ಕೃಷ್ಣಾ ನದಿ ನೀರು ಹಂಚಿಕೆ; ಸುಪ್ರೀಂ ಮೊರೆ ಹೋದ ಕರ್ನಾಟಕ
ವಿಜಯಪುರ, ನವೆಂಬರ್ 09; ಕರ್ನಾಟಕ ಸರ್ಕಾರ ಕೃಷ್ಣಾ ನದಿಯ 75 ಟಿಎಂಸಿ ಅಡಿ ನೀರನ್ನು 2022ರ ಜೂನ್ನಿಂದ ಬಳಕೆ ಮಾಡಿಕೊಳ್ಳಲು ಸುಪ್ರೀಂಕೋರ್ಟ್ ಅನುಮತಿ ಕೇಳಿದೆ. 5.94 ಲಕ್ಷ ಹೆಕ್ಟೇರ್ ಪ್ರದೇಶದ ನೀರಾವರಿಗಾಗಿ ಈ ನೀರನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ.
ಕೃಷ್ಣಾ ನದಿ ನೀರು ಹಂಚಿಕೆ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ವೇಳೆ ಕರ್ನಾಟಕ ತಾನು ಇದುವರೆಗೂ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕಾಗಿ 13 ಸಾವಿರ ಕೋಟಿಗೂ ಅಧಿಕ ವೆಚ್ಚ ಮಾಡಲಾಗಿದೆ ಎಂದು ಕೋರ್ಟ್ಗೆ ಮಾಹಿತಿ ನೀಡಿತು.
ಯೋಜನೆ ನೀರನ್ನು ಉಪಯೋಗಿಸಿಕೊಳ್ಳಲು ಎಲ್ಲಾ ಮೂಲ ಸೌಕರ್ಯಗಳು ಸಿದ್ಧವಾಗಿವೆ. ರಾಜ್ಯ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ನೀಡಲು 75 ಟಿಎಂಸಿ ಅಡಿ ನೀರನ್ನು ಬಳಕೆ ಮಾಡಿಕೊಳ್ಳಲು ಮುಂದಾಗಿದೆ. ಜೂನ್ 2022ರ ಬಳಿಕ ನೀರು ಬಳಕೆಗೆ ಒಪ್ಪಿಗೆ ನೀಡಬೇಕು ಎಂದು ಮನವಿ ಮಾಡಲಾಯಿತು.

75 ಟಿಎಂಸಿ ಅಡಿ ನೀರನ್ನು ಬಳಕೆ ಮಾಡಿಕೊಂಡು ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಕೃಷಿ ಭೂಮಿಗೆ ನೀರು ಹರಿಸಲಾಗುತ್ತದೆ ಎಂದು ಕರ್ನಾಟಕ ಹೇಳಿದೆ. ಪ್ರಸ್ತುತ 75 ಟಿಎಂಸಿ ಅಡಿ ನೀರು ಸಮುದ್ರಕ್ಕೆ ಹರಿದು ಹೋಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಕೃಷ್ಣಾ ನದಿ ಪಾತ್ರದ ರೈತರು ಸರ್ಕಾರದ ಮೇಲೆ ಜಮೀನುಗಳಿಗೆ ನೀರು ಹರಿಸಬೇಕು ಎಂದು ಒತ್ತಡ ಹಾಕುತ್ತಿದ್ದಾರೆ ಎಂದು ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಅಫಿಡೆವಿಟ್ನಲ್ಲಿ ಹೇಳಿದೆ. ಅರ್ಜಿಯ ಮುಂದಿನ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ನವೆಂಬರ್ 29ರಂದು ನಡೆಯಲಿದೆ.
ಕೃಷ್ಣಾ ನದಿ ನೀರು ಹಂಚಿಕೆ; ಕೃಷ್ಣಾ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ. ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಹಿರಿಯ ವಕೀಲರಾದ ಶ್ಯಾಂ ದಿವಾನ್ ಮತ್ತು ಮೋಹನ್ ಕಾತರಕಿ ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ.
ಕೃಷ್ಣಾ ಜಲ ವಿವಾದ ನ್ಯಾಯಮಂಡಳಿಯು ನದಿ ಪಾತ್ರದ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರ ಪ್ರದೇಶಗಳಿಗೆ ಕೃಷ್ಣಾ ನದಿ ನೀರನ್ನು ಹಂಚಿಕೆ ಮಾಡಿ ತೀರ್ಪು ನೀಡಿತ್ತು.
ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ ವಿತರಣೆಗೆ ಲಭ್ಯವಿರುವ ಒಟ್ಟು 2060 ಟಿಎಂಸಿ ವಿಧಾನ 'ಎ' ಯ ಅಡಿಯಲ್ಲಿ ಮೂರು ರಾಜ್ಯಗಳಿಗೆ ನದಿ ನೀರು ಹಂಚಿದೆ ಮಾಡಿದೆ. ಅದರ ಅನ್ವಯ ಮಹಾರಾಷ್ಟ್ರಕ್ಕೆ 560 ಟಿಎಂಸಿ, ಕರ್ನಾಟಕಕ್ಕೆ 700 ಟಿಎಂಸಿ, ಆಂಧ್ರ ಪ್ರದೇಶಕ್ಕೆ 800 ಟಿಎಂಸಿ ಹಂಚಿಕೆಯಾಗಿದೆ.
ಪುನರುತ್ಪಾದನೆ ಸೇರಿದಂತೆ, ಕರ್ನಾಟಕದ ಉಪಯೋಗಕ್ಕೆ ಲಭ್ಯವಿರುವ ಒಟ್ಟು ನೀರು 734 ಟಿಎಂಸಿ. ಇದರಲ್ಲಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ 173 ಟಿಎಂಸಿ ನೀರನ್ನು ಮಂಜೂರು ಮಾಡಲಾಗಿದೆ.
ಕೃಷ್ಣಾ ಜಲ ವಿವಾದದ ನ್ಯಾಯಮಂಡಳಿ-2 ಕೃಷ್ಣಾ ನೀರು ಹಂಚಿಕೆ ವಿಧಾನದ ಆದೇಶವನ್ನು ದಿನಾಂಕ 30/12/2010 ರಂದು ಜಾರಿಗೆ ತಂದಿತು. ಹೆಚ್ಚುವರಿ ಹರಿವುಗಳಿಗಾಗಿ ನದಿತೀರದ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರ ಪ್ರದೇಶಕ್ಕೆ ಕೃಷ್ಣಾ ಜಲ ವಿವಾದದ ನ್ಯಾಯಮಂಡಳಿ-2 ಮಾಡಿದ ನೀರಿನ ಹಂಚಿಕೆಯು ವಿವರ ಹೀಗಿದೆ.
ಮಹಾರಾಷ್ಟ್ರ 81 ಟಿಎಂಸಿ, ಕರ್ನಾಟಕ 177 ಟಿಎಂಸಿ, ಆಂಧ್ರ ಪ್ರದೇಶ 190 ಟಿಎಂಸಿ. ಕರ್ನಾಟಕ ರಾಜ್ಯಕ್ಕೆ ಕೊಟ್ಟಿರುವ 177 ಟಿಎಂಸಿಯಲ್ಲಿ 130.90 ಟಿಎಂಸಿಯು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಪಾಲು ಆಗಿರುತ್ತದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications