ಸರ್ಕಾರಕ್ಕೆ ಜನ-ಜಾನುವಾರುಗಳ ಶಾಪ ತಟ್ಟಿದೆ: ರಮೇಶ್ ಜಿಗಜಿಣಗಿ
ವಿಜಯಪುರ, ಜೂನ್ 13: ರಾಜ್ಯದ ಮೈತ್ರಿ ಸರ್ಕಾರಕ್ಕೆ ಜನ-ಜಾನುವಾರುಗಳ ಶಾಪ ತಟ್ಟಿದೆ ಎಂದು ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಹೇಳಿದರು.
ವಿಜಯಪುರದಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಬಳಿ ಒಂದು ರೂಪಾಯಿ ಕೂಡ ಹಣ ಇಲ್ಲ. ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದರು.
ಸಂಪುಟ ವಿಸ್ತರಣೆ : ಎರಡು ಖಾತೆಗಳಿಗೆ ಕಾಂಗ್ರೆಸ್ ಬೇಡಿಕೆ?
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಒಂದು ನಾಟಕ. ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಾಸ್ತವ್ಯ ಹೂಡಿದ್ದ ಗ್ರಾಮಗಳು ಇಂದಿಗೂ ಅಭಿವೃದ್ಧಿಯಾಗಿಲ್ಲ. ರಾಜ್ಯದ ಜನರು ಕುಡಿಯಲು ನೀರು ಸಿಗದೆ ಸಾಯುತ್ತಿದ್ದಾರೆ. ಮುಖ್ಯಮಂತ್ರಿ ಮೊದಲು ಅಭಿವೃದ್ಧಿಯ ಕಡೆಗೆ ಗಮನ ಹರಿಸಲಿ ಎಂದು ಟೀಕಿಸಿದರು.
ಬಿಗ್ ಬ್ರೇಕಿಂಗ್ : ಕರ್ನಾಟಕ ಕಾಂಗ್ರೆಸ್ನಲ್ಲಿ ಮೂರು ಮಹತ್ವದ ಬದಲಾವಣೆ!
ಐಎಂಎ ಬಹುಕೋಟಿ ವಂಚನೆ ಹಗರಣದ ಬಗ್ಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಆಳವಾದ ತನಿಖೆ ನಡೆಯಬೇಕು. ಬಳಿಕ ತಪ್ಪಿತಸ್ಥರನ್ನು ನೇಣಿಗೆ ಹಾಕಬೇಕು. ಇದೊಂದು ಅತ್ಯಂತ ಹೇಯ ಕೃತ್ಯ. ಜನರು ಕೂಡ ಎಚ್ಚೆತ್ತುಕೊಳ್ಳಬೇಕು. ಬಡ್ಡಿ ಆಸೆಗೆ ಮರುಳಾಗಬಾರದು. ರಾಜ್ಯ ಸರ್ಕಾರ ಇಂತಹ ವ್ಯವಹಾರ ನಡೆಸುವವರ ಮೇಲೆ ನಿಗಾ ವಹಿಸಬೇಕು ಎಂದು ಹೇಳಿದರು.