ವಿದ್ಯುತ್ ಅವಘಡ: ಹೊತ್ತಿ ಉರಿದ ಕೊಟ್ಟಿಗೆ, ಹತ್ತಕ್ಕೂ ಹೆಚ್ಚು ಜಾನುವಾರುಗಳು ಸಜೀವ ದಹನ
ವಿಜಯನಗರ, ಜುಲೈ 21: ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿಕೊಂಡ ಬೆಂಕಿಯಿಂದ ಹತ್ತಕ್ಕೂ ಹೆಚ್ಚು ಜಾನುವಾರುಗಳು ಸಜೀವ ದಹನವಾಗಿರುವ ಘಟನೆ ವಿಜಯನಗರಯ ಹರಪನಹಳ್ಳಿ ತಾಲೂಕಿನ ಉಪ್ಪಾರಗೇರಿ ಬಳಿ ನಡೆದಿದೆ.
ಉಪ್ಪಾರಗೇರಿಯ ಗೌಳಿ ಬಸಪ್ಪ ಎನ್ನುವವರ ಮನೆಯಲ್ಲಿ ತಲೆತಲಾಂತರಿಂದ ಹೈನುಗಾರಿಕೆ ಮಾಡುತ್ತಿದ್ದಾರೆ. ಹೀಗಾಗಿ ಮನೆಯಲ್ಲಿ ಹತ್ತಾರು ಹಸು, ಎಮ್ಮೆಗಳನ್ನು ಸಾಕಲಾಗಿತ್ತು. ನಿನ್ನೆ ಜಿಟಿ ಜಿಟಿ ಮಳೆಯಾಗಿದ್ದರಿಂದ ಜಾನುವಾರಗಳಿದ್ದ ಕೊಟ್ಟಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಕೊಟ್ಟಿಗೆಯಲ್ಲಿ ಮೆಕ್ಕೆ ಜೋಳದ ಪೈರು ಹಾಗೂ ಹಸುಗಳ ಮೇವನ್ನು ಇರಿಸಲಾಗಿತ್ತು.

ಹೀಗಾಗಿ ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದಂತೆ ಕೊಟ್ಟಿಯ ಒಂದು ಭಾಗ ಬಹುತೇಕ ಹೊತ್ತಿ ಉರಿದಿದೆ. ಜಾನುವಾರುಗಳನ್ನು ಬಿಗಿಯಾಗಿ ಕಟ್ಟಿದ್ದರಿಂದ ಬೆಂಕಿ ಹೊತ್ತಿಕೊಂಡು ಕಟ್ಟಿದ ಸ್ಥಳದಲ್ಲೇ ಒದ್ದಾಡಿ ಸಜೀವ ದಹನವಾಗಿವೆ. ದುರಾದೃಷ್ಟವಶಾತ್ ರಾತ್ರಿ ವೇಳೆ ಅವಘಡ ಸಂಭವಿಸಿದ್ದರಿಂದ ಗೌಳಿ ಬಸಪ್ಪ ಅವರ ಹಾಗೂ ಮನೆಯವರ ಅರಿವಿಗೆ ಬಂದಿಲ್ಲ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.
ಘಟನೆಯಲ್ಲಿ ಆರು ಎಮ್ಮೆಗಳು, ಎರಡು ಹಸು, ಮೂರರಿಂದ ನಾಲ್ಕು ಕರುಗಳು ಸಜೀವ ದಹನವಾಗಿದೆ. ಇನ್ನು ಕೆಲವು ಜಾನುವಾರುಗಳಿಗೆ ಸುಟ್ಟ ಗಾಯಗಳಾಗಿದೆ. ಬೆಂಕಿಗಾಹುತಿಯಾಗಿರುವ ಜಾನುವಾರುಗಳ ಮೃತದೇಹಗಳು ನೋಡುಗರ ಮನ ಕಲುಕುವಂತಿದೆ. ಬೆಂಕಿ ಅವಘಡದಿಂದ ಮಾಲೀಕರಿಗೆ ಎರಡು ಲಕ್ಷಕ್ಕೂ ಅಧಿಕ ನಷ್ಟವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹತ್ತಕ್ಕೂ ಹೆಚ್ಚು ಜಾನುವಾರುಗಳ ಸಾವಿನಿಂದ ರೈತ ಗೌಳಿ ಬಸಪ್ಪ ಕಂಗಾಲಾಗಿದ್ದಾರೆ.

ಹೈನುಗಾರಿಕೆಯನ್ನೇ ನಂಬಿಕೊಂಡಿದ್ದ ಕುಟುಂಬಕ್ಕೆ ಜಾನುವಾರುಗಳ ಸಾವು ಬರ ಸಿಡಿಲು ಬಡಿದಂತಾಗಿದ್ದು, ನಡೆಯಬಾರದ ಘಟನೆ ನಡೆದಿದೆ ಎಂದು ಗೌಳಿ ನಾಗಪ್ಪ ಅವರ ಕುಟುಂಬ ನೋವು ತೋಡಿಕೊಂಡಿದ್ದಾರೆ. ಈ ಘಟನೆಯ ಬಗ್ಗೆ ತಿಳಿದು ಸರ್ಕಾರ ಸೂಕ್ತ ಪರಿಹಾರ ಒದಗಿಸಿ ಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications