Basanagouda Yatnal: ಯತ್ನಾಳ್ ವಿರುದ್ಧ ಕ್ರಮ ಇಲ್ಲ: ಬಿಜೆಪಿ ಹೈಕಮಾಂಡ್ ಹಿಂದೇಟಿಗೆ ಇದೇ ಕಾರಣ!
Basanagouda Yatnal: ಬಿಜೆಪಿ ಪ್ರಭಾವಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜಿಪಿ ರಾಜ್ಯಾಧ್ಯಕ್ಷ ಹಾಗೂ ಬಿಜೆಪಿ ಹೈಕಮಾಂಡ್ ವಿರುದ್ಧ ಹೇಳಿಕೆಗಳನ್ನು ಕೊಡುತ್ತಿದ್ದರೂ ಅವರ ಮೇಲೆ ಯಾವ ಕಾರಣಕ್ಕೆ ಕ್ರಮ ಆಗಿಲ್ಲ ಎನ್ನುವುದು ಇದೀಗ ಬಹಿರಂಗವಾಗಿದೆ. ಹೌದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿದ್ದರೂ ಅವರ ಮೇಲೆ ಕ್ರಮ ಆಗಿಲ್ಲ. ಇಷ್ಟೆಲ್ಲ ವಿವಾದಾತ್ಮಕ ಹಾಗೂ ಪಕ್ಷ ವಿರೋಧ ಹೇಳಿಕೆಯನ್ನು ಕೊಟ್ಟರೂ ಯತ್ನಾಳ್ ಅವರ ಮೇಲೆ ಯಾವ ಕಾರಣಕ್ಕೆ ಕ್ರಮ ಆಗಿಲ್ಲ ಎನ್ನುವ ರಹಸ್ಯ ಇದೀಗ ಬಹಿರಂಗವಾಗಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ಆಯ್ಕೆಯಾದಾಗಿನಿಂದಲೂ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಅಲ್ಲದೆ ಬಿಜೆಪಿ ಹೈಕಮಾಂಡ್ ವಿರುದ್ಧವೂ ಅವರು ಗುಡುಗಿರುವುದು ಇದೆ. ಇದೀಗ ಅವರ ವಿರುದ್ಧ ಯಾವ ಕಾರಣಕ್ಕೆ ಕ್ರಮ ತೆಗೆದುಕೊಳ್ಳಲಾಗಿಲ್ಲ ಎನ್ನುವ ಅಚ್ಚರಿಯ ಕಾರಣ ಬಹಿರಂಗವಾಗಿದೆ. ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಂಡರೆ ಪ್ರಾದೇಶಿಕ ಪಕ್ಷವನ್ನು ರಚನೆ ಮಾಡುವುದಾಗಿ ಅವರು ಹೇಳಿದ್ದರಿಂದಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಲಾಗುತ್ತಿದೆ.

ಯಾವುದೇ ಕಾರಣಕ್ಕೂ ಬಿ.ವೈ.ವಿಜಯೇಂದ್ರ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಆಗಲ್ಲ. ಒಂದೊಮ್ಮೆ ಪಕ್ಷ ಉಚ್ಚಾಟನೆ ಮಾಡಿದರೆ ಸಹ ಹೆಚ್ಚು ತಲೆಕೆಡಿಸಿಕೊಳ್ಳಲ್ಲ. ನನಗೆ ರಾಜಕೀಯವಾಗಿ ಹಲವು ಆಯ್ಕೆಗಳು ಇವೆ. ಹಿಂದುತ್ವ ಸಿದ್ಧಾಂತವನ್ನಾಗಿರಿಸಿಕೊಂಡು ಪ್ರಾದೇಶಿಕ ಪಕ್ಷ ಕಟ್ಟಲು ಅವಕಾಶ ಇದೆ. ಸ್ವಂತ ಅಥವಾ ಪ್ರಾದೇಶಿಕ ಪಕ್ಷವನ್ನು ಪ್ರಾರಂಭಿಸಿದರೆ 60ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಾಗಿಯೂ ಅವರು ಹೇಳಿದ್ದರು ಎನ್ನಲಾಗಿದ್ದು. ಇದನ್ನು ಮುಕುಂದ ಅವರು ಬಿಜೆಪಿ ಹೈಕಮಾಂಡ್ಗೆ ಹೇಳಿದ್ದರು ಎನ್ನಲಾಗಿದೆ. ಇದು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದೆ.
ನೋಟಿಸ್ ನೀಡಿದ ಬೆನ್ನಲ್ಲೇ ಸಭೆ: ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ನಿಂದ ನೋಟಿಸ್ ಬಂದ ಮೇಲೆ ಈ ಸಂಬಂಧ ಚರ್ಚೆ ನಡೆದಿದೆ ಎನ್ನಲಾಗಿದೆ. ಅಲ್ಲದೆ ಬಸನಗೌಡ ಪಾಟೀಲ್ ಯತ್ನಾಳ್ ಬಣವು ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಮೊರೆ: ಇನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಬದಲಾಯಿಸುವುದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಬಣವು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಸಹ ಸಂಪರ್ಕಿಸಿದ್ದರು ಎಂದು ಹೇಳಲಾಗಿದೆ. ದೇವೇಂದ್ರ ಫಡ್ನವಿಸ್ ಅವರ ಮೂಲಕ ಬಿಜೆಪಿ ಹೈಕಮಾಂಡ್ನ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡಲಾಗಿದೆ ಎಂದೂ ಹೇಳಲಾಗಿದೆ. ಇನ್ನು ಹೈಕಮಾಂಡ್ನ ಖಡಕ್ ಸೂಚನೆಯ ಹಿನ್ನೆಲೆಯಲ್ಲಿ ಯತ್ನಾಳ್ ಅವರ ಬಣ ಈಗ ತುಸು ಸೈಲೆಂಟ್ ಆಗಿದೆ ಎನ್ನಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications