ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರ : ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಕಿ ಹಚ್ಚಿ ಅಪ್ರಾಪ್ತೆ ಹತ್ಯೆ

|
Google Oneindia Kannada News

ವಿಜಯಪುರ, ಡಿಸೆಂಬರ್ 03 : ಅಪ್ರಾಪ್ತ ಬಾಲಕಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಧಾರುಣ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಕೊಲೆಯಾದ ಬಾಲಕಿಯನ್ನು ರತ್ನಾಪುರ ಗ್ರಾಮದ ಪ್ರಾಜಕ್ತಾ ಬಲಭೀಮ ನರಳೆ (14) ಎಂದು ಗುರುತಿಸಲಾಗಿದೆ. ಶಂಕರ್ ಹಿಪ್ಪರಕರ, ಮೋಹನ್ ಎಡವೆ ಎಂಬ ಇಬ್ಬರು ಬಾಲಕಿ ಮನೆಗೆ ನುಗ್ಗಿ ಸೀಮೆಎಣ್ಣೆ ಸುರಿದು, ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ.

ಬೀದರ್ ಇಬ್ಬರು ಮಹಿಳೆಯರು ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವುಬೀದರ್ ಇಬ್ಬರು ಮಹಿಳೆಯರು ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು

ಶಂಕರ್ ಹಿಪ್ಪರಕರ, ಮೋಹನ್ ಎಡವೆ ಪ್ರೀತಿಸುವಂತೆ ಬಾಲಕಿಯನ್ನು ಪೀಡಿಸುತ್ತಿದ್ದರು. ಆದರೆ, ಬಾಲಕಿ ಇದಕ್ಕೆ ನಿರಾಕರಿಸಿದ್ದಾಳೆ. ಶುಕ್ರವಾರ ಹೀಗೆ ಆಕೆಗೆ ಇಬ್ಬರೂ ಕಿರುಕುಳ ನೀಡಿದ್ದಾರೆ. ಮನೆಯಲ್ಲಿ ವಿಷಯ ತಿಳಿಸದಂತೆ ಬೆದರಿಕೆ ಹಾಕಿದ್ದರು.

ವಿಜಯಪುರದಲ್ಲೊಂದು ಮರ್ಯಾದಾ ಹತ್ಯೆ, ಮಗಳನ್ನು ಕೊಂದ ತಾಯಿವಿಜಯಪುರದಲ್ಲೊಂದು ಮರ್ಯಾದಾ ಹತ್ಯೆ, ಮಗಳನ್ನು ಕೊಂದ ತಾಯಿ

Minor girl murdered in Vijayapura, two arrested

ಶನಿವಾರ ಬಾಲಕಿ ಶಾಲೆಗೆ ಹೋಗಿರಲಿಲ್ಲ. ಪೋಷಕರು ಕೇಳಿದಾಗ ಶಂಕರ್ ಹಿಪ್ಪರಕರ, ಮೋಹನ್ ಎಡವೆ ಕಿರುಕುಳ ನೀಡುವ ವಿಚಾರ ಹೇಳಿದ್ದಳು. ಈ ವಿಷಯ ಆರೋಪಿಗಳಿಗೂ ತಿಳಿದಿತ್ತು.

ವಿಜಯಪುರ ಬೆಚ್ಚಿ ಬೀಳಿಸಿದ್ದ ಚಡಚಣ ಸಹೋದರರ ಹತ್ಯೆಗೆ 1 ವರ್ಷವಿಜಯಪುರ ಬೆಚ್ಚಿ ಬೀಳಿಸಿದ್ದ ಚಡಚಣ ಸಹೋದರರ ಹತ್ಯೆಗೆ 1 ವರ್ಷ

ಭಾನುವಾರ ಸಂಜೆ ಯಾರೂ ಇಲ್ಲದ ಸಮಯದಲ್ಲಿ ಬಾಲಕಿ ಮನೆಗೆ ಬಂದ ದುಷ್ಕರ್ಮಿಗಳು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಆಕೆಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು. ಸೋಮವಾರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಶಂಕರ್ ಹಿಪ್ಪರಕರ, ಮೋಹನ್ ಎಡವೆ ಇಬ್ಬರಿಗೂ ಮದುವೆಯಾಗಿತ್ತು. ಆದರೂ ಪ್ರೀತಿಸುವಂತೆ ಬಾಲಕಿಯನ್ನು ಪೀಡಿಸುತ್ತಿದ್ದರು. ತಿಕೋಟಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

English summary
14-year-old girl murdered by two persons for not accepting love proposal in Vijayapura district. Case registered in Thikota police station and accused arrested.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X