ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಪುಟ ವಿಸ್ತರಣೆಗೆ ಬೇಡಿಕೆ ಇಟ್ಟ ಎಂ.ಬಿ.ಪಾಟೀಲ್

|
Google Oneindia Kannada News

ವಿಜಯಪುರ, ನವೆಂಬರ್ 29 : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಸಂಪುಟ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಗುರುವಾರ ವಿಜಯಪುರದಲ್ಲಿ ಮಾತನಾಡಿದ ಎಂ.ಬಿ.ಪಾಟೀಲ್ ಅವರು, 'ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕಾತಿ ನಡೆಯದಿದ್ದರೆ ಆಡಳಿತ ನಡೆಸಲು ಕಷ್ಟವಾಗಲಿದೆ' ಎಂದು ಹೇಳಿದರು.

ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗೋಲ್ಲ : 5 ಕಾರಣಗಳು!ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗೋಲ್ಲ : 5 ಕಾರಣಗಳು!

'ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ ಆದರೆ ಆಡಳಿತದಲ್ಲಿ ಚುರುಕು ಬರಲು ಸಾಧ್ಯವಿದೆ. ಆದ್ದರಿಂದ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು' ಎಂದು ಒತ್ತಾಯಿಸಿದರು.

ಸಂಪುಟ ವಿಸ್ತರಣೆ ವಿಳಂಬ: ಅತೃಪ್ತ ಶಾಸಕರು ಚಳಿಗಾಲದ ಅಧಿವೇಶನದಿಂದ ಹೊರಗೆ?ಸಂಪುಟ ವಿಸ್ತರಣೆ ವಿಳಂಬ: ಅತೃಪ್ತ ಶಾಸಕರು ಚಳಿಗಾಲದ ಅಧಿವೇಶನದಿಂದ ಹೊರಗೆ?

Congress MLA MB Patil demands for cabinet expansion

'ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು 6 ತಿಂಗಳು ಕಳೆದಿದೆ. ಇನ್ನು ಮುಂದಾದರೂ ಸರ್ಕಾರ ಚುರುಕಾಗಬೇಕು. ಆದ್ದರಿಂದ, ಸಂಪುಟ ವಿಸ್ತರಣೆ, ನಿಗಮ-ಮಂಡಳ ನೇಮಕವಾಗಬೇಕು' ಎಂದರು.

ಸಿದ್ದರಾಮಯ್ಯ ಸೂಚನೆ: ದೆಹಲಿಗೆ ತೆರಳಿದ ಕಾಂಗ್ರೆಸ್ ನಾಯಕರುಸಿದ್ದರಾಮಯ್ಯ ಸೂಚನೆ: ದೆಹಲಿಗೆ ತೆರಳಿದ ಕಾಂಗ್ರೆಸ್ ನಾಯಕರು

'ನನ್ನನ್ನು ಸಚಿವರನ್ನಾಗಿ ಮಾಡದಿದ್ದರೂ ಪರವಾಗಿಲ್ಲ. ಸಚಿವ ಸಂಪುಟ ಪೂರ್ಣ ಪ್ರಮಾಣದಲ್ಲಿ ರಚನೆಯಾಗಬೇಕು' ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ ಜೆಡಿಎಸ್ ಪಕ್ಷಕ್ಕೆ 2, ಕಾಂಗ್ರೆಸ್ ಪಕ್ಷಕ್ಕೆ 6 ಸ್ಥಾನಗಳು ಸಿಗಲಿವೆ. ಆರು ಸ್ಥಾನಗಳಿಗೆ ಕಾಂಗ್ರೆಸ್‌ನಲ್ಲಿ 12 ಕ್ಕೂ ಅಧಿಕ ಜನರು ಆಕಾಂಕ್ಷಿಗಳಾಗಿದ್ದಾರೆ.

ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ : ಸದ್ಯದ ಮಾಹಿತಿ ಪ್ರಕಾರ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಮೊದಲೇ ಸಂಪುಟ ವಿಸ್ತರಣೆಯಾಗಲಿದೆ. ಡಿಸೆಂಬರ್ 10 ರಿಂದ ಅಧಿವೇಶನ ಆರಂಭವಾಗಲಿದೆ.

English summary
Babaleshwar Congress MLA and Former minister M.B.Patil demanded for cabinet expansion. 8 minister post vacant in Chief Minister H.D.Kumaraswamy cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X