ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವುದು ಬಿಜೆಪಿ ಅಜೆಂಡಾ: ದಿನೇಶ್ ಗುಂಡೂರಾವ್

By ವಿಜಯಪುರ ಪ್ರತಿನಿಧಿ
|
Google Oneindia Kannada News

ವಿಜಯಪುರ, ಡಿಸೆಂಬರ್ 13: "ಬಿಜೆಪಿ ಕಾರ್ಯಕರ್ತರೇ ಕೋಮು ಗಲಭೆ ಸೃಷ್ಟಿಸುತ್ತಿದ್ದಾರೆ ಮತ್ತು ಗಲಾಟೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವುದು ಬಿಜೆಪಿ ಅಜೆಂಡವಾಗಿದೆ," ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದರು.

ವಿಜಯಪುರದಲ್ಲಿ ಇಂದು ಮಾತನಾಡಿದ ಅವರು, ಉತ್ತರ ಕನ್ನಡದ ಕುಮುಟಾ ಹಾಗೂ ಶಿರಸಿ ಕೋಮ ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವ ಕೆಲಸವನ್ನು ರಾಜ್ಯ ಸರಕಾರ ಹಾಗೂ ಪೊಲೀಸ್ ಇಲಾಖೆ ಮಾಡುತ್ತಿದೆ ಎಂದು ಹೇಳಿದರು.

Creating anarchy in the state is BJP’s agenda: Dinesh Gundu Rao

"ಕೋಮ ಗಲಭೆ ಸೃಷ್ಟಿಸುವುದು ಬಿಜೆಪಿಯ ಉದ್ದೇಶವಾಗಿದೆ. ಬಿಜೆಪಿಯ ಪರಿವರ್ತನಾ ಯಾತ್ರೆಯ ಅಜೆಂಡಾ ಇಡೀ ರಾಜ್ಯದಲ್ಲಿ ಹಿಂಸೆಯನ್ನು ಸೃಷ್ಟಿಸುವುದಾಗಿದೆ," ಎಂದು ಗುಂಡೂರಾವ್ ವಾಗ್ದಾಳಿ ನಡೆಸಿದರು.

"ರಾಜ್ಯದಲ್ಲಿ ಬಿಜೆಪಿ ಕೆಟ್ಟ ವಾತಾವರಣವನ್ನು ನಿರ್ಮಾಣ ಮಾಡುತ್ತಿದೆ. ಹಾಗೂ ಬೇಜವಾಬ್ದಾರಿ ರೀತಿಯಲ್ಲಿ ವರ್ತಿಸುತ್ತಿದೆ. ಬಿಜೆಪಿಯವರು ಉದ್ದೇಶ ಪೂರ್ವಕವಾಗಿ ಗಲಾಟೆ ಆಗಲಿ ಅಂತಾ ಆಸೆ ಪಡುತ್ತಿದ್ದಾರೆ," ಎಂದು ಅವರು ಟೀಕಿಸಿದರು.

"ಎರಡು ಕಡೆ ಗೋಲಿಬಾರ್ ಆದರೂ ಬಿಜೆಪಿಯವರಿಗೆ ಸಮಸ್ಯೆ ಇಲ್ಲ," ಎಂದು ದಿನೇಶ್ ಗುಂಡೂರಾವ್ ಇದೇ ವೇಳೆ ಆರೋಪಿಸಿದರು.

English summary
Karnataka BJP activists busy creating communal riot in the state. This is sole agenda of the party said Dinesh Gundu Rao, executive president of KPCC. He was speaking to media persons in Vijayapura, North Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X