ವಿಜಯಪುರಕ್ಕೆ ಸಿಹಿ ಸುದ್ದಿ: 'ಲುಲು' ಗ್ರೂಪ್ನಿಂದ ಭಾರೀ ಮೊತ್ತ ಹೂಡಿಕೆ: 'ಆಹಾರ ಸಂಸ್ಕರಣಾ ಘಟಕ' ಸ್ಥಾಪನೆ
ದಾವೋಸ್, ಜನವರಿ 17: ಕರ್ನಾಟಕ ರಾಜ್ಯದ ವಿಜಯಪುರದಲ್ಲಿ (Vijayapura) ಹೆಸರಾಂತ ಲುಲು ಗ್ರೂಪ್ (Lulu group) ಮತ್ತು ಬಿಎಲ್ ಆಗ್ರೋ ಕಂಪನಿಗಳು ಆಹಾರ ಸಂಸ್ಕರಣೆ ವಲಯದಲ್ಲಿ ಬೃಹತ್ ಮೊತ್ತದ ಹೂಡಿಕೆ ಮಾಡಲಿದೆ. ಈ ಸಂಬಂಧ ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಕೈಗಾರಿಕೆ ಸಚಿವರೂ ಆದ ವಿಜಯಪುರ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಅವರು ಅಧಿಕೃತವಾಗಿ ತಿಳಸಿದ್ದಾರೆ.
ಸ್ವಿಟ್ಜರ್ಲೆಂಡ್ನಲ್ಲಿ ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಸಚಿವರು ಪಾಲ್ಗೊಂಡಿದ್ದಾರೆ. ಎಂಬಿ ಪಾಟೀಲ ಅವರ ಸಮ್ಮುಖದಲ್ಲಿ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತು ಲುಲು ಕಂಪನಿ ವ್ಯವಸ್ಥಾಪಕ ನಿರ್ದೇಶಕ ಯೂಸುಫ್ ಅಲಿ ಅವರು ಒಪ್ಪಂದಕ್ಕೆ ಸಹಿ ಹಾಕಿದರು.

ವಿಜಯಪುರದಲ್ಲಿ ರೂ.300 ಕೋಟಿ ಲುಲು ಹೂಡಿಕೆ
'ಕತಾರ್, ಕುವೈತ್, ಸೌದಿ ಅರೇಬಿಯಾ ಮತ್ತು ಈಜಿಪ್ಟ್ ನಲ್ಲಿ ಹೆಸರು ಮಾಡಿರುವ ಲುಲು ಗ್ರೂಪ್ 250 ಮಾಲ್ ಗಳನ್ನು ಹೊಂದಿದೆ. ಇದೀಗ ಈ ಕಂಪನಿಯು ಉತ್ತರ ಕರ್ನಾಟಕದ ವಿಜಯಪುರದಲ್ಲಿ 300 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ. ಇಲ್ಲಿ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲಿದೆ (Lulu Food Processing Plant-Vijayapura) ಎಂದು ಅವರು ಮಾಹಿತಿ ನೀಡಿದರು.
ಲುಲು ಗ್ರೂಪ್ ಸದ್ಯಕ್ಕೆ ಪ್ರತೀ ತಿಂಗಳು 250 ಟನ್ಗಳಷ್ಟು ಸೀಬೆಹಣ್ಣು, ಸಪೋಟ, ಹಸಿ ಮೆಣಸಿನಕಾಯಿ, ಬೆಂಡೇಕಾಯಿ, ಬದನೆಕಾಯಿ ಇತ್ಯಾದಿಗಳನ್ನು ಖರೀದಿಸುತ್ತಿದೆ. ವಿಜಯಪುರದಲ್ಲಿ ಜೋಳ, ದ್ರಾಕ್ಷಿ, ಹತ್ತಿ, ಕುಸುಬೆ, ಎಳ್ಳು, ಲಿಂಬೆ ಇತ್ಯಾದಿಗಳ ಕಣಜವಾಗಿದೆ. ಲುಲು ಹೂಡಿಕೆಯಿಂದ ಸ್ಥಳೀಯ ರೈತರಿಗೆ ಅನುಕೂಲ ಆಗಲಿದೆ ಎಂದು ಪಾಟೀಲ್ ವಿವರಿಸಿದ್ದಾರೆ.

ವಿಜಯಪುರದಲ್ಲಿ ಮೂಲಸೌಲಭ್ಯ ಕೊರತೆ ಇಲ್ಲ
ವಿಜಯಪುರದಲ್ಲಿ ಜಮೀನು, ನೀರು, ವಿದ್ಯುತ್ ಕೊರತೆ ಇಲ್ಲ. ಸದ್ಯದಲ್ಲೇ ವಿಮಾನ ನಿಲ್ದಾಣವೂ ಉದ್ಘಾಟನೆ ಆಗಲಿದೆ. ಇವೆಲ್ಲವನ್ನೂ ಪರಿಗಣಿಸಿ ವಿಜಯಪುರದಲ್ಲೇ ಹೂಡಿಕೆ ಮಾಡುವಂತೆ ಸಮೂಹದ ಮುಖ್ಯಸ್ಥ ಯೂಸುಫ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶ ಮೂಲದ ಬಿಎಲ್ ಗ್ರೂಪ್ ಕಂಪನಿಯು ದಕ್ಷಿಣ ಭಾರತದಲ್ಲಿ ತನ್ನ ಆಹಾರ ಸಂಸ್ಕರಣ ಘಟಕ ತೆರೆಯಲು ತೀರ್ಮಾನಿಸಿದ್ದು, ಇದಕ್ಕಾಗಿ ವಿಜಯಪುರವನ್ನು ಆಯ್ಕೆ ಮಾಡಿಕೊಂಡಿದೆ. ಈ ಸಂಬಂಧ ಕೂಡ ಒಡಂಬಡಿಕೆಗೆ ಅಂಕಿತ ಹಾಕಲಾಗಿದೆ ಎಂದು ಪಾಟೀಲ ಅವರು ವಿವರಿಸಿದ್ದಾರೆ.
ವಿವಿಧ ಕಂಪನಿಗಳ ಜತೆ ಕರ್ನಾಟಕ ಒಪ್ಪಂದ
ದಾವೋಸ್ ನಲ್ಲಿ ಹಿಟಾಚಿ ಕಂಪನಿ ಜತೆ ಕರ್ನಾಟಕ ಕೈಗಾರಿಕೆ ಅಭಿವೃದ್ಧಿ ಕುರಿತಂತೆ ಸರ್ಕಾರ ಒಪ್ಪಂದ ಮಾಡಿಕೊಂಡಿತು. ಈ ವೇಳೆ ಕೈಗಾರಿಕಾ ಸಚಿವ ಎಂಬ ಪಾಟೀಲ ಇದ್ದರು. ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications