ಕನ್ನಡ ಎಂಎಯಲ್ಲಿ ಐದು ಚಿನ್ನದ ಪದಕ ಪಡೆದ ಮಹಾರಾಷ್ಟ್ರದ ಯುವತಿ
ವಿಜಯಪುರ, ಫೆಬ್ರವರಿ 14: ಗಡಿಜಿಲ್ಲೆಗಳಲ್ಲಿ ಎರಡು ರಾಜ್ಯಗಳ ನಡುವಿನ ಸಂಘರ್ಷ ಇಂದು ನಿನ್ನೆಯದ್ದಲ್ಲ. ಭಾಷೆ ಮತ್ತು ಗಡಿ ವಿವಾದ ಎರಡೂ ರಾಜ್ಯಗಳ ನಡುವೆ ರಾಜಕೀಯ ಬಣ್ಣ ಪಡೆದು ಹಲವು ದಶಕಗಳೇ ಆಗಿವೆ. ಅದರ ಜತೆಯಲ್ಲಿಯೇ ಇಲ್ಲಿನ ಜನರು ಸೌಹಾರ್ದದ ಬದುಕನ್ನೂ ಕಂಡುಕೊಂಡಿದ್ದಾರೆ.
ಕನ್ನಡಿಗರು ಮರಾಠಿ ಕಲಿಯುವುದು ಮರಾಠಿಗರು ಕನ್ನಡದಲ್ಲಿ ವ್ಯವಹರಿಸುವುದು ಹೊಸತಲ್ಲ. ಆದರೆ, ಮಹಾರಾಷ್ಟ್ರದ ಯುವತಿಯೊಬ್ಬರು ಬುಧವಾರ ನಡೆದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದಲ್ಲಿ ಮಹಾರಾಷ್ಟ್ರದ ಸುಧಾರಾಣಿ ಶಿವಪ್ಪ ಮನೂರ್ ಕನ್ನಡ ಮಾಧ್ಯಮದಲ್ಲಿ ಸಾಧನೆ ತೋರುವ ಮೂಲಕ ಗಮನ ಸೆಳೆದಿದ್ದಾರೆ.
ಸಾಂಗ್ಲಿ ಜಿಲ್ಲೆಯ ಜಾಟ್ ತಾಲ್ಲೂಕಿನ ಬೆಲ್ಲುಂಡ್ಗಿ ಎಂಬ ಕುಗ್ರಾಮದ ಈ ಯುವತಿ ಕನ್ನಡ ಸ್ನಾತಕೋತ್ತರ ಪದವಿಯಲ್ಲಿ ಐದು ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ.

ಸಾಮಾನ್ಯ ರೈತನ ಮಗಳಾದ ಸುಧಾರಾಣಿ ಅವರ ಕುಟುಂಬದಲ್ಲಿ ಹೆಚ್ಚಿನವರು ಅಕ್ಷರಸ್ಥರಲ್ಲಿ. ಸುಧಾರಾಣಿ ಅವರನ್ನು ಹೊರತುಪಡಿಸಿ ಬೇರಾರೂ ಎಸ್ಎಸ್ಎಲ್ಸಿ ದಾಟಿ ಶಿಕ್ಷಣ ಪಡೆದಿಲ್ಲ. ಆದರೆ, ಇವರು ಮಾತ್ರ ಓದಿನಲ್ಲಿ ಬಹಳ ಚುರುಕು. ದ್ವಿತೀಯ ಪಿಯು ಮತ್ತು ಪದವಿ ಪರೀಕ್ಷೆಗಳಲ್ಲಿಯೂ ಅವರು Rank ಪಡೆದಿದ್ದಾರೆ.
ಎಂಎಯಲ್ಲಿ ಸಾಧನೆ ಮಾಡಿದ ಬಳಿಕ ಇಲ್ಲಿಯೇ ಪಿಎಚ್ಡಿ ಕೂಡ ಮಾಡಲು ಬಯಸಿರುವ ಸುಧಾರಾಣಿ, ಕರ್ನಾಟಕದಲ್ಲಿಯೇ ಕೆಲಸ ಮಾಡಲು ಬಯಸಿದ್ದಾರೆ. ಪ್ರಾಥಮಿಕದಿಂದ ಸ್ನಾತಕೋತ್ತರ ಶಿಕ್ಷಣದವರೆಗೂ ಕನ್ನಡ ಮಾಧ್ಯಮದಲ್ಲಿಯೇ ಓದಿದ್ದು ಎಂಬುದನ್ನು ಅವರು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.
ಇದೇ ವಿಶ್ವವಿದ್ಯಾಲಯದಲ್ಲಿ ಅಟೆಂಡರ್ ಆಗಿರುವ ನೌಕರನ ಮಗಳು ಗೀತಾ ಜಾಮದಾರ್ ಅರ್ಥಶಾಸ್ತ್ರದಲ್ಲಿ ಮೂರು ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. ಚಂದ್ರಕಲಾ ತಡಕಲ್ ಸಮಾಜಶಾಸ್ತ್ರ ಎಂಎನಲ್ಲಿ ನಾಲ್ಕು ಚಿನ್ನದ ಪದಕಗಳನ್ನು ಗಳಿಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications