ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರ, ಕಲಬುರಗಿಯಲ್ಲಿ ಭೂಮಿ ಕಂಪಿಸಿದ ಅನುಭವ

By ವಿಜಯಪುರ ಪ್ರತಿನಿಧಿ
|
Google Oneindia Kannada News

ವಿಜಯಪುರ, ಸೆಪ್ಟೆಂಬರ್ 17: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಿನ್ನೆ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ತಿಳಿದುಬಂದಿದೆ.

ನಿನ್ನೆ ರಾತ್ರಿ 11:30ರ ಸುಮಾರಿಗೆ ಭೂಮಿ ಕಂಪಿಸಿದಂತಾಗಿ, ಮಲಗಿದ್ದ ಜನರು ಎಚ್ಚರಗೊಂಡು ಮನೆಯಿಂದ ಹೊರಗೆ ಬಂದಿದ್ದಾರೆ. ಭೂಕಂಪದ ಭಯದಿಂದ ಮನೆಯ ಹೊರಗಡೆಯೇ ಕುಳಿತು ರಾತ್ರಿ ಕಳೆದಿದ್ದಾರೆ.

 ಕೊಡಗಿನಲ್ಲಿ ಭೂಮಿಯೊಳಗಿಂದ ಪದೇ ಪದೇ ವಿಚಿತ್ರ ಶಬ್ದ! ಕಾರಣ ಬಿಚ್ಚಿಟ್ಟ ತಜ್ಞರು ಕೊಡಗಿನಲ್ಲಿ ಭೂಮಿಯೊಳಗಿಂದ ಪದೇ ಪದೇ ವಿಚಿತ್ರ ಶಬ್ದ! ಕಾರಣ ಬಿಚ್ಚಿಟ್ಟ ತಜ್ಞರು

ಇದು ನಿಜವಾಗಿಯೂ ಭೂಕಂಪವೋ ಅಥವಾ ಭೂಮಿ ಕಂಪಿಸಿದ ಅನುಭವವಾಗಲು ಬೇರೇನಾದರೂ ಕಾರಣಗಳಿವೆಯಾ ಎಂಬುದರ ಕುರಿತು ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ. ಈ ಕುರಿತು ವಿಜಯಪುರ ಜಿಲ್ಲಾಡಳಿತವೂ ಯಾವುದೇ ಮಾಹಿತಿ ನೀಡಿಲ್ಲ. ವಿಜಯಪುರದ ಮನಗೂಳಿ ಮತ್ತು ಸುತ್ತಮುತ್ತಲಿನ ಜನಕ್ಕೆ ಈ ಅನುಭವವಾಗಿರುವುದಾಗಿ ತಿಳಿಸಿದ್ದಾರೆ. ಆದರೆ ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿ ಭೂಕಂಪವಾಗಿಲ್ಲ. ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಸಿಸ್ಮಿಕ್ ಸೆಂಟರ್​ನಲ್ಲಿ ಭೂಮಿ ಕಂಪಿಸಿದ ಬಗ್ಗೆ ಯಾವುದೇ ಅಂಶಗಳು ದಾಖಲಾಗಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣ ಕೇಂದ್ರದ ಮಾಹಿತಿ ನೀಡಿದೆ.

Earthquake Experience At Vijayapura And Kalaburagi Districts

Recommended Video

Modi ಹುಟ್ಟಿದ ಹಬ್ಬಕ್ಕೆ ಯಾರೆಲ್ಲಾ ಶುಭಾಶಯ ಕೋರಿದ್ದಾರೆ ನೋಡಿ | Oneindia Kannada

ವಿಜಯಪುರದಲ್ಲಷ್ಟೇ ಅಲ್ಲದೇ ಕಲಬುರಗಿ ಜಿಲ್ಲೆಯಲ್ಲೂ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ತಿಳಿದುಬಂದಿದೆ. ಜೊತೆಗೆ, ವಿಚಿತ್ರ ಶಬ್ದ ಕೇಳಿಸಿರುವುದಾಗಿ ತಿಳಿದುಬಂದಿದೆ.

English summary
People experienced earthquake like situation last night in the Managoli town of Basavanagi taluk in Vijayapur district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X