ಗಣೇಶ ಚತುರ್ಥಿ : ಮೈಸೂರು-ವಿಜಯಪುರ ನಡುವೆ ವಿಶೇಷ ರೈಲು
ವಿಜಯಪುರ, ಆಗಸ್ಟ್ 28 : ಗಣೇಶ ಚತುರ್ಥಿ ಅಂಗವಾಗಿ ನೈಋತ್ಯ ರೈಲ್ವೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಮೈಸೂರು-ವಿಜಯಪುರ ನಡುವೆ ಈ ರೈಲು ಸಂಚಾರ ನಡೆಸಲಿದೆ. ಬೆಂಗಳೂರು-ಬೆಳಗಾವಿ ನಡುವೆಯೂ ರೈಲಿನ ವ್ಯವಸ್ಥೆ ಮಾಡಲಾಗಿದೆ.
ರೈಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಸೂಚನೆಯಂತೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ಈ ರೈಲಿನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದೆ.
ಗಣೇಶ ಚತುರ್ಥಿ : ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು
ರೈಲು ಸಂಖ್ಯೆ 06583 ಶುಕ್ರವಾರ (ಆಗಸ್ಟ್ 30) ಮೈಸೂರಿನಿಂದ ಮಧ್ಯಾಹ್ನ 12.50ಕ್ಕೆ ಹೊರಡಲಿದ್ದು, ಶನಿವಾರ ಬೆಳಗ್ಗೆ 10.20ಕ್ಕೆ ವಿಜಯಪುರ ತಲುಪಲಿದೆ. ರೈಲು ಸಂಖ್ಯೆ 06584 ಸೆಪ್ಟೆಂಬರ್ 2ರ ಸೋಮವಾರ ಸಂಜೆ 6 ಗಂಟೆಗೆ ವಿಜಯಪುರದಿಂದ ಹೊರಡಲಿದ್ದು, ಮರುದಿನ ಮಧ್ಯಾಹ್ನ 1.05ಕ್ಕೆ ಮೈಸೂರು ತಲುಪಲಿದೆ.
ಬೆಳಗಾವಿ-ಬೆಂಗಳೂರು ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ ಸೇರ್ಪಡೆ
ನಿಲ್ದಾಣಗಳು : ಮೈಸೂರಿನಿಂದ ಹೊರಡುವ ರೈಲು ಮಂಡ್ಯ, ರಾಮನಗರ, ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಚಿತ್ರದುರ್ಗ, ಬಳ್ಳಾರಿ, ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ, ಆಲಮಟ್ಟಿ, ಬಸವನ ಬಾಗೇವಾಡಿಯಲ್ಲಿ ನಿಲುಗಡೆಗೊಳ್ಳಲಿದೆ.
ಈ ವಿಶೇಷ ರೈಲಿನಲ್ಲಿ ಒಟ್ಟು 16 ಕೋಚ್ಗಳಿದ್ದು, 2 ಸಾಮಾನ್ಯ/ಲಗೇಜ್, 2 ತೃತೀಯ ಎಸಿ, 12 ಸ್ಲೀಪರ್ ಕೋಚ್ಗಳಿವೆ.
ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು ನ.1 ರಿಂದ ಕಾಯಂ
ರೈಲು ಸಂಖ್ಯೆ 06585 ಆಗಸ್ಟ್ 31ರ ಶನಿವಾರ ವಿಜಯಪುರದಿಂದ ರಾತ್ರಿ 10 ಗಂಟೆಗೆ ಹೊರಡಲಿದ್ದು, ಹುಬ್ಬಳ್ಳಿಗೆ ರವಿವಾರ ಬೆಳಗ್ಗೆ 4 ಗಂಟೆಗೆ ತಲುಪುವಂತೆ, ರೈಲು ಸಂಖ್ಯೆ 06586 ಹುಬ್ಬಳ್ಳಿಯಿಂದ ಸೆಪ್ಟೆಂಬರ್ 1ರಂದು ರಾತ್ರಿ 10.30ಕ್ಕೆ ಹೊರಟು ವಿಜಯಪುರಕ್ಕೆ ಸೋಮವಾರ 4.45ಕ್ಕೆ ತಲುಪುವಂತೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.