ಕಾಂಗ್ರೆಸ್ ನಲ್ಲಿರುವ ದಲಿತರು ಪಾಪಿಷ್ಠರು: ರಮೇಶ್ ಜಿಗಜಿಣಗಿ
ವಿಜಯಪುರ, ಫೆಬ್ರವರಿ 15: ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿ ಆಗಬೇಕು ಅನ್ನುವುದು ನನ್ನ ಅಭಿಮತ. ಆದರೆ ಅದಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಇಲ್ಲಿ ಗುರುವಾರ ಹೇಳಿದರು.
ಬಿಜೆಪಿ ಅಧಿಕಾರಕ್ಕೆ ಬಂದರೆ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿ. ಇನ್ನು ಯಾವ ಬೋಳಪ್ಪ ಬಂದರೂ ಮುಖ್ಯಮಂತ್ರಿ ಆಗಲು ಬಿಡುವುದಿಲ್ಲ. ಯಡಿಯೂರಪ್ಪ ಅವರ ನಂತರ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ ಎಂದರು.
ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿ ಆಗಬೇಕು ಎಂಬ ಬಗ್ಗೆ ಎರಡು ಮಾತಿಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಗೆ ಮೋಸ ಮಾಡಿದ ಕಾಂಗ್ರೆಸ್, ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಆಗಲು ಬಿಟ್ಟಿಲ್ಲ. ಅವರನ್ನು ಮೂಲೆ ಗುಂಪು ಮಾಡಿದೆ ಎಂದು ಹೇಳಿದರು.

ದಲಿತರು ಪಾಪಿಷ್ಠರು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ದಲಿತರು ಪಾಪಿಷ್ಠರಾಗಿದ್ದರೆ ಅದು ಕಾಂಗ್ರೆಸ್ ನಲ್ಲಿ ಇರುವವರು ಮಾತ್ರ. ಬಿಜೆಪಿಯಲ್ಲಿ ದಲಿತರು ಯಾರೂ ಪಾಪಿಷ್ಠರಲ್ಲ ಎಂದು ರಮೇಶ ಜಿಗಜಿಣಗಿ ಹೇಳಿದರು.
ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಳಪೆ ಕಾಲುವೆ ನಿರ್ಮಾಣ ಮಾಡಿದ್ದಾರೆ. ಜಿಲ್ಲೆಯ ಜನರಿಗೆ ಸಚಿವ ಎಂ.ಬಿ. ಪಾಟೀಲ ಮೋಸ ಮಾಡಿದ್ದಾರೆ. ಕಳಪೆ ಕಾಮಗಾರಿ ಮಾಡಿ ಹಣ ತಿಂದಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಒಂದು ಕಡೆ ಚುನಾವಣೆ ಹತ್ತಿರ ಬಂದಿದೆ. ಚುನಾವಣಾ ಖರ್ಚು ಹೋಗಬೇಕು. ಜನರಿಗೆ ಮೋಸ ಮಾಡಿ ಮತ ತೆಗೆದುಕೊಳ್ಳಬೇಕು. ಜಿಲ್ಲೆಯ ಜನರು ಎಂ.ಬಿ.ಪಾಟೀಲರನ್ನು ಕ್ಷಮೆ ಮಾಡಲ್ಲ. ಬಿಜೆಪಿ ಕಾರ್ಯಕರ್ತರು ಕಳಪೆ ಕಾಮಗಾರಿ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಾ ಇದ್ದಾರೆ ಎಂದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications