ಅಗ್ನಿಪಥ್ ವಿರೋಧಿಸುವ ಭರದಲ್ಲಿ ಬೆಂಕಿ ಹಚ್ಚುವ ಕೆಲಸ ನಿಲ್ಲಿಸಿ: ಭಗವಂತ ಖೂಬಾ
ವಿಜಯಪುರ, ಜೂ21: ಅಗ್ನಿಪಥ್ ಯೋಜನೆಯನ್ನು ವಿರೋಧಿಸುವ ಭರದಲ್ಲಿ ಬೆಂಕಿ ಹಚ್ಚುವುದು, ಕಲ್ಲು ತೂರಾಟ ಮಾಡುವುದು, ಪ್ರತಿಭಟನೆ ಮಾಡುವುದನ್ನು ಕೈಬಿಡಬೇಕು. ನಿಮ್ಮ ಮೊಸರಿನಲ್ಲಿ ಕಲ್ಲು ಹುಡುಕುವ ಕಾರ್ಯ ಯಶಸ್ವಿಯಾಗುವುದಿಲ್ಲ ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ಅಗ್ನಿಪಥ್ ಯೋಜನೆ ವಿರೋಧ ಹಿನ್ನೆಲೆ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವಿರೋಧ ಪಕ್ಷದವರು ಯುವಕರ ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಇದು ಸ್ವಾಸ್ಥ್ಯ ಸಮಾಜಕ್ಕೆ ಶೋಭೆ ತರುವುದಿಲ್ಲ. ಬೆಂಕಿ ಹಚ್ಚುವುದು, ಕಲ್ಲು ತೂರಾಟ ಮಾಡುವುದು, ಪ್ರತಿಭಟನೆ ಮಾಡುವುದು ಅಲ್ಲ. ಮೊಸರಿನಲ್ಲಿ ಕಲ್ಲು ಹುಡುಕಿ ಯಶಸ್ವಿಯಾಗಲ್ಲ ಎಂದರು. ಆರ್ಎಸ್ಎಸ್ ಅಜೆಂಡಾ ದೇಶದ ಹಿತಕ್ಕಾಗಿ, ದೇಶದ ಭದ್ರತೆಗಾಗಿ ನಿರತವಾಗಿದೆ. ಪ್ರಧಾನಿ ಮೋದಿ ಮೇಲೆ ಸಂಪೂರ್ಣ ವಿಶ್ವಾಸ ಇಡಿ. ರಾಜಕಾರಣ ಮಾಡದೇ ಯುವಕರ ಭವಿಷ್ಯಕ್ಕಾಗಿ ಎಲ್ಲರು ಸಹಕರಿಸಬೇಕು," ಎಂದರು.
ಯೋಜನೆಯಲ್ಲಿ ಆರ್ ಎಸ್ಎಸ್ ಕೈವಾಡ ಇದೆ ಹೇಳಿಕೆ ಸಲ್ಲದು, ಅಗ್ನಿಪಥ ವಿಚಾರದಲ್ಲಿ ರಾಜಕಾರಣ ಮಾಡದೇ ಯುವಕರ ಭವಿಷ್ಯಕ್ಕಾಗಿ ಎಲ್ಲರೂ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು. ಪ್ರತಿಪಕ್ಷಗಳು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದು, ಅದನ್ನು ಮೊದಲು ಕೈಬಿಡಬೇಕು. ಜೊತೆಗೆ ಯುವಕರನ್ನು ದಾರಿತಪ್ಪಿಸುವ ಕೆಲಸ ಮಾಡುವದನ್ನು ಬಿಡಬೇಕು.

ಗೊಬ್ಬರ ಪೂರೈಕೆಯಲ್ಲಿ ಗೊಂದಲ ಸೃಷ್ಟಿಸಬೇಡಿ
ನಾನು ಜಿಲ್ಲೆಗೆ ಆಗಮಿಸುವ ಮುನ್ನವೇ ಕೃಷಿ ಉಪನಿರ್ದೇಶಕರಿಂದ ರಸಗೊಬ್ಬರದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಜಿಲ್ಲೆಯ ರೈತರ ಬೇಡಿಕೆಗಿಂತ ಹೆಚ್ಚು ಗೊಬ್ಬರ ಪೂರೈಕೆಯಾಗಿದೆ. ರೈತರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಸ್ಪಷ್ಟಪಡಿಸಿದರು.

ಮುಂಗಾರು ಬಿತ್ತನೆಗಾಗಿ ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರ ಕೊರತೆ ಇಲ್ಲ. ದೇಶದ ರೈತರು ಯಾವುದೇ ರಾಜಕೀಯ ಗೊಂದಲಕ್ಕೆ ಕಿವಿಕೊಡಬಾರದು ಎಂದು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications