'ದೇಶದ್ರೋಹಿಗಳಿಗೆ ಬಿರಿಯಾನಿ ತಿನಿಸೋಲ್ಲ, ಗುಂಡೇಟು ತಿನ್ನಿಸುತ್ತೇವೆ'
ವಿಜಯಪುರ, ಫೆಬ್ರವರಿ 26: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ದ ವಿವಾದಾತ್ಮಾಕ ಹೇಳಿಕೆ ನೀಡಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಾನು ಕ್ಷಮೆ ಕೇಳುವುದಿಲ್ಲ ಎಂದಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ.
Recommended Video
ವಿಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದೊರೆಸ್ವಾಮಿ ಅವರು ಪಾಕ್ ಏಜೆಂಟ್ರಂತೆ ವರ್ತಿಸುವುದನ್ನು ನಾವು ನೋಡಿದ್ದೇವೆ. ಅದನ್ನೇ ನಾನು ಹೇಳಿದ್ದೇನೆ. ನಾನೇಕೆ ಕ್ಷಮೆ ಕೇಳಬೇಕು. ಪ್ರತಿಭಟನೆ ಮಾಡುವವರು ಮಾಡಲಿ ಬಿಡಿ. ಇನ್ನುಂದೆ ದೇಶದ್ರೋಹಿಗಳಿಗೆ ಬಿರಿಯಾನಿ ತಿನ್ನಿಸುವುದಿಲ್ಲ. ಗುಂಡೇಟೇ ತಿನ್ನಿಸುತ್ತೇವೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ವಿಜಯಪುರದಲ್ಲಿ ಮಂಗಳವಾರ 'ಪಾಕ್ ಪರ ಲವ್ ಯು ಪಾಕ್ ಆರ್ಮಿ' ಎಂದು ಪೇಸ್ಬುಕ್ ಪೋಸ್ಟ್ ಹಾಕಿದ್ದರ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುವಾಗ, "ಪಾಕಿಸ್ತಾನ್ ಜಿಂದಾಬಾದ್ ಎನ್ನುವರನ್ನು ಇನ್ಮಂದೆ ಜೈಲಿಗೆ ಕಳಿಸುವುದಿಲ್ಲ. ಗುಂಡೇಟು ನೀಡಿ ಕೊಲ್ಲಲಾಗುವುದು. ಇಂತಹ ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವ ಬೆಂಗಳೂರಿನ ದೊರೆಸ್ವಾಮಿ ಅಂತಹ ಮುದುಕ ಪಾಕಿಸ್ತಾನ್ ಏಜೆಂಟ್ ಇದ್ದಂತೆ' ಎಂದು ಹೇಳಿದ್ದರು.

'ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಸಾಕಷ್ಟು ಜನ ಹೋರಾಟ ಮಾಡಿದ್ದಾರೆ. ದೊರೆಸ್ವಾಮಿ ಒಬ್ಬರೇ ಮಾಡಿಲ್ಲ. ಪಾಕಿಸ್ತಾನ್ ಪರ ಘೋಷಣೆ ಕೂಗುವರನ್ನು ಸಮರ್ಥಿಸಿಕೊಳ್ಳುವುದನ್ನು ನೋಡಿದರೆ ಅವರು ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಹೇಳಿದರು. ಇನ್ಮುಂದೆ ಪಾಕಿಸ್ತಾನ್ ಪರ ಮಾತನಾಡುವರನ್ನು ನೇರವಾಗಿ ಸ್ವರ್ಗಕ್ಕೆ ಕಳಿಸುತ್ತೇವೆ, ಮತ್ತೆಲ್ಲಿಗೂ ಕಳಿಸುವುದಿಲ್ಲ' ಎಂದು ಹೇಳಿದ್ದರು.
ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ವಿಜಯಪುರ ಶಾಸಕ ಯತ್ನಾಳ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications