ಮಹಾದೇವ ಭೈರಗೊಂಡ ಕಾರು ಚಾಲಕ ಆಸ್ಪತ್ರೆಯಲ್ಲಿ ಸಾವು

ವಿಜಯಪುರ, ನವೆಂಬರ್ 03: ಮಹಾದೇವ್ ಭೈರಗೊಂಡ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಭೈರಗೊಂಡ ಕಾರಿನ ಮೇಲೆ ಸೋಮವಾರ ಗುಂಡಿನ ದಾಳಿ ನಡೆದಿತ್ತು.

ಮಹಾದೇವ್ ಭೈರಗೊಂಡ ಕಾರು ಚಾಲಕ ಲಕ್ಷ್ಮಣ ದಿಂಡೋರ (27) ವಿಜಯಪುರದ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ಸೋಮವಾರ ಗುಂಡಿನ ದಾಳಿ ನಡೆದಾಗ ಸಾಹುಕಾರ್ ಭೈರಗೊಂಡ ಜೊತೆಗೆ ದಿಂಡೋರ ಸಹ ಗಾಯಗೊಂಡಿದ್ದರು.

ವಿಜಯಪುರ ಜಿಲ್ಲೆಯ ಅರಕೇರಿ ತಾಂಡಾ ಬಳಿ ಸೋಮವಾರ ಸಂಜೆ ಭೀಮಾ ತೀರದ ರೌಡಿ ಶೀಟರ್ ಮಹಾದೇವ್ ಭೈರಗೊಂಡ ಕಾರಿಗೆ ಟಿಪ್ಪರ್ ಲಾರಿಯನ್ನು ಡಿಕ್ಕಿ ಹೊಡೆಸಲಾಗಿತ್ತು. ಬಳಿಕ ಅಪರಿಚಿತರು ಗುಂಡಿನ ದಾಳಿಯನ್ನು ನಡೆಸಿದ್ದರು.

Mahadeva Sahukar Byragonda Car Driver No More

ಮಹಾದೇವ್ ಭೈರಗೊಂಡ ಆಪ್ತರಾದ ಬಾಬುರಾಯ್ ಕಂಚನಾಳಕರ್ (64) ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಮಹಾದೇವ್ ಭೈರಗೊಂಡ, ಲಕ್ಷ್ಮಣ ದಿಂಡೋರರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಅಪರಿಚಿತರು ಮಹಾದೇವ್ ಭೈರಗೊಂಡ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಐಜಿಪಿ ಮಂಗಳವಾರ ಭೇಟಿ ನೀಡಿದ್ದು, ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಮಾಡಿದರು. ಆಸ್ಪತ್ರೆಯಲ್ಲಿ ಮಹಾದೇವ್ ಭೈರಗೊಂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+