ವಿಜಯಪುರದಲ್ಲೊಂದು ಮರ್ಯಾದಾ ಹತ್ಯೆ, ಮಗಳನ್ನು ಕೊಂದ ತಾಯಿ!
ವಿಜಯಪುರ, ನವೆಂಬರ್ 09 : ವಿಜಯಪುರದಲ್ಲಿ ನಡೆದ ಗರ್ಭಿಣಿ ಮಹಿಳೆ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಹಿಳೆಯ ತಾಯಿಯೇ ಹತ್ಯೆ ಮಾಡಿರುವುದು ಸಾಬೀತಾಗಿದ್ದು, ಇದೊಂದು ಮರ್ಯಾದಾ ಹತ್ಯೆ ಪ್ರಕರಣವಾಗಿದೆ.
ವಿಜಯಪುರ ಜಿಲ್ಲೆಯ ಯಗಲೂರು ಗ್ರಾಮದಲ್ಲಿ 4 ತಿಂಗಳ ಗರ್ಭಿಣಿ ರೇಣುಕಾ ಅವರನ್ನು ನವೆಂಬರ್ 6ರಂದು ಹತ್ಯೆ ಮಾಡಲಾಗಿತ್ತು. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರೇಣುಕಾ ತಾಯಿ ಶಿವಲಿಂಗಮ್ಮ ಅವರನ್ನು ಬಂಧಿಸಿದ್ದಾರೆ.
ನಿಡಗುಂದಿ ಪೊಲೀಸರ ತನಿಖೆ ವೇಳೆ ಇದೊಂದು ಮರ್ಯಾದಾ ಹತ್ಯೆ ಎಂಬುದು ದೃಢಪಟ್ಟಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆದಿದೆ.

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕ್ಯಾದಿಗೇರಾ ಗ್ರಾಮದ ರೇಣುಕಾ ಅವರು ಸಿರವಾರ ಗ್ರಾಮದ ಶಂಕರ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ಪತಿಯ ಜೊತೆ ಯಗಲೂರು ಗ್ರಾಮದಲ್ಲಿ 2 ವರ್ಷಗಳಿಂದ ವಾಸವಾಗಿದ್ದರು.
ಅನ್ಯಜಾತಿಯ ಯುವಕನನ್ನು ಪ್ರೀತಿಸಿ ಗ್ರಾಮವನ್ನು ತೊರೆದು ಬಂದಿದ್ದ ರೇಣುಕಾ ಅವರ ಮೇಲೆ ಕುಟುಂಬದವರಿಗೆ ಸಿಟ್ಟಿತ್ತು. ಮಗಳು ನಮ್ಮ ಮರ್ಯಾದೆ ಹಾಳು ಮಾಡಿದ್ದಾಳೆ ಎಂದು ಅವರು ದ್ವೇಷ ಸಾಧಿಸುತ್ತಿದ್ದರು.
ನವೆಂಬರ್ 6ರಂದು ಶಿವಲಿಂಗಮ್ಮ ಅವರು ಕ್ಯಾದಿಗೇರಾ ಗ್ರಾಮದಿಂದ ಯಗಲೂರು ಗ್ರಾಮಕ್ಕೆ ಆಗಮಿಸಿದ್ದಾರೆ. ರೇಣುಕಾ ಪತಿ ಮನೆಯಿಂದ ಹೊರಹೋಗಿದ್ದ ಸಂದರ್ಭದಲ್ಲಿ ಚಾಕುವಿನಿಂದ ರೇಣುಕಾ ಕತ್ತು ಸೀಳಿ ಕೊಲೆ ಮಾಡಿದ್ದಾರೆ.
ಈ ಕೊಲೆಗೆ ಶಿವಲಿಂಗಮ್ಮ ಮತ್ತೊಬ್ಬ ಅಳಿಯ, ಮಗ ಸಹ ಸಹಾಕರ ನೀಡಿದ್ದು, ಪೊಲೀಸರು ಮೂವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications