ಗಣೇಶ ಚತುರ್ಥಿ : ಮೈಸೂರು-ವಿಜಯಪುರ ನಡುವೆ ವಿಶೇಷ ರೈಲು
ವಿಜಯಪುರ, ಆಗಸ್ಟ್ 28 : ಗಣೇಶ ಚತುರ್ಥಿ ಅಂಗವಾಗಿ ನೈಋತ್ಯ ರೈಲ್ವೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಮೈಸೂರು-ವಿಜಯಪುರ ನಡುವೆ ಈ ರೈಲು ಸಂಚಾರ ನಡೆಸಲಿದೆ. ಬೆಂಗಳೂರು-ಬೆಳಗಾವಿ ನಡುವೆಯೂ ರೈಲಿನ ವ್ಯವಸ್ಥೆ ಮಾಡಲಾಗಿದೆ.
ರೈಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಸೂಚನೆಯಂತೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ಈ ರೈಲಿನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದೆ.
ರೈಲು ಸಂಖ್ಯೆ 06583 ಶುಕ್ರವಾರ (ಆಗಸ್ಟ್ 30) ಮೈಸೂರಿನಿಂದ ಮಧ್ಯಾಹ್ನ 12.50ಕ್ಕೆ ಹೊರಡಲಿದ್ದು, ಶನಿವಾರ ಬೆಳಗ್ಗೆ 10.20ಕ್ಕೆ ವಿಜಯಪುರ ತಲುಪಲಿದೆ. ರೈಲು ಸಂಖ್ಯೆ 06584 ಸೆಪ್ಟೆಂಬರ್ 2ರ ಸೋಮವಾರ ಸಂಜೆ 6 ಗಂಟೆಗೆ ವಿಜಯಪುರದಿಂದ ಹೊರಡಲಿದ್ದು, ಮರುದಿನ ಮಧ್ಯಾಹ್ನ 1.05ಕ್ಕೆ ಮೈಸೂರು ತಲುಪಲಿದೆ.

ನಿಲ್ದಾಣಗಳು : ಮೈಸೂರಿನಿಂದ ಹೊರಡುವ ರೈಲು ಮಂಡ್ಯ, ರಾಮನಗರ, ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಚಿತ್ರದುರ್ಗ, ಬಳ್ಳಾರಿ, ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ, ಆಲಮಟ್ಟಿ, ಬಸವನ ಬಾಗೇವಾಡಿಯಲ್ಲಿ ನಿಲುಗಡೆಗೊಳ್ಳಲಿದೆ.
ಈ ವಿಶೇಷ ರೈಲಿನಲ್ಲಿ ಒಟ್ಟು 16 ಕೋಚ್ಗಳಿದ್ದು, 2 ಸಾಮಾನ್ಯ/ಲಗೇಜ್, 2 ತೃತೀಯ ಎಸಿ, 12 ಸ್ಲೀಪರ್ ಕೋಚ್ಗಳಿವೆ.
ರೈಲು ಸಂಖ್ಯೆ 06585 ಆಗಸ್ಟ್ 31ರ ಶನಿವಾರ ವಿಜಯಪುರದಿಂದ ರಾತ್ರಿ 10 ಗಂಟೆಗೆ ಹೊರಡಲಿದ್ದು, ಹುಬ್ಬಳ್ಳಿಗೆ ರವಿವಾರ ಬೆಳಗ್ಗೆ 4 ಗಂಟೆಗೆ ತಲುಪುವಂತೆ, ರೈಲು ಸಂಖ್ಯೆ 06586 ಹುಬ್ಬಳ್ಳಿಯಿಂದ ಸೆಪ್ಟೆಂಬರ್ 1ರಂದು ರಾತ್ರಿ 10.30ಕ್ಕೆ ಹೊರಟು ವಿಜಯಪುರಕ್ಕೆ ಸೋಮವಾರ 4.45ಕ್ಕೆ ತಲುಪುವಂತೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications