ಮೃತ್ಯುಂಜಯ ಸ್ವಾಮಿ ಹೇಳಿಕೆ ಸಮರ್ಥಿಸಿಕೊಂಡ ಎಂ.ಬಿ ಪಾಟೀಲ್
Recommended Video

ವಿಜಯಪುರ, ನವೆಂಬರ್, 6 : ಪಂಚಮಸಾಲಿ ಪೀಠದ ಮೃತ್ಯುಂಜಯ ಸ್ವಾಮೀಜಿಯ ವಿವದಾತ್ಮಕ ಹೇಳಿಕೆಯನ್ನು ಸಚಿವ ಎಂ ಬಿ ಪಾಟೀಲ ಸಮರ್ಥಿಸಿಕೊಂಡಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಬಿ ಪಾಟೀಲ್, "ಅಪ್ಪ ಎನ್ನುವ ಪದ ಗೌರವದ ಸಂಕೇತ. ಇದನ್ನೇ ದೊಡ್ಡದು ಮಾಡೋದು ಸರಿಯಲ್ಲ. ಪಂಚಮಸಾಲಿ ಶ್ರೀಗಳ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿಕೊಂಡಿವೆ" ಎಂದು ಸಮರ್ಥನೆ ನೀಡಿದರು.

ವೀರಶೈವರಿಗೆ 5 ಪೀಠಗಳಿದ್ದು, ಐವರು ಗುರುಗಳು. ಲಿಂಗಾಯತರಿಗೆ ಬಸವಣ್ಣ ಒಬ್ಬರೇ ಗುರು ಎನ್ನುವ ಅರ್ಥದಲ್ಲಿ ಶ್ರೀಗಳು ಮಾತನಾಡಿದ್ದಾರೆ. ಇದರಲ್ಲಿ ಯಾವುದೇ ದುರುದ್ದೇಶ, ಕೀಳು ಭಾವನೆ ಇಲ್ಲ ಎಂದು ಸಮರ್ಥಿಸಿಕೊಂಡರು.
ಮಾತಾ ಮಹಾದೇವಿ ವಿರುದ್ಧ ಅನೈತಿಕ ಸಂಬಂಧದ ಆರೋಪ ಮಾಡಿದಾಗ ಮಾಧ್ಯಮಗಳು ಎಲ್ಲಿ ಹೋಗಿದ್ದವು ಎನ್ನುವ ಮೂಲಕ ಮಾಧ್ಯಮಗಳ ಮೇಲೆ ಗೂಬೆ ಕೂರಿಸಲು ಯತ್ನಿಸಿದರು.
"ಐದು ತಂದೆಗೆ ಹುಟ್ಟಿದವರು ವೀರಶೈವರು. ಒಬ್ಬ ತಂದೆಗೆ ಹುಟ್ಟಿದವರು ಲಿಂಗಾಯತರು" ಎಂದು ಭಾನುವಾರ ಹುಬ್ಬಳ್ಳಿಯಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ಹೇಳಿ ವಿವಾದ ಸೃಷ್ಟಿಸಿದ್ದರು.
ಇನ್ನು ಬರುವ ಡಿಸೆಂಬರ್ 10 ರಂದು ವಿಜಯಪುರದಲ್ಲಿ ಬೃಹತ್ ಲಿಂಗಾಯತ ಸಮಾವೇಶ ಹಮ್ಮಿಕೊಳ್ಳಲಾಗ್ತಿದೆ. ಹೋರಾಟ ಎಲ್ಲಿಯೂ ದಾರಿ ತಪ್ಪಿಲ್ಲ. ಇನ್ನು ಬಬಲೇಶ್ವರ ಕ್ಷೇತ್ರದಿಂದ 50 ಸಾವಿರ ಲೀಡ್ ನಲ್ಲಿ ಗೆದ್ದು ಬರೋದು ನಿಶ್ಚಿತ. ತಲೆಕೆಳಗೆ ಕಾಲು ಮೇಲೆ ಮಾಡಿದರೂ ನನ್ನನ್ನ ಸೋಲಿಸೋದಕ್ಕೆ ಸಾಧ್ಯವಿಲ್ಲ ಎಂದು ಎಂಬಿ ಪಾಟೀಲ್ ಸವಾಲು ಎಸೆದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications