ಡಿಸಿಎಂ ಸ್ಥಾನಗಳನ್ನು ಕೈಬಿಡುವಂತೆ ಸ್ವಪಕ್ಷದ ಶಾಸಕರಿಂದಲೇ ಒತ್ತಾಯ
ವಿಜಯಪುರ, ಡಿಸೆಂಬರ್ 12: ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿ ಇನ್ನೂ ಎರಡು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಬಗ್ಗೆ ಚಿಂತನೆ ನಡೆಸುತ್ತಿರುವ ಬಿಜೆಪಿಗೆ ಸ್ವಪಕ್ಷದವರಿಂದಲೇ ಅಸಮಾಧಾನ ವ್ಯಕ್ತವಾಗಿದೆ.
ಬಿಜೆಪಿ ಶಾಸಕ, ಮಾಜಿ ಕೇಂದ್ರ ಮಂತ್ರಿ ಬಸನಗೌಡ ಪಾಟೀಲ್ ಅವರು, ತಮ್ಮದೇ ಪಕ್ಷದ ಸರ್ಕಾರದ ಕಿವಿ ಹಿಂಡಿದ್ದು, ಡಿಸಿಎಂ ಹುದ್ದೆಗಳನ್ನು ಕೈಬಿಡಿ ಎಂದು ಒತ್ತಾಯಿಸಿದ್ದಾರೆ.
'ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಸಾಕು, ಉಪಮುಖ್ಯಮಂತ್ರಿಗಳು ಬೇಡ, ಮೂರು-ಮೂರು ಉಪಮುಖ್ಯಮಂತ್ರಿಗಳು ಏಕೆ ಬೇಕು?' ಎಂದು ಪ್ರಶ್ನೆ ಮಾಡಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಹುದ್ದೆಗೆ ಸಂವಿಧಾನಿಕ ಗೌರವ ಇಲ್ಲ, ರಾಜ್ಯದಲ್ಲಿ ಸೃಷ್ಟಿಸಿರುವ ಮೂರು ಉಪಮುಖ್ಯಮಂತ್ರಿ ಸ್ಥಾನವನ್ನು ಆದಷ್ಟು ಶೀಘ್ರ ಕೈಬಿಡಬೇಕು, ಅವರು ಮಂತ್ರಿಗಳಾಗಿರಲಿ ಸಾಕು' ಎಂದು ಯಾತ್ನಾಳ್ ಹೇಳಿದ್ದಾರೆ.
ತಮಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಎದುರಾದ ಪ್ರಶ್ನೆಗೆ ಉತ್ತರಿಸಿದ ಯಾತ್ನಾಳ್, 'ಯಡಿಯೂರಪ್ಪ ಅವರು ಸೂಕ್ತ ಸ್ಥಾನ-ಮಾನ ಕೊಟ್ಟರೆ ಅದನ್ನು ನಿಭಾಯಿಸುತ್ತೇನೆ, ಕೊಟ್ಟರೆ ಸಂತೋಶ, ಕೊಡದೇ ಇದ್ದರೆ ಪರವಾಗಿಲ್ಲ' ಎಂದಿದ್ದಾರೆ.
'ಗೂಟದ ಕಾರಿಗಾಗಿ ಮಂತ್ರಿಗಿರಿಗೆ ಆಸೆ ಪಟ್ಟವನಲ್ಲ, ಜಿಲ್ಲೆಯ ಅಭಿವೃದ್ಧಿ ನನಗೆ ಮುಖ್ಯ, ಜಿಲ್ಲೆಯ ಅಭಿವೃದ್ಧಿಗೆ ಇಂದು ಸಾವಿರಾರು ಕೋಟಿ ಬರುತ್ತಿದೆ, ಅಷ್ಟೇ ಸಾಕು' ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಬಿಜೆಪಿಯ ಗೋವಿಂದ ಕಾರಜೋಳ, ಅಶ್ವತ್ಥನಾರಾಯಣ್, ಲಕ್ಷ್ಮಣ ಸವದಿ ಅವರು ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಪಚುನಾವಣೆ ಮುಗಿದ ಬೆನ್ನಲ್ಲೇ ಇನ್ನೆರಡು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಬಗ್ಗೆ ಚರ್ಚೆ ಎದ್ದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications