ ಅಧಿಕ ಜನರು ಆಕಾಂಕ್ಷಿಗಳಾಗಿದ್ದಾರೆ.
ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ : ಸದ್ಯದ ಮಾಹಿತಿ ಪ್ರಕಾರ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಮೊದಲೇ ಸಂಪುಟ ವಿಸ್ತರಣೆಯಾಗಲಿದೆ. ಡಿಸೆಂಬರ್ 10 ರಿಂದ ಅಧಿವೇಶನ ಆರಂಭವಾಗಲಿದೆ.