Basanagouda Yatnal: ಯತ್ನಾಳ್ ವಿರುದ್ಧ ಕ್ರಮ ಇಲ್ಲ: ಬಿಜೆಪಿ ಹೈಕಮಾಂಡ್ ಹಿಂದೇಟಿಗೆ ಇದೇ ಕಾರಣ!
Basanagouda Yatnal: ಬಿಜೆಪಿ ಪ್ರಭಾವಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜಿಪಿ ರಾಜ್ಯಾಧ್ಯಕ್ಷ ಹಾಗೂ ಬಿಜೆಪಿ ಹೈಕಮಾಂಡ್ ವಿರುದ್ಧ ಹೇಳಿಕೆಗಳನ್ನು ಕೊಡುತ್ತಿದ್ದರೂ ಅವರ ಮೇಲೆ ಯಾವ ಕಾರಣಕ್ಕೆ ಕ್ರಮ ಆಗಿಲ್ಲ ಎನ್ನುವುದು ಇದೀಗ ಬಹಿರಂಗವಾಗಿದೆ. ಹೌದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿದ್ದರೂ ಅವರ ಮೇಲೆ ಕ್ರಮ ಆಗಿಲ್ಲ. ಇಷ್ಟೆಲ್ಲ ವಿವಾದಾತ್ಮಕ ಹಾಗೂ ಪಕ್ಷ ವಿರೋಧ ಹೇಳಿಕೆಯನ್ನು ಕೊಟ್ಟರೂ ಯತ್ನಾಳ್ ಅವರ ಮೇಲೆ ಯಾವ ಕಾರಣಕ್ಕೆ ಕ್ರಮ ಆಗಿಲ್ಲ ಎನ್ನುವ ರಹಸ್ಯ ಇದೀಗ ಬಹಿರಂಗವಾಗಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ಆಯ್ಕೆಯಾದಾಗಿನಿಂದಲೂ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಅಲ್ಲದೆ ಬಿಜೆಪಿ ಹೈಕಮಾಂಡ್ ವಿರುದ್ಧವೂ ಅವರು ಗುಡುಗಿರುವುದು ಇದೆ. ಇದೀಗ ಅವರ ವಿರುದ್ಧ ಯಾವ ಕಾರಣಕ್ಕೆ ಕ್ರಮ ತೆಗೆದುಕೊಳ್ಳಲಾಗಿಲ್ಲ ಎನ್ನುವ ಅಚ್ಚರಿಯ ಕಾರಣ ಬಹಿರಂಗವಾಗಿದೆ. ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಂಡರೆ ಪ್ರಾದೇಶಿಕ ಪಕ್ಷವನ್ನು ರಚನೆ ಮಾಡುವುದಾಗಿ ಅವರು ಹೇಳಿದ್ದರಿಂದಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಲಾಗುತ್ತಿದೆ.

ಯಾವುದೇ ಕಾರಣಕ್ಕೂ ಬಿ.ವೈ.ವಿಜಯೇಂದ್ರ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಆಗಲ್ಲ. ಒಂದೊಮ್ಮೆ ಪಕ್ಷ ಉಚ್ಚಾಟನೆ ಮಾಡಿದರೆ ಸಹ ಹೆಚ್ಚು ತಲೆಕೆಡಿಸಿಕೊಳ್ಳಲ್ಲ. ನನಗೆ ರಾಜಕೀಯವಾಗಿ ಹಲವು ಆಯ್ಕೆಗಳು ಇವೆ. ಹಿಂದುತ್ವ ಸಿದ್ಧಾಂತವನ್ನಾಗಿರಿಸಿಕೊಂಡು ಪ್ರಾದೇಶಿಕ ಪಕ್ಷ ಕಟ್ಟಲು ಅವಕಾಶ ಇದೆ. ಸ್ವಂತ ಅಥವಾ ಪ್ರಾದೇಶಿಕ ಪಕ್ಷವನ್ನು ಪ್ರಾರಂಭಿಸಿದರೆ 60ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಾಗಿಯೂ ಅವರು ಹೇಳಿದ್ದರು ಎನ್ನಲಾಗಿದ್ದು. ಇದನ್ನು ಮುಕುಂದ ಅವರು ಬಿಜೆಪಿ ಹೈಕಮಾಂಡ್ಗೆ ಹೇಳಿದ್ದರು ಎನ್ನಲಾಗಿದೆ. ಇದು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದೆ.
ನೋಟಿಸ್ ನೀಡಿದ ಬೆನ್ನಲ್ಲೇ ಸಭೆ: ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ನಿಂದ ನೋಟಿಸ್ ಬಂದ ಮೇಲೆ ಈ ಸಂಬಂಧ ಚರ್ಚೆ ನಡೆದಿದೆ ಎನ್ನಲಾಗಿದೆ. ಅಲ್ಲದೆ ಬಸನಗೌಡ ಪಾಟೀಲ್ ಯತ್ನಾಳ್ ಬಣವು ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಮೊರೆ: ಇನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಬದಲಾಯಿಸುವುದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಬಣವು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಸಹ ಸಂಪರ್ಕಿಸಿದ್ದರು ಎಂದು ಹೇಳಲಾಗಿದೆ. ದೇವೇಂದ್ರ ಫಡ್ನವಿಸ್ ಅವರ ಮೂಲಕ ಬಿಜೆಪಿ ಹೈಕಮಾಂಡ್ನ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡಲಾಗಿದೆ ಎಂದೂ ಹೇಳಲಾಗಿದೆ. ಇನ್ನು ಹೈಕಮಾಂಡ್ನ ಖಡಕ್ ಸೂಚನೆಯ ಹಿನ್ನೆಲೆಯಲ್ಲಿ ಯತ್ನಾಳ್ ಅವರ ಬಣ ಈಗ ತುಸು ಸೈಲೆಂಟ್ ಆಗಿದೆ ಎನ್ನಲಾಗಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications