Breaking: ವಿಜಯಪುರದಲ್ಲಿ ಮತ್ತೆ ಭೂಕಂಪನ, 3.9 ತೀವ್ರತೆ ದಾಖಲೆ
ವಿಜಯಪುರ, ಆಗಸ್ಟ್ 26: ವಿಜಯಪುರದಲ್ಲಿ ಮತ್ತೆ ಮತ್ತೆ ಭೂಕಂಪನ ವರದಿಯಾಗುತ್ತಲೇ ಇದೆ. ಗುರುವಾರ ತಡರಾತ್ರಿ ಮತ್ತೊಂದು ಭೂಕಂಪ ವರದಿಯಾಗಿದೆ.
ಮಧ್ಯರಾತ್ರಿ 2 ಗಂಟೆಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಕವಲಗಿ ಗ್ರಾಮದಲ್ಲಿ 10 ಕಿ.ಮೀ ಆಳದಲ್ಲಿದೆ.
ಇದು ಕಳೆದ 1 ವಾರದಲ್ಲಿ ವರದಿಯಾದ 10 ನೇ ಭೂಕಂಪವಾಗಿದೆ.
ಜಿಲ್ಲೆಯಲ್ಲಿ ಸತತ ಒಂದು ವಾರದಿಂದ ಭೂಮಿ ಕಂಪಿಸುತ್ತಲೇ ಇದೆ. ಇದರಿಂದಾಗಿ ಗುಮ್ಮಟ ನಗರಿಯ ಜನರಲ್ಲಿ ಆತಂಕ ಮನೆ ಮಾಡಿದೆ.

ಕಳೆದ ಸೋಮವಾರ ಸಾಯಂಕಾಲ 4:26ಕ್ಕೆ ಕೂಡ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆ ದಾಖಲಾಗಿತ್ತು. ನಗರದ ರೈಲ್ವೆ ಸ್ಟೇಷನ್ ಏರಿಯಾ, ಗೋಳಗುಮ್ಮಟ ಏರಿಯಾ ಸೇರಿದಂತೆ ಬಹುತೇಕ ಕಡೆಗಳಲ್ಲಿ ಭೂಮಿಯಲ್ಲಿ ಸದ್ದು ಕೇಳಿಬಂದಿತ್ತು.
ಕವಲಗಿ ಗ್ರಾಮದಲ್ಲಿ ವರದಿಯಾಗಿರುವಂತೆಯೇ ಭೂಮಿಯ 10 ಕೀಮೀ ಆಳದಲ್ಲಿ ತರಂಗಗಳು ಸೃಷ್ಟಿಯಾಗಿವೆ ಎಂದು ಜಿಲ್ಲಾಡಳಿತ ವರದಿ ಮಾಡಿತ್ತು. ಸೋಮವಾರ ರಾತ್ರಿ 9.22ರ ವೇಳೆಗೂ ಕೆಲ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿರುವ ವರದಿ ಬಂದಿದೆ.
ವಿಜಯಪುರ ನಗರ, ಸಿಂದಗಿ, ಇಂಡಿ, ಬಸವನಬಾಗೇವಾಡಿ, ನೆರೆಯ ಬಾಗಲಕೋಟೆಯ ಜಮಖಂಡಿ ಹಾಗೂ ನೆರೆಯ ಮಹಾರಾಷ್ಟ್ರದ ಸೊಲ್ಲಾಪುರದಲ್ಲೂ ಕಂಪನದ ಅನುಭವ ಉಂಟಾಗಿದೆ.
ಪದೇ ಪದೇ ಭೂಮಿ ಕಂಪಿಸುತ್ತಿರುವುದರಿಂದ ಜಿಲ್ಲೆಗೆ ವಿಜ್ಞಾನಿ ತೆರಳಿ ಪರೀಕ್ಷೆ ನಡೆಸುವ ಸಾಧ್ಯತೆಗಳಿವೆ.
ಕಳೆದ ವಾರ ವಿಜಯಪುರ ಜಿಲ್ಲೆಯ ತಿಕೋಟಾ, ಬಬಲೇಶ್ವರ, ಬಸವನಬಾಗೇವಾಡಿ ತಾಲೂಕುಗಳು ಸೇರಿದಂತೆ ಇತರೆ ಭಾಗಗಳಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ಭೂಕಂಪನ ಅನುಭವವಾಗುತ್ತಿದ್ದಂತೆ ಜನರು ಆತಂಕದಿಂದ ಮನೆಯಿಂದ ಆಚೆ ಬಂದಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಈವರೆಗೆ 19ನೇ ಬಾರಿ ಭೂಕಂಪಿಸಿದೆ. ಮೇಲಿಂದ ಮೇಲೆ ಭೂಕಂಪನ ಆಗುತ್ತಿರೋದಕ್ಕೆ ಜನ ಭಯಭೀತರಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications