"ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ಅನುಮತಿ ಬೇಕೇ": ಎಂ ಬಿ ಪಾಟೀಲ್
ವಿಜಯಪುರ, ಜುಲೈ 14: ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವುದಕ್ಕೆ ತಮಿಳುನಾಡು ಸರ್ಕಾರದ ಅನುಮತಿ ಕೇಳಬೇಕೇ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಎಂ ಬಿ ಪಾಟೀಲ್ ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಜಾರಿಗೊಳಿಸುವುದರಿಂದ ತಮಿಳುನಾಡಿಗೂ ಸಹ ಅನುಕೂಲವಾಗಲಿದೆ ಎಂದರು. ಇಂಥ ಸಂದರ್ಭದಲ್ಲಿ ತಮಿಳುನಾಡು ವಾದಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಅದರ ಬದಲಿಗೆ ಕಾನೂನಾತ್ಮಕ ಹಾಗೂ ತಾಂತ್ರಿಕವಾಗಿ ಯೋಜನೆ ಮುಂದುವರಿಸುವಂತೆ ಆಗ್ರಹಿಸಿದ್ದಾರೆ.
Recommended Video

ಮೇಕೆದಾಟು ಯೋಜನೆಯನ್ನು ತಡೆಯುವುದಕ್ಕೆ ಕೇಂದ್ರ ಸರ್ಕಾರದ ಮೇಲೆ ತಮಿಳುನಾಡು ಸರ್ಕಾರವು ರಾಜಕೀಯ ಒತ್ತಡವನ್ನು ಹಾಕಿದರೆ ಅದು ರಾಜಕೀಯವಾಗುತ್ತದೆ. ನಾವೂ ಕೂಡಾ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಕೂಡಲೇ ಮಾಜಿ ಮುಖ್ಯಮಂತ್ರಿಗಳು, ಮಾಜಿ ಜಲಸಂಪನ್ಮೂಲ ಸಚಿವರು ಸೇರಿದಂತೆ ಸರ್ವಪಕ್ಷ ಸಭೆ ಕರೆಯುವಂತೆ ಎಂ ಬಿ ಪಾಟೀಲ್ ಆಗ್ರಹಿಸಿದ್ದಾರೆ.

ಮೇಕೆದಾಟು ಯೋಜನೆ ಕರ್ನಾಟಕದ ಹಕ್ಕು:
ಮೇಕೆದಾಟು ಯೋಜನೆ ಎಂಬುದು ನಮ್ಮ ರಾಜ್ಯದ ಹಕ್ಕು. ತಮಿಳುನಾಡು ಈ ವಿಷಯದಲ್ಲಿ ತಕರಾರು ತೆಗೆಯುವುದಕ್ಕೆ ನಮ್ಮ ರಾಜ್ಯದವರು ತೆಲೆ ಕೆಡಿಸಿಕೊಳ್ಳಬೇಕಾಗಿಲ್ಲ. ನಮ್ಮ ರಾಜ್ಯ ಸರ್ಕಾರ ಮೊದಲಿನಂತೆ ಮುಂದುವರಿಯಬೇಕು. ಆ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಕಾಂಗ್ರೆಸ್ ಪಕ್ಷವು ಈ ಯೋಜನೆ ಜಾರಿಗೆ ಸಂಪೂರ್ಣ ಸಹಕಾರ ಕೊಡುತ್ತದೆ. ನಾನೂ ಕೂಡಾ ಮಾಜಿ ನೀರಾವರಿ ಸಚಿವನಾಗಿ ಸಂಪೂರ್ಣ ಸಹಕಾರ ನೀಡುವುದಾಗಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ವಿಡಿಯೋ ನೋಡಿ..
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications