ಹೊಸ ಚಿನ್ಹೆ ನಿರೀಕ್ಷೆಯಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್
ವಿಜಯಪುರ, ಮಾರ್ಚ್ 12: ಕೂಡ್ಲಿಗಿಯ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಅವರ ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷ ಈಗ ಹೊಸ ಚಿನ್ಹೆಯ ನಿರೀಕ್ಷೆಯಲ್ಲಿದೆ.
ಕೇಂದ್ರ ಚುನಾವಣಾ ಆಯೋಗವು ಮಾರ್ಚ್ 13ರಂದು ಅಧಿಕೃತ ಚಿನ್ಹೆ ನೀಡುವ ಸಾಧ್ಯತೆಯಿದೆ. ಈ ಬಗ್ಗೆ ಬಳ್ಳಾರಿ ಜಿಲ್ಲೆ ಕೊಟ್ಟೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದ ಅನುಪಮಾ ಅವರು, ತಾವು ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದರು.
ಕೇಂದ್ರ ಚುನಾವಣಾ ಆಯೋಗವು ಚಿನ್ಹೆ ನೀಡಿದ ಬಳಿಕ ಮಾರ್ಚ್ 15ರಂದು ಬಸವನ ಬಾಗೇವಾಡಿಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಪಕ್ಷದ ಅಧ್ಯಕ್ಷೆ ಅನುಪಮಾ ಶೆಣೈ ಹೇಳಿದರು.
ಈ ಬಾರಿ ಚುನಾವಣೆಯಲ್ಲಿ ತಾವು ಕಾಪು ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಕಾರ್ಯಕರ್ತರು ಬಳ್ಳಾರಿ ಜಿಲ್ಲೆಯಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯಿಸಿದ್ದಾರೆ. ಆದರೆ ನಾನು ಈ ಬಗ್ಗೆ ನಿರ್ಧಾರ ಮಾಡಿಲ್ಲ ಎಂದರು.

ಯಾವ ಯಾವ ಚಿನ್ಹೆಗಾಗಿ ಬೇಡಿಕೆ
ಪೆನ್ನು, ತೆಂಗಿನಕಾಯಿ, ಮೇಣಸಿನಕಾಯಿ, ದೋಣಿ ಮತ್ತು ಮನುಷ್ಯ ಸೇರಿದಂತೆ 10 ಲಭ್ಯ ಗುರುತುಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿತ್ತು. ಈ ಪೈಕಿ ಒಂದನ್ನು ಆಯ್ಕೆ ಮಾಡಿ ಆಯೋಗ ಸೂಚಿಸಲಿದೆ. ಯಾವುದು ಎಂಬುದು ಮಾರ್ಚ್ 13ರ ವೇಳೆಗೆ ತಿಳಿಯಲಿದೆ.
Recommended Video


ಯಾವ ಕ್ಷೇತ್ರ ಎಂದು ನಿರ್ಧರಿಸಿಲ್ಲ
ಈ ಬಾರಿ ಚುನಾವಣೆಯಲ್ಲಿ ತಾವು ಕಾಪು ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಕಾರ್ಯಕರ್ತರು ಬಳ್ಳಾರಿ ಜಿಲ್ಲೆಯಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯಿಸಿದ್ದಾರೆ. ಆದರೆ ನಾನು ಈ ಬಗ್ಗೆ ನಿರ್ಧಾರ ಮಾಡಿಲ್ಲ ಎಂದರು.

ಪ್ರಜಾಕೀಯದ ಜತೆ ಹೊಂದಾಣಿಕೆ
ಉಪೇಂದ್ರರವರ ಪಕ್ಷದೊಂದಿಗೆ ಹೊಂದಾಣಿಕೆ ಕುರಿತು ಕೇಳಿದ ಪ್ರಶ್ನೆಗೆ, ಸಮಾನ ಮನಸ್ಕರು ಸೇರಿ ಚುನಾವಣೆ ಎದುರಿಸಬೇಕು ಎಂದುಕೊಂಡು ಅವರೊಂದಿಗೆ ಎರಡು ಬಾರಿ ಸಮಾಲೋಚನೆ ನಡೆಸಿದೆ. ಆದರೆ ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳದೇ ಸುಮ್ಮನೆ ನನ್ನನ್ನು ಸುತ್ತಾಡಿಸಿದರು. ಅವರ ಪಕ್ಷದ ನೋಂದಣಿಗೆ ಇನ್ನೂ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿಲ್ಲ ಎಂದಿದ್ದರು. ಆದರೆ, ಕೆಪಿಜೆಪಿ ಎಂಬ ನೋಂದಾಯಿತ ಪಕ್ಷದ ಜತೆ ಗುರುತಿಸಿಕೊಂಡರು. ಈಗ ಪ್ರಜಾಕೀಯ ಎನ್ನುತ್ತಿದ್ದಾರೆ. ಗೊಂದಲ ನಿವಾರಣೆಯಾಗುವ ತನಕ ಈ ಬಗ್ಗೆ ಮಾತುಕತೆ ಮಾಡುವುದಿಲ್ಲ

ಜನರ ಹಿತವನ್ನು ಕಾಯಲು ಪಕ್ಷ
ಮೊದಲ ಹಂತದಲ್ಲಿ 80 ಕ್ಷೇತ್ರಗಳನ್ನು ಪ್ರಮುಖವಾಗಿ ಪರಿಗಣಿಸಿದ್ದೇವೆ, ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಗಳನ್ನು ಕಣಕ್ಕಿಳಿಸುವ ಇರಾದೆ ಇದೆ.
ನಾನು ಕೆಲಸ ಮಾಡುವ ಸಂದರ್ಭದಲ್ಲಿ ನನ್ನ ಮೇಲೆ ರಾಜಕೀಯ ಪ್ರಯೋಗ ಮಾಡಿದರು. ಹಾಗಾಗಿ ರಾಜಕೀಯ ಪ್ರವೇಶ ಮಾಡಬೇಕಾಯಿತು. ಇದರ ಹಿನ್ನಲೆಯಲ್ಲಿ ರಾಜಕೀಯದಲ್ಲಿ ಪೊಲೀಸ್ ಶಕ್ತಿಯನ್ನು ಬಳಸಿ ಭ್ರಷ್ಟಾಚಾರವನ್ನ ನಿರ್ಮೂಲನೆ ಮಾಡಲು ಇಚ್ಛಿಸುತ್ತೇನೆ. ಸಂವಿಧಾನಕ್ಕೆ ಹೆಚ್ಚು ಒತ್ತುಕೊಟ್ಟು ಜನರಿಗೆ ಮತ್ತು ಸರ್ಕಾರಿ ನೌಕರರಿಗೆ ನೆಮ್ಮದಿ ಜೀವನ ನೀಡುವುದು ನಮ್ಮ ಮುಖ್ಯ ಗುರಿ ಎಂದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications