ಸೋನಿಯಾ ಗಾಂಧಿಗೆ ಪತ್ರ: ವರದಿ ವಿರುದ್ಧ ದೂರು ನೀಡಿದ ಎಂ.ಬಿ.ಪಾಟೀಲ
ವಿಜಯಪುರ, ಏಪ್ರಿಲ್ 16: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ಹಾಲಿ ಗೃಹಸಚಿವ ಎಂಬಿ ಪಾಟೀಲ ಅವರು 2017 ರ ಜುಲೈ ತಿಂಗಳಿನಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರದ ಕುರಿತು ಖುದ್ದು ಎಂಬಿ ಪಾಟೀಲರೇ ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
2017 ರ ಜುಲೈ ತಿಂಗಳಿನಲ್ಲಿ ಲಿಂಗಾಯಿತ ಪ್ರತ್ಯೇಕ ಧರ್ಮದ ಕುರಿತು ಪತ್ರವೊಂದನ್ನು ಎಂಬಿ ಪಾಟೀಲರು ಬರೆದಿದ್ದರು ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಈ ವರದಿಯ ವಿರುದ್ಧ ಪಾಟೀಲರು ಪೊಲೀಸರಿಗೆ ದೂರು ನೀಡಿದ್ದಾರೆ.
ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಗೆ ಅವರು ದೂರು ನೀಡಿದ್ದು, ಚುನಾವಣೆಯ ಸಮಯದಲ್ಲಿ ತಮ್ಮ ವ್ಯಕ್ತಿತ್ವಕ್ಕೆ ಚ್ಯುತಿಯಾಗುವಂತೆ ಮಾಡಿದ ಈ ವರದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂಬಿ ಪಾಟೀಲ್ ಮನವಿ ಮಾಡಿದ್ದಾರೆ.

ತೇಜೋವಧೆಗಾಗಿ ಷಡ್ಯಂತ್ರ
ನಾನು ಮಲ್ಲನಗೌಡ ತಂದೆ ಬಸನಗೌಡ ಪಾಟೀಲ, ವಯಸ್ಸು 54 ವರ್ಷ, ಅಧ್ಯಕ್ಷರು, ಬಿಎಲ್ ಡಿಇ ಸಂಸ್ಥೆ, ವಿಜಯಪುರ ಕೊಡುವ ಫಿರ್ಯಾದಿ ಏನಂದರೇ...
ಇಂದು ಪತ್ರಿಕೆಯೊಂದರಲ್ಲಿ ನಾನು ಸೋನಿಯಾ ಗಾಂಧಿ ಅವರಿಗೆ ಬರೆದಿದ್ದೇನೆ ಎನ್ನಲಾದ ಪತ್ರದ ಬಗ್ಗೆ ಲೇಖನವೊಂದನ್ನು ಪ್ರಕಟಿಸಲಾಗಿದೆ. ದಿನಾಂಕ 10.07.2017 ರಂದು ಬಿ ಎಲ್ ಡಿ ಇ ಸಂಸ್ಥೆ, ವಿಜಯಪುರ ಇದರ ಲೆಟರ್ ಹೆಡ್ ನಲ್ಲಿ ಅವರು ಸೂಚಿಸಿದಂತೆ ಗ್ಲೋಬಲ್ ಕ್ರಿಸ್ಚಿಯನ್ ಕೌನ್ಸಿಲ್ ಮತ್ತು ವರ್ಲ್ಡ್ ಇಸ್ಲಾಮಿಕ್ ಆರ್ಗನೈಸೇಶನ್ ಪ್ರತಿದನಿಧಿಗಳೊಂದಿಗೆ ವಿವರವಾಗಿ ಚರ್ಚಿಸಿ 2019 ರ ಲೋಕಸಭಾ ಮತ್ತು 2018 ರ ಕರ್ನಾಟಕ ವಿಧಾನಸಭಾ ಚುನಾವಣೆಗಳನ್ನು ಗೆಲ್ಲಲು, ಆರೆಸ್ಸೆಸ್ ಬೆಳವಣಿಗೆಯನ್ನು ನಿಯಂತ್ರಿಸಲು ಮತ್ತು ಬಿಜೆಪಿಯನ್ನು ಸೋಲಿಸಲು ಮುಸ್ಲಿಂ ಮತ್ತು ಕ್ರಿಶ್ಚಿಯನ್ ರನ್ನು ಒಗ್ಗೂಡಿಸಿದಲ್ಲಿ ಮತ್ತು ಹಿಂದುಗಳನ್ನು ಅವರ ಜಾತಿ/ಉಪಜಾತಿ/ಪಂಗಡಗಳಲ್ಲಿ ವಿಭಜಿಸಿದರೆ ಮಾತ್ರ ಸಾಧ್ಯವೆಂದು ತಿಳಿಸಿ ಬರೆದಂತೆ ಖೊಟ್ತಿಯಾಗಿ ಸೃಷ್ಟಿಸಿದ ಬಿ ಎಸ್ ಡಿ ಇ ಲೆಟರ್ ಹೆಡ್ ಮೇಲೆ ಫೋರ್ಜರಿ ಮಾಡಿ ತಯಾರಿಸಿದ ಇದು ಪತ್ರವನ್ನು ಪ್ರಕಟಿಸಿರುತ್ತಾರೆ. ಸರದಿ ಪತ್ರವನ್ನು ಕುಚೋದ್ಯತನದಿಂದ ಮತ್ತು ದುರುದ್ದೇಶದಿಂದ ನನ್ನ ಹೆಸರಿಗೆ ಕಳಂಕ ತರುವ, ನನ್ನ ತೇಜೋವಧೆ ಮಾಡುವ ಮತ್ತು ಮತದಾರರಲ್ಲಿ ಗೊಂದಲ ಹುಟ್ಟಿಸುವ ಸಲುವಾಗಿ ಸೃಷ್ಟಿಸಲಾಗಿದೆ.

2018 ರಲ್ಲೂ ಇದನ್ನೇ ಮಾಡಲಾಗಿತ್ತು!
2018 ರ ಕರ್ನಾಟಕ ವಿಧಾನಸಭೆಯ ಚುನಾವಣೆಯಲ್ಲಿ ಮತದಾನದ ಎರಡು ಮೂರು ದಿನದ ಹಿಂದೆ ಈ ತರಹದ ಆರೋಪವನ್ನು ನನ್ನ ಮೇಲೆ ಮಾಡಿ ಇದೇ ಪತ್ರವನ್ನು ಪತ್ರಿಕೆಗಳಲ್ಲಿ ಪ್ರಕಟಿಸಲಾಗಿತ್ತು. ಸದರಿ ಪತ್ರವನ್ನು ಕುಚೋದ್ಯದಿಂದ ಸೃಷ್ಟಿಮಾಡಲಾಗಿದೆ ಎಂದು ನಾನು ಸ್ಪಷ್ಟನೆ ನೀಡುತ್ತೇನೆ.

ಗೊಂದಲ ಹುಟ್ಟಿಸುವ ಉದ್ದೇಶ
ವಸ್ತುಸ್ಥಿತಿ ಹೀಗಿರುವಾಗ ಮೇ 18 ಮತ್ತು 23 ರಂದು ಕರ್ನಾಟದಲ್ಲಿ ಮತದಾನ ಇರುವಾಗ ಮತದಾರರಲ್ಲಿ ಗೊಂದಲ ಹುಟ್ಟಿಸಲು ಮತ್ತು ನನ್ನ ಗೌರವಕ್ಕ ಕಳಂಕ ತರುವ ಉದ್ದೇಶದಿಂದ ಪತ್ರ ಪ್ರಕಟಿಸಲಾಗಿದೆ.

ಕಾಕೂನು ಕ್ರಮ ಕೈಗೊಳ್ಳಿ
ಸದರಿ ಪತ್ರವನ್ನು ನಾನು ಬರೆದಿಲ್ಲ. ನಾಣು ಬರೆದಂತೆ ಅದನ್ನು ಖೊಟ್ಟಿಯಾಗಿ, ಕುಚೋದ್ಯತನದಿಂದ ನನ್ನ ತೇಜೋವಧೆ ಮಾಡಲು ಮತ್ತು ಮತದಾರರಲ್ಲಿ ಗೊಂದಲ ಮೂಡಿಸಲು ಸೃಷ್ಟಿಸಿದ್ದು, ಅದರ ಕುರಿತು ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕಾನೂನಿನ ಅಡಿ ಕ್ರಮ ಕೈಗೊಳ್ಳಬೇಕಾದಿ ಫಿರ್ಯಾದಿ.
-
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ









Click it and Unblock the Notifications