ವಿಜಯಪುರದ ಹೆದ್ದಾರಿಯೊಂದರಲ್ಲಿ ಮೊಸಳೆ ಕಂಡು ಬೆಚ್ಚಿಬಿದ್ದ ವಾಹನ ಸವಾರರು!
ಬೆಳಗಿನ ಜಾವ ವಿಜಯಪುರದ ಕೊಲ್ಹಾ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಮೇಲೆ ಮೊಸಳೆಯೊಂದು ಪ್ರತ್ಯಕ್ಷವಾಗಿದೆ.
ವಿಜಯಪುರದ ಕೊಲ್ಹಾ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 218ರ ಕೃಷ್ಣಾ ನದಿ ಸೇತುವೆ ಮೇಲೆ ಇಂದು ಬೆಳಗಿನ ಜಾವ ದೊಡ್ಡ ಮೊಸಳೆಯೊಂದು ಕಂಡುಬಂದಿದೆ. ವಾಹನ ಸವಾರರು ಬೃಹತ್ ಮೊಸಳೆ ಕಂಡು ವೆಚ್ಚಿಬಿದ್ದಿದ್ದಾರೆ.
ನಡುರಸ್ತೆಯಲ್ಲಿ ಪತ್ತೆಯಾದ ಮೊಸಳೆ ಬಾಯಿಗೆ ಹಗ್ಗ ಕಟ್ಟಿರುವುದು ಕಂಡುಬಂದಿದೆ. ಇದರ ಬಾಯಿಗೆ ಹಗ್ಗ ಕಟ್ಟಿದ್ದರಿಂದ ಆಹಾರ ಸೇವಿಸಲು ಸಾಧ್ಯವಾಗದೆ ರಸ್ತೆಗೆ ಬಂದಿರಬಹುದು ಎಂದು ಅನುಮಾನಿಸಲಾಗಿದೆ. ಅಲ್ಲದೇ ಜನವಸತಿ ಪ್ರದೇಶಕ್ಕೆ ನುಗ್ಗಿರುವಾಗ ಹಿಡಿದು ಹಗ್ಗ ಕಟ್ಟಿ ತಂದು ರಸ್ತೆ ಮೇಲೆ ಬಿಟ್ಟಿರಬಹುದು ಎಂದು ಕೂಡ ಶಂಕಿಸಲಾಗಿದೆ.

ಕೊಲ್ಹಾ ಪಟ್ಟಣ ಹೊರವಲಯದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೆ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸ್ಥಳೀಯ ಯುವಕರ ಸಹಾಯದಿಂದ ಮೊಸಳೆಯನ್ನು ಹಗ್ಗದಿಂದ ರಸ್ತೆ ದಂಡೆಗೆ ಸರಿಸಿದ್ದಾರೆ. ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿ ಮೊಸಳೆಯನ್ನು ರಕ್ಷಿಸಿ ನದಿಗೆ ಬಿಟ್ಟಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications