ಗಂಗಾಧರ ಚಡಚಣ ಹತ್ಯೆ : ಮುಂದಿನ ವಾರ ಸಿಐಡಿಯಿಂದ ಚಾರ್ಜ್ ಶೀಟ್
ವಿಜಯಪುರ, ಆಗಸ್ಟ್ 31 : ಗಂಗಾಧರ ಚಡಚಣ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಗಂಗಾಧರ ಚಡಚಣ ನಿಗೂಢ ನಾಪತ್ತೆ ಮತ್ತು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಮುಂದಿನ ವಾರ ಚಾರ್ಜ್ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಐವರು ಪೊಲೀಸರು ಸೇರಿ 15 ಆರೋಪಿಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.
ಈ ಪ್ರಕರಣದಲ್ಲಿ ಪಿಎಸ್ಐ ಗೋಪಾಲ ಹಳ್ಳೂರ, ಪೇದೆಗಳಾದ ಸಿದ್ದಾರೂಢ ರಾಗಿ, ಚಂದ್ರಶೇಖರ ಜಾಧವ, ಗೆದ್ದಪ್ಪ ನಾಯ್ಕೋಡಿ ಅವರು ಆರೋಪಿಗಳು. ಇನ್ನೊಬ್ಬ ಪೊಲೀಸ್ ಅಧಿಕಾರಿ ತಲೆಮರೆಸಿಕೊಂಡಿದ್ದು, ಸಿಐಡಿ ಹುಡುಕಾಟ ಮುಂದುವರೆಸಿದೆ.

ಪೊಲೀಸ್ ಅಧಿಕಾರಿಗಳು ಮತ್ತು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹಾದೇವ ಭೈರಗೊಂಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂಡಿ ನ್ಯಾಯಾಲಯ ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಕೆಲವು ಆರೋಪಿಗಳು ಗಂಗಾಧರ ಚಡಚಣ ಸಹೋದರ ಧರ್ಮರಾಜ್ ಚಡಚಣ ಎನ್ಕೌಂಟರ್ ಪ್ರಕರಣದಲ್ಲಿಯೂ ಆರೋಪಿಗಳು.
2017ರ ಅಕ್ಟೋಬರ್ 30ರಂದು ವಿಜಯಪುರದಲ್ಲಿ ರೌಡಿ ಶೀಟರ್ ಧರ್ಮರಾಜ್ ಚಡಚಣ ಎನ್ ಕೌಂಟರ್ ನಡೆದಿತ್ತು. ಅಂದು ಪೊಲೀಸರು ಗಂಗಾಧರ ಚಡಚಣನನ್ನು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಗಂಗಾಧರ ಚಡಚಣ ಹತ್ಯೆಯಾದ ವಿಚಾರ ಬೆಳಕಿಗೆ ಬಂದಿತ್ತು.
ಪೊಲೀಸ್ ವಶದಲ್ಲಿದ್ದ ಗಂಗಾಧರ ಚಡಚಣ ಹತ್ಯೆಯಾಗಿದ್ದು ಹೇಗೆ? ಎಂಬುದು ಕುತೂಹಲದ ವಿಚಾರವಾಗಿದೆ. ಅಲ್ಲದೇ ಗಂಗಾಧರ ಚಡಚಣನ ಮೃತದೇಹ ಇನ್ನೂ ಸಿಕ್ಕಿಲ್ಲ. ಕೆಲವು ಪೊಲೀಸರು ಗಂಗಾಧರ ಚಡಚಣನ ವಿರೋಧ ಮಹಾದೇವ ಭೈರಗೊಂಡ ಜೊತೆ ಕೈ ಜೋಡಿಸಿ ಆತನನ್ನು ಹತ್ಯೆ ಮಾಡಿದ್ದಾರೆ ಎಂಬುದು ಆರೋಪವಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications