ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಲಮೇಲ ಪಟ್ಟಣದಲ್ಲಿ ಕಾಲುವೆ ಒಡೆದು ನಗರ ಸಂಪೂರ್ಣ ಜಲಾವೃತ

By ವಿಜಯಪುರ ಪ್ರತಿನಿಧಿ
|
Google Oneindia Kannada News

ವಿಜಯಪುರ, ಡಿಸೆಂಬರ್19 : ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಆಲಮೇಲ ಪಟ್ಟಣದಲ್ಲಿ ಕಾಲುವೆ ಒಡೆದು ಪಟ್ಟಣಕ್ಕೆ ನೀರು ನುಗ್ಗಿದ ಘಟನೆ ಮಂಗಳವಾರ ನಡೆದಿದೆ.

1,120 ಕೋಟಿ ವೆಚ್ಚದಲ್ಲಿ ಮಲಪ್ರಭಾ ಕಾಲುವೆಗಳ ಆಧುನೀಕರಣ1,120 ಕೋಟಿ ವೆಚ್ಚದಲ್ಲಿ ಮಲಪ್ರಭಾ ಕಾಲುವೆಗಳ ಆಧುನೀಕರಣ

ಕೃಷ್ಣಭಾಗ್ಯ ಜಲ ನಿಗಮದ 16 ನೇ ವಿತರಣಾ ಯೋಜನೆಯಲ್ಲಿ ಕಾಲುವೆ ಒಡೆದು ಅವಾಂತರ ಸೃಷ್ಟಿಸಿದ್ದಾರೆ, ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಆಲಮೇಲ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಬಸ್ ನಗರದಲ್ಲಿರುವ ಮನೆಗಳ ಕಾಂಪೌಂಡ್ ಹಾಗೂ ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ.

Leakage in irrigation canal: water pours Alamela village

ರಸ್ತೆ ಜಲಾವೃತವಾಗಿರುವುದರಿಂದ ಸಂಚಾರ ಅಸ್ತವ್ಯಸ್ತವಾಗಿದೆ. ರಸ್ತೆಯಲ್ಲಿ ಸಂಚರಿಸುವವರು ಪರದಾಡುವಂಆಗಿದೆ. ಕಳೆದ ಮೂರು ವರ್ಷದಗಳ ಹಿಂದೆಯೇ ಕಾಲುವೆ ಒಡೆದಿದೆ. ಪ್ರತಿ ಬಾರಿ ಕಾಲುವೆಗೆ ನೀರು ಹರಿಸಿದಾಗಲೆಲ್ಲ ಬಸವನಗರ ನಿವಾಸಿಗಳು ಸಮಸ್ಯೆ ಎದುರಿಸುತ್ತಿದ್ದಾರೆ.

ಈ ಕುರಿತು ಕೆಬಿಜೆಎನ್ ಎಲ್ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Leakage in irrigation canal: water pours Alamela village: A major leakage in irrigation canal in kbjnl 16th distributor canal caused many areas poured in Alamela village.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X