ರವಿ ಬೆಳಗೆರೆ ಪ್ರಕರಣ: ಮತ್ತೊಬ್ಬ ಆರೋಪಿಯ ಹುಡುಕಾಟ ತೀವ್ರಗೊಳಿಸಿದ ಸಿಸಿಬಿ
ವಿಜಯಪುರ, ಡಿಸೆಂಬರ್ 11 : ಪತ್ರಕರ್ತ ರವಿ ಬೆಳಗೆರೆ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಮತ್ತೊಬ್ಬ ಆರೋಪಿ ವಿಜು ಬಡಿಗೇರ ತಲೆ ಮರೆಸಿಕೊಂಡಿದ್ದ ಆತನ ಶೋಧಕ್ಕಾಗಿ ಸಿಸಿಬಿ ತಂಡ ವಿಜಯಪುರದಲ್ಲಿ ಬೀಡು ಬಿಟ್ಟಿದೆ.
ರವಿ ಬೆಳಗೆರೆ ಇಂದ ಸುನಿಲ್ ಹತ್ಯೆಗೆ ಸುಪಾರಿ ಪಡೆದಿದ್ದ ಎನ್ನಲಾದ ಶಾರ್ಪ್ ಶೂಟರ್ ಶಶಿಧರ್ ಮುಂಡೆವಾಡಿಯ ಅಳಿಯ ಈ ವಿಜು ಬಡಿಗೇರ. ಈತ ಶಶಿಧರ್ ಮುಂಡೆವಾಡಿಯ ಜೊತೆಗೆ ಸುನಿಲ್ ಕೊಲೆ ಮಾಡಲು ಅವರ ಅಪಾರ್ಟ್ಮೆಂಟ್ ಗೆ ತೆರಳಿದ್ದ ಎನ್ನಲಾಗಿದೆ. ಇದಲ್ಲದೆ ಯಲಹಂಕದ ಉದ್ಯಮಿ ಮಗನ ಅಪಹರಣ ಪ್ರಯತ್ನದಲ್ಲಿಯೂ ಸಹಾಯ ಮಾಡಿದ್ದ ಎಂದು ಶಶಿಧರ ಮುಂಡೆವಾಡಿ ಸಿಸಿಬಿಗೆ ಹೇಳಿಕೆ ನೀಡಿದ್ದಾನೆ.

ವಿಜು ಬಡಿಗೇರ ಸುನಿಲ್ ಹತ್ಯೆ ಪ್ರಯತ್ನ ಪ್ರಕರಣದಲ್ಲಿ 3ನೇ ಪ್ರಮುಖ ಆರೋಪಿಯಾಗಿದ್ದು ಅವನ ಬಂಧನ ರವಿ ಬೆಳಗೆರೆ ಪ್ರಕರಣಕ್ಕೆ ಹೆಚ್ಚಿನ ತೂಕ ಒದಗಿಸಲಿದೆ.
ವಿಜಯಪುರದ ಸಿಂಧಗಿ ಪಟ್ಟಣದ ಕಂಟೆಪ್ಪನ ಪ್ಲಾಟ್ ನಲ್ಲಿ ವಿಜು ಬಡಿಗೇರ ಮನೆ ಇದ್ದು, ಆತನ ಮನೆಯ ಮೇಲೆ ಸಿಸಿಬಿ ದಾಳಿ ನಡೆಸಿ ಹುಡುಕಾಟ ನಡೆಸಿತ್ತು. ಆತ ಸಿಂಧಗಿಯಲ್ಲೇ ಅಡಗಿಕೊಂಡಿರಬಹುದು ಎಂದು ಅಂದಾಜಿಸಿರುವ ಸಿಸಿಬಿ ತಂಡ ಇಬ್ಬರು ಸ್ಥಳೀಯ ಮಾಹಿತಿದಾರರ ಸಹಾಯದೊಂದಿಗೆ ವಿಜಯಪುರ ಜಿಲ್ಲೆಯಾದ್ಯಂತ ಹುಡುಕಾಟ ನಡೆಸುತ್ತಿದೆ.
ಸಿಂಧಗಿ ಮತ್ತಿತರೆ ಕಡೆ ವಿಜು ಬಡಿಗೇರಯ ಸ್ನೇಹಿತರು, ಸಂಬಂಧಿಗಳ ಮನೆಗಳ ಮೇಲೆಲ್ಲಾ ದಾಳಿ ನಡೆಸಿ ಸಿಸಿಬಿ ತಂಡ ಹುಡುಕಾಟ ನಡೆಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications