Get Updates
Get notified of breaking news, exclusive insights, and must-see stories!

ವಿಜಯಪುರ : ಸಿಂಧಗಿ ಬಿಜೆಪಿ ಅಭ್ಯರ್ಥಿ ಬಂಧನ, ಬಿಡುಗಡೆ

ವಿಜಯಪುರ, ಮೇ 07 : ವಿಜಯಪುರ ಜಿಲ್ಲೆಯ ಸಿಂಧಗಿ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ನೀಡಿದ ದೂರಿನ ಹಿನ್ನಲೆಯಲ್ಲಿ ಬಂಧಿಸಲಾಗಿತ್ತು.

ರಮೇಶ ಭೂಸನೂರ ಅವರು ಮುದ್ರಿಸಿ ಹಂಚಿದ್ದ ಮಾದರಿ ಮತಪತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಕ್ರಮಸಂಖ್ಯೆಯನ್ನು ಅದಲು ಬದಲು ಮಾಡಲಾಗಿತ್ತು. ನಿಯಮ ಬಾಹಿರವಾಗಿ ಮತಪತ್ರ ಮುದ್ರಿಸಿ ಹಂಚಿದ ಕಾರಣಕ್ಕೆ ವಿಜಯಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದರು.

ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಸಿ.ಮನಗೂಳಿ ಅವರು ಚುನಾವಣಾ ಆಯೋಗಕ್ಕೆ ಈ ಕುರಿತು ದೂರು ನೀಡಿದ್ದರು. ಚುನಾವಣಾ ಅಧಿಕಾರಿಗಳ ದೂರಿನ ಅನ್ವಯ ಸಿಂಧಗಿ ನಗರ ಠಾಣೆ ಪೊಲೀರು ರಮೇಶ ಭೂಸನೂರ ಅವರನ್ನು ಬಂಧಿಸಿ ಬಿಡುಗಡೆ ಮಾಡಿದರು.

Karnataka elections : Sindagi BJP candidate arrested and released

ಜೆಡಿಎಸ್ ಅಭ್ಯರ್ಥಿ ಎಂ.ಸಿ.ಮನಗೂಳಿ ಅವರ ಕ್ರಮಸಂಖ್ಯೆ 3ರ ಬದಲಿಗೆ 2ಎಂದು ಮಾದರಿ ಮತಪತ್ರದಲ್ಲಿ ಮುದ್ರಿಸಲಾಗಿತ್ತು ಮತ್ತು ಇದನ್ನು ಜನರಿಗೆ ಹಂಚಲಾಗಿತ್ತು. ಈ ಬಗ್ಗೆ ದೂರು ನೀಡಿದ ಹಿನ್ನಲೆಯಲ್ಲಿ ಬಂಧಿಸಿ, ನಂತರ ಬಿಡುಗಡೆ ಮಾಡಿದ್ದಾರೆ.

2013ರ ಚುನಾವಣೆಯಲ್ಲಿ ಸಿಂಧಗಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ ಭೂಸನೂರ ಅವರು 37,834 ಮತಗಳನ್ನು ಪಡೆದು ಜಯಗಳಿಸಿದ್ದರು. ಜೆಡಿಎಸ್‌ನ ಎಂ.ಸಿ.ಮನಗೂಳಿ ಅವರು 37,082 ಮತಗಳನ್ನು ಪಡೆದು ಕೇವಲ 752 ಮತಗಳಿಂದ ಸೋಲು ಕಂಡಿದ್ದರು.

2018ರ ವಿಧಾನಸಭೆ ಚುನಾವಣೆಯಲ್ಲಿಯೂ ಈ ಇಬ್ಬರು ನಾಯಕರು ಮುಖಾಮುಖಿಯಾಗಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಪ್ರಬಲ ಪೈಪೋಟಿ ನಿರೀಕ್ಷೆ ಮಾಡಲಾಗಿದೆ. ಕಾಂಗ್ರೆಸ್‌ನಿಂದ ಮಲ್ಲಣ್ಣ ನಿಂಗಪ್ಪ ಸಾಲಿ ಕಣದಲ್ಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+