ಲಿಂಗಾಯತರು ಹಿಂದುಗಳು ಅಲ್ಲ : ಹಿಂದುಗಳಲ್ಲಿ ಸೇರಿಸಿ ಶೂದ್ರರಾಗಿ ಮಾಡಿದ್ದಾರೆ.
ವಿಜಯಪುರ, ಡಿಸೆಂಬರ್ 05 : ನಾವು ಹಿಂದುಗಳು ಅಲ್ಲ, ನಮ್ಮನ್ನು ಯಾರೋ ಹಿಂದುಗಳಲ್ಲಿ ಸೇರಿಸಿ ಶೂದ್ರರನ್ನಾಗಿ ಮಾಡಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ವಿಜಯಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ ಬಸವಣ್ಣನಿಗೆ ಮಾನ್ಯತೆ ಸಿಗಬೇಕು ಅಷ್ಟೆ. ನಮ್ಮ ಜತೆಗೆ ಬನ್ನಿ ಸಂತೋಷ, ಬರದೇ ಇದ್ದರೆ ವೀರಶೈವ ಸ್ವತಂತ್ರ ಧರ್ಮ ಅಂತ ಹೇಳಿ ಅಭ್ಯಂತರವಿಲ್ಲ. ವೀರಶೈವ ಸ್ವತಂತ್ರ ಧರ್ಮ ಎಂದು ಮೀಸಲಾತಿ ಪಡೆಯಿರಿ ನಮ್ಮ ಅಭ್ಯಂತರ ಇಲ್ಲ ಆದರೆ ವೀರಶೈವ ಲಿಂಗಾಯತ ಎಂದು ಹೇಳಬೇಡಿ ಎಂದು ವೀರಶೈವರಲ್ಲಿ ಮನವಿ ಮಾಡಿದರು
ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸ್ವತಂತ್ರ ಲಿಂಗಾಯತ ಧರ್ಮಕ್ಕೆ ಮಾನ್ಯತೆ ಸಿಗುತ್ತದೆ ಎನ್ನುವ ಭರವಸೆ ಇದೆ ಒಂದು ವೇಳೆ ಕೇಂದ್ರ ಸರ್ಕಾರ ಮಾನ್ಯತೆ ನೀಡದಿದ್ದರೆ ಅನಿವಾರ್ಯವಾಗಿ ಸುಪ್ರೀಂಕೋರ್ಟ್ ಮೆಟ್ಟಿಲು ಏರಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ನಾನು ಈ ಮೊದಲೇ ಹೇಳಿದ್ದೇನೆ ಫೆಬ್ರವರಿಯಲ್ಲಿ ಯಡಿಯೂರಪ್ಪ ಹಗರಣಗಳನ್ನ ಬಿಡುಗಡೆ ಮಾಡುತ್ತೇನೆ. ಯಡಿಯೂರಪ್ಪ ವಿಜಯಪುರ ಜಿಲ್ಲೆಯಲ್ಲಿ ನಡೆಸಿದ ಪರಿವರ್ತನಾ ಮೆರವಣಿಗೆ ಉದ್ದಕ್ಕೂ ನನ್ನ ವಿರುದ್ಧ ಹಗರಣಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಹೇಳುತ್ತಲೇ ಇಡೀ ಮೆರವಣಿಗೆಯನ್ನು ಕಳೆದಿದ್ದಾರೆ ಎಂದರು.
ಯಡಿಯೂರಪ್ಪಗೆ ತಿಳವಳಿಕೆ ಇಲ್ಲ. ಇದೆ ತಿಂಗಳ 15ಕ್ಕೆ ಮಹದಾಯಿಯಲ್ಲಿ ನೀರು ಹರಿಸುತ್ತೇನೆ ಎಂದಿದ್ದಾರೆ ಆದರೆ ಇದು ಅಸಾಧ್ಯ. ಅಲ್ಲಿ ಅಣೆಕಟ್ಟು ಇಲ್ಲ. ಅದು ಹೇಗೆ ನೀರು ಹರಿಸುತ್ತಾರೋ ನಾನು ನೋಡುತ್ತೇನೆ. ಒಂದು ವೇಳೆ ನೀರು ಹರಿಸಿದ್ದೇ ಆದರೆ ಯಡಿಯೂರಪ್ಪ ಭಗೀರತನಗಿಂತಲೂ ದೊಡ್ಡವರಾಗುತ್ತಾರೆಂದು ವ್ಯಂಗ್ಯವಾಡಿದರು.
ಲಿಂಗಾಯತ ಪ್ರತ್ಯೇಕ ಧರ್ಮ ಮೆರವಣಿಗೆಯು ಡಿ.10 ರಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರದ ಅಂಬೇಡ್ಕರ್ ಮೈದಾನದಲ್ಲಿ ನಡೆಯಲಿದೆ. ಗದುಗಿನ ತೋಂಟದ ಶ್ರೀ, ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಸೇರಿದಂತೆ ಅನೇಕ ಸ್ವಾಮಿಜಿಗಳು ಭಾಗಿಯಾಗಿದ್ದಾರೆ.
ಮಾಜಿ ಸಚಿವ.ಬಸವರಾಜ ಹೊರಟ್ಟಿ, ಸಚಿವರಾದ ಬಸವಾರಾಜ ರಾಯರೆಡ್ಡಿ, ವಿನಯ್ ಕುಲಕರ್ಣಿ, ಶರಣಪ್ರಕಾಶ ಪಾಟೀಲ, ಸಂಸದ ಪ್ರಕಾಶ ಹುಕ್ಕೇರಿ ಸೇರಿದಂತೆ ವಿವಿಧ ಮುಖಂಡರು ಭಾಗಿಯಾಗಲಿದ್ದು, ಬಸವಕಲ್ಯಾಣ, ಇಂಗಳೇಶ್ವರ, ಬಸವನಬಾಗೇವಾಡಿ, ಕೂಡಲಸಂಗಮ,ಭಾಲ್ಕಿಯಿಂದ ಆಗಮಿಸಲಿದ್ದಾರೆ ಎಂದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications