ಐದು ಕೋಟಿ ಜನರಿಗೆ ಆರೋಗ್ಯ ಸೇವೆ ಖಚಿತ: ಶಿವಾನಂದ್ ಭರವಸೆ

ಬೆಂಗಳೂರು, ಆಗಸ್ಟ್ 11: ಐದು ಕೋಟಿ ಜನರಿಗೆ ಆರೋಗ್ಯ ಸೇವೆಯನ್ನು ಖಚಿತವಾಗಿ ನೀಡುವುದಾಗಿ ಆರೋಗ್ಯ ಸಚಿವ ಶಿವಾನಂದ್ ಪಾಟೀಲ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಕರ್ನಾಟಕ ಯೋಜನೆಯಿಂದ ಜನರಿಗೆ ಅನುಕೂಲವಾಗಲಿದೆ, ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರಿ ಆಸ್ಪತ್ರೆಗಳು ಪೈಪೋಟಿ ನೀಡಬೇಕು, ಯಶಸ್ವಿನಿ ಯೋಜನೆಯಿಂದ 40 ಲಕ್ಷ ಜನರಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಈ ಯೋಜನೆಯಿಂದ 1.30 ಕೋಟಿಯಿಂದ 5 ಕೋಟಿ ಜನರಿಗೆ ಚಿಕಿತ್ಸೆ ದೊರೆಯಲಿದೆ ಎಂದರು.

ಯಶಸ್ವಿನಿ ಯೋಜನೆಯನ್ನು ನಿಲ್ಲಿಸಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಇದರಲ್ಲಿ ಕೆಲವು ವ್ಯತ್ಯಾಸಗಳಿವೆ, ಇದನ್ನು ದೋಷ ಎನ್ನುವುದು ಸರಿಯಲ್ಲ, ಸಾರ್ವಜನಿಕರಿಗೆ ತೊಂದರೆ ನೀಡುವ ಉದ್ದೇಶ ನಮ್ಮದಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Health minister assures Arogya Karnataka scheme will help 5 crore citizens

ಆರೋಗ್ಯ ಕರ್ನಾಟಕ ಯೋಜನೆ ಅನುಷ್ಠಾನಕ್ಕೆ ಬರುವವರೆಗೂ ಯಶಸ್ವಿನಿ ಯೋಜನೆ ಮುಂದುವರೆಯಲಿದೆ. ಈ ಯೋಜನೆಯಿಂದ ಹಿಂದಿನ ಯೋಜನೆಗಿಂತ ಹೆಚ್ಚು ಅನುಕೂಲವಾಗಲಿದೆ ಅಷ್ಟೇ ಹೊರತು ಅದರಿಂದ ಅನನುಕೂಲವಾಗುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+